ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವ್ಯಕ್ತಿ ಅನುಮಾನಾಸ್ಪದ ಸಾವು: ಟಿಪ್ಪರ್ ಡಿಕ್ಕಿ ಶಂಕೆ

Published 3 ಜೂನ್ 2023, 14:04 IST
Last Updated 3 ಜೂನ್ 2023, 14:04 IST
ಅಕ್ಷರ ಗಾತ್ರ

ಸಿಂಧನೂರು: ತಾಲ್ಲೂಕಿನ ಹೆಡಗಿನಾಳ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು ಅಕ್ರಮವಾಗಿ ಮರಳು ಸಾಗಾಣೆ ಮಾಡುವ ಟಿಪ್ಪರ್ ಡಿಕ್ಕಿ ಹೊಡೆದಿದೆಯೆಂದು ಶಂಕಿಸಲಾಗಿದೆ.

ತಾಲ್ಲೂಕಿನ ಗಿಣಿವಾರ ಗ್ರಾಮದ ಭೀಮಣ್ಣ ಉಪ್ಪಳೆಪ್ಪ (32) ಮೃತ ವ್ಯಕ್ತಿ.

ರಾತ್ರಿ 2 ಗಂಟೆ ಸುಮಾರಿಗೆ ಅಕ್ರಮವಾಗಿ ಮರಳು ಸಾಗಾಣೆ ಮಾಡುವ ಟಿಪ್ಪರ್, ಮರಳು ತುಂಬುವ ಜೆಸಿಬಿ ಅಥವಾ ಟ್ರ್ಯಾಕ್ಟರ್ ಈ ಮೂರರಲ್ಲಿ ಒಂದು ವಾಹನ ಭೀಮಣ್ಣನನ್ನು ಹತ್ತಿಸಿಕೊಂಡು ಹೆಡಗಿನಾಳಕ್ಕೆ ಹೋಗಿದ್ದು, ಮರಳು ತುಂಬಿಕೊಂಡು ಬರುವ ಸಂದರ್ಭದಲ್ಲಿ ವ್ಯಕ್ತಿಯ ಮೇಲೆ ವಾಹನ ಹತ್ತಿಸಿರಬಹುದು ಎಂದು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆರೋಪಿಸಿದ್ದಾರೆ.

ಸಿಂಧನೂರಿನ ಸಾರ್ವಜನಿಕ ಆಸ್ಪತ್ರೆ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಈ ಕುರಿತು ಬಳಗಾನೂರು ಪೊಲೀಸ್ ಠಾಣೆಗೆ ಕುಟುಂಬಸ್ಥರು ದೂರು ನೀಡಿದ್ದಾರೆ.

ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಹಾಗೂ ಬಿಜೆಪಿ ಮುಖಂಡ ಕೆ.ಕರಿಯಪ್ಪ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಘಟನೆಯ ಮಾಹಿತಿ ಪಡೆದುಕೊಂಡು ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT