<p><strong>ಸಿಂಧನೂರು:</strong> ನಗರದ ಸರ್ಕಾರಿ ಮಹಾವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿನಿ ಶಿಫಾ ಕೊಲೆ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರು ಶುಕ್ರವಾರ ಕಾಲೇಜಿಗೆ ಭೇಟಿ ನೀಡಿ ಪ್ರಾಚಾರ್ಯರು ಹಾಗೂ ಉಪನ್ಯಾಸಕರೊಂದಿಗೆ ಸಭೆ ನಡೆಸಿ ಚರ್ಚಿಸಿದರು.</p>.<p>ಈ ವೇಳೆ ಮಾತನಾಡಿದ ಅವರು, ‘ಕೊಲೆ ಮಾಡಿರುವ ಪೈಶಾಚಿಕ ಕೃತ್ಯ ಖಂಡನೀಯ. ಆರೋಪಿಗೆ ಕಠಿಣ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಸರ್ಕಾರಿ ಮಹಾವಿದ್ಯಾಲಯದಲ್ಲಿ ಕಾರ್ಯನಿರ್ವಹಿಸದ ಸಿಸಿಟಿವಿ ಕ್ಯಾಮೆರಾಗಳನ್ನು ರಿಪೇರಿ ಮಾಡಿಸಬೇಕು. ಹೊಸ ಕ್ಯಾಮೆರಾಗಳನ್ನು ಅಳವಡಿಸಬೇಕು. ಪ್ರತಿ ತಿಂಗಳು ವಿದ್ಯಾರ್ಥಿಗಳ ಹಾಜರಾತಿಯನ್ನು ಅವರ ಸಹಿಯೊಂದಿಗೆ ಪಡೆಯಬೇಕು. ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಮೇಲೆ ನಿಗಾವಹಿಸಬೇಕು. ಅನುಮಾನಾಸ್ಪದವಾಗಿ ಏನಾದರೂ ಕಂಡು ಬಂದಲ್ಲಿ ಅವರ ಪಾಲಕರ ಗಮನಕ್ಕೆ ತರಬೇಕು’ ಎಂದರು.</p>.<p>ಪ್ರಾಂಶುಪಾಲ ಶಿವಯ್ಯ ಎಂ, ಗ್ರಂಥಪಾಲಕ ಯಲ್ಲಪ್ಪ ಗೋನವಾರ, ಪ್ರಾಧ್ಯಾಪಕರಾದ ಹನುಮನಗೌಡ, ಸಿದ್ದರಾಮೇಶ, ಬಿಸಲ್, ವಿಶ್ವನಾಥ ಪಾಟೀಲ್, ಡಾ.ಹುಸೇನಬಾಷಾ, ಶ್ರೀನಿವಾಸ, ಬಸವರಾಜ, ವೆಂಕಟೇಶ ರೆಡ್ಡಿ, ವಿಜಯಲಕ್ಷ್ಮಿ, ಕಾಂಗ್ರೆಸ್ ಮುಖಂಡ ವೀರೇಶ ರಾರಾವಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು:</strong> ನಗರದ ಸರ್ಕಾರಿ ಮಹಾವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿನಿ ಶಿಫಾ ಕೊಲೆ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರು ಶುಕ್ರವಾರ ಕಾಲೇಜಿಗೆ ಭೇಟಿ ನೀಡಿ ಪ್ರಾಚಾರ್ಯರು ಹಾಗೂ ಉಪನ್ಯಾಸಕರೊಂದಿಗೆ ಸಭೆ ನಡೆಸಿ ಚರ್ಚಿಸಿದರು.</p>.<p>ಈ ವೇಳೆ ಮಾತನಾಡಿದ ಅವರು, ‘ಕೊಲೆ ಮಾಡಿರುವ ಪೈಶಾಚಿಕ ಕೃತ್ಯ ಖಂಡನೀಯ. ಆರೋಪಿಗೆ ಕಠಿಣ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಸರ್ಕಾರಿ ಮಹಾವಿದ್ಯಾಲಯದಲ್ಲಿ ಕಾರ್ಯನಿರ್ವಹಿಸದ ಸಿಸಿಟಿವಿ ಕ್ಯಾಮೆರಾಗಳನ್ನು ರಿಪೇರಿ ಮಾಡಿಸಬೇಕು. ಹೊಸ ಕ್ಯಾಮೆರಾಗಳನ್ನು ಅಳವಡಿಸಬೇಕು. ಪ್ರತಿ ತಿಂಗಳು ವಿದ್ಯಾರ್ಥಿಗಳ ಹಾಜರಾತಿಯನ್ನು ಅವರ ಸಹಿಯೊಂದಿಗೆ ಪಡೆಯಬೇಕು. ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಮೇಲೆ ನಿಗಾವಹಿಸಬೇಕು. ಅನುಮಾನಾಸ್ಪದವಾಗಿ ಏನಾದರೂ ಕಂಡು ಬಂದಲ್ಲಿ ಅವರ ಪಾಲಕರ ಗಮನಕ್ಕೆ ತರಬೇಕು’ ಎಂದರು.</p>.<p>ಪ್ರಾಂಶುಪಾಲ ಶಿವಯ್ಯ ಎಂ, ಗ್ರಂಥಪಾಲಕ ಯಲ್ಲಪ್ಪ ಗೋನವಾರ, ಪ್ರಾಧ್ಯಾಪಕರಾದ ಹನುಮನಗೌಡ, ಸಿದ್ದರಾಮೇಶ, ಬಿಸಲ್, ವಿಶ್ವನಾಥ ಪಾಟೀಲ್, ಡಾ.ಹುಸೇನಬಾಷಾ, ಶ್ರೀನಿವಾಸ, ಬಸವರಾಜ, ವೆಂಕಟೇಶ ರೆಡ್ಡಿ, ವಿಜಯಲಕ್ಷ್ಮಿ, ಕಾಂಗ್ರೆಸ್ ಮುಖಂಡ ವೀರೇಶ ರಾರಾವಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>