<p>ಸಿಂಧನೂರು: ‘ದೇಶದ ಸಂಪತ್ತು ಜನರದ್ದು, ಕಾರ್ಪೊರೇಟ್ ಕುಬೇರರದ್ದಲ್ಲ. ದೇಶದ ಜನರನ್ನು ಸಂಕಷ್ಟಕ್ಕೆ ತಳ್ಳಿದ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ಜನರ ಕಷ್ಟಗಳಿಗೆ ಪರಿಹಾರ ನೀಡುವುದನ್ನು ಬಿಟ್ಟು ಜನರ ಬದುಕಿನ ಮೇಲೆಯೇ ಉಪದೇಶ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿ’ ಎಂದು ಸಿಪಿಐಎಂಎಲ್ ರೆಡ್ಸ್ಟಾರ್ ರಾಜ್ಯ ಸಮಿತಿ ಸದಸ್ಯ ಎಂ.ಗಂಗಾಧರ ಟೀಕಿಸಿದ್ದಾರೆ.</p>.<p>ಮಂಗಳವಾರ ಹೇಳಿಕೆ ನೀಡಿರುವ ಅವರು,‘ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿಸಿದವರು ಯಾರು? ಅಡುಗೆ ಅನಿಲವನ್ನು ಸಾಮಾನ್ಯ ಜನರ ಕೈಗೆಟುಕದಂತೆ ಮಾಡಿದವರು ಯಾರು? ನಿರುದ್ಯೋಗದ ಸುನಾಮಿಯನ್ನು ದೇಶದ ಯುವಕರ ಮೇಲೆ ಹೇರಿದವರು ಯಾರು? ಸರ್ಕಾರಿ ಸಂಸ್ಥೆಗಳನ್ನು ಕಾರ್ಪೊರೇಟ್ ಲೂಟಿಕೋರರಿಗೆ ಮಾರಾಟ ಮಾಡಿದವರು ಯಾರು’ ಎಂದು ಪ್ರಶ್ನಿಸಿದ್ದಾರೆ.</p>.<p>ಇವೆಲ್ಲಕ್ಕೂ ಕಾರಣವಾದ ಮೋದಿ ಸರ್ಕಾರವೇ ಈಗ ಪೆಟ್ರೋಲ್ ಕಡಿಮೆ ಬಳಸಿ, ಬಂಗಾರ ಖರೀದಿ ಮಾಡಬೇಡಿ. ಬಸ್-ರೈಲಿನಲ್ಲಿ ಓಡಾಡಿ ಎಂದು ಜನರಿಗೆ ಬೋಧನೆ ಮಾಡುತ್ತಿದೆ. ಇದು ಜನರ ಗಾಯದ ಮೇಲೆ ಉಪ್ಪು ಸವರುವ ತಂತ್ರ ಮತ್ತು ಬಾಣಲೆಯಿಂದ ಬೆಂಕಿಗೆ ತಳ್ಳುವ ಕುತಂತ್ರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-32-1381089856</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿಂಧನೂರು: ‘ದೇಶದ ಸಂಪತ್ತು ಜನರದ್ದು, ಕಾರ್ಪೊರೇಟ್ ಕುಬೇರರದ್ದಲ್ಲ. ದೇಶದ ಜನರನ್ನು ಸಂಕಷ್ಟಕ್ಕೆ ತಳ್ಳಿದ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ಜನರ ಕಷ್ಟಗಳಿಗೆ ಪರಿಹಾರ ನೀಡುವುದನ್ನು ಬಿಟ್ಟು ಜನರ ಬದುಕಿನ ಮೇಲೆಯೇ ಉಪದೇಶ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿ’ ಎಂದು ಸಿಪಿಐಎಂಎಲ್ ರೆಡ್ಸ್ಟಾರ್ ರಾಜ್ಯ ಸಮಿತಿ ಸದಸ್ಯ ಎಂ.ಗಂಗಾಧರ ಟೀಕಿಸಿದ್ದಾರೆ.</p>.<p>ಮಂಗಳವಾರ ಹೇಳಿಕೆ ನೀಡಿರುವ ಅವರು,‘ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿಸಿದವರು ಯಾರು? ಅಡುಗೆ ಅನಿಲವನ್ನು ಸಾಮಾನ್ಯ ಜನರ ಕೈಗೆಟುಕದಂತೆ ಮಾಡಿದವರು ಯಾರು? ನಿರುದ್ಯೋಗದ ಸುನಾಮಿಯನ್ನು ದೇಶದ ಯುವಕರ ಮೇಲೆ ಹೇರಿದವರು ಯಾರು? ಸರ್ಕಾರಿ ಸಂಸ್ಥೆಗಳನ್ನು ಕಾರ್ಪೊರೇಟ್ ಲೂಟಿಕೋರರಿಗೆ ಮಾರಾಟ ಮಾಡಿದವರು ಯಾರು’ ಎಂದು ಪ್ರಶ್ನಿಸಿದ್ದಾರೆ.</p>.<p>ಇವೆಲ್ಲಕ್ಕೂ ಕಾರಣವಾದ ಮೋದಿ ಸರ್ಕಾರವೇ ಈಗ ಪೆಟ್ರೋಲ್ ಕಡಿಮೆ ಬಳಸಿ, ಬಂಗಾರ ಖರೀದಿ ಮಾಡಬೇಡಿ. ಬಸ್-ರೈಲಿನಲ್ಲಿ ಓಡಾಡಿ ಎಂದು ಜನರಿಗೆ ಬೋಧನೆ ಮಾಡುತ್ತಿದೆ. ಇದು ಜನರ ಗಾಯದ ಮೇಲೆ ಉಪ್ಪು ಸವರುವ ತಂತ್ರ ಮತ್ತು ಬಾಣಲೆಯಿಂದ ಬೆಂಕಿಗೆ ತಳ್ಳುವ ಕುತಂತ್ರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-32-1381089856</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>