<p><strong>ಸಿಂಧನೂರು</strong>: ಕಳಪೆ ಬೀಜದಿಂದ ಭತ್ತದ ಬೆಳೆಗೆ ವೈರಸ್ ಹರಡಿದ್ದು ಕಂಪನಿ ಮಾಲೀಕರು ರೈತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಶುಕ್ರವಾರ ಕರ್ನಾಟಕ ರಾಜ್ಯ ರೈತ ಸಂಘದಿಂದ ಗಾಂಧಿನಗರದ ವಿನಾಯಕ ಟ್ರೇಡರ್ಸ್ ಗೊಬ್ಬರದ ಅಂಗಡಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು.</p>.<p>ನೀಲಕಂಠೇಶ್ವರ ಕಂಪನಿಯ ಭತ್ತದ ಬೀಜವನ್ನು ತಾಲ್ಲೂಕಿನ ಅತಿ ಹೆಚ್ಚು ರೈತರು ಖರೀದಿ ಮಾಡಿ ಭತ್ತದ ಬೆಳೆ ಬೆಳೆಸಿದ್ದಾರೆ. ಪ್ರಸ್ತುತ ಕಂಪನಿಯ ಬೀಜಕ್ಕೆ ರೋಗ ನಿಯಂತ್ರಣ ಸಾಮರ್ಥ್ಯ ಇಲ್ಲದಿರುವುದರಿಂದ ವೈರಸ್ ಹರಡಿಕೊಂಡಿದೆ ಎಂದು ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳೇ ತಿಳಿಸಿದ್ದಾರೆ.<br> ಆದ್ದರಿಂದ ನೀಲಕಂಠೇಶ್ವರ ಕಂಪನಿ ಮಾಲೀಕರು ಬೀಜ ಖರೀದಿಸಿದ ರೈತರಿಗೆ ಪರಿಹಾರ ಕೊಡಬೇಕು’ ಎಂದು ರೈತ ಸಂಘದ ಮುಖಂಡರು ಒತ್ತಾಯಿಸಿದರು.</p>.<p>ಪೊಲೀಸ್ ಮತ್ತು ಕೃಷಿ ಅಧಿಕಾರಿಗಳು ಕಂಪನಿಯ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಒಂದು ವಾರ ಸಮಯ ಕೇಳಿದ್ದಾರೆ. ಅಷ್ಟರೊಳಗಾಗಿ ಪರಿಹಾರ ಕೊಡುವ ತೀರ್ಮಾನ ಕೈಗೊಳ್ಳದಿದ್ದರೆ ಉಗ್ರ ಸ್ವರೂಪದ ಹೋರಾಟಕ್ಕಿಳಿಯುವುದಾಗಿ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಿವರಾಜಪ್ಪ ಸಾಸಲಮರಿ ತಿಳಿಸಿದರು.</p>.<p>ಸಂಘದ ತಾಲ್ಲೂಕು ಘಟಕದ ಕಾರ್ಯದರ್ಶಿಗಳಾದ ನಾಗರಾಜ ಬಿಂಗಿ, ಬೀರಪ್ಪ ಹಾಲಾಪೂರ, ಕೊಪ್ಪಳ ಜಿಲ್ಲೆಯ ಕನಕಗಿರಿ, 3ನೇ ಮೈಲ್ಕ್ಯಾಂಪ್ ಸೇರಿದಂತೆ ಹಲವು ಗ್ರಾಮದ ರೈತ ಮುಖಂಡರು ಭಾಗವಹಿಸಿದ್ದರು.</p>.<p>ಮುಖಂಡರಾದ ಈಶಪ್ಪಗೌಡ ಬೇರ್ಗಿ, ರಮೇಶಪ್ಪಗೌಡ ದೇಸಾಯಿ, ಅಮರೇಶ ಗೊರೇಬಾಳ, ನರಸಪ್ಪ ಗೊರೇಬಾಳ, ಅಂಬಣ್ಣ ಯರದಿಹಾಳ, ಶ್ರೀಕಾಂತ ಹಸ್ಮಕಲ್, ಶಿವು ಮುದಗಲ್ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು</strong>: ಕಳಪೆ ಬೀಜದಿಂದ ಭತ್ತದ ಬೆಳೆಗೆ ವೈರಸ್ ಹರಡಿದ್ದು ಕಂಪನಿ ಮಾಲೀಕರು ರೈತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಶುಕ್ರವಾರ ಕರ್ನಾಟಕ ರಾಜ್ಯ ರೈತ ಸಂಘದಿಂದ ಗಾಂಧಿನಗರದ ವಿನಾಯಕ ಟ್ರೇಡರ್ಸ್ ಗೊಬ್ಬರದ ಅಂಗಡಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು.</p>.<p>ನೀಲಕಂಠೇಶ್ವರ ಕಂಪನಿಯ ಭತ್ತದ ಬೀಜವನ್ನು ತಾಲ್ಲೂಕಿನ ಅತಿ ಹೆಚ್ಚು ರೈತರು ಖರೀದಿ ಮಾಡಿ ಭತ್ತದ ಬೆಳೆ ಬೆಳೆಸಿದ್ದಾರೆ. ಪ್ರಸ್ತುತ ಕಂಪನಿಯ ಬೀಜಕ್ಕೆ ರೋಗ ನಿಯಂತ್ರಣ ಸಾಮರ್ಥ್ಯ ಇಲ್ಲದಿರುವುದರಿಂದ ವೈರಸ್ ಹರಡಿಕೊಂಡಿದೆ ಎಂದು ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳೇ ತಿಳಿಸಿದ್ದಾರೆ.<br> ಆದ್ದರಿಂದ ನೀಲಕಂಠೇಶ್ವರ ಕಂಪನಿ ಮಾಲೀಕರು ಬೀಜ ಖರೀದಿಸಿದ ರೈತರಿಗೆ ಪರಿಹಾರ ಕೊಡಬೇಕು’ ಎಂದು ರೈತ ಸಂಘದ ಮುಖಂಡರು ಒತ್ತಾಯಿಸಿದರು.</p>.<p>ಪೊಲೀಸ್ ಮತ್ತು ಕೃಷಿ ಅಧಿಕಾರಿಗಳು ಕಂಪನಿಯ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಒಂದು ವಾರ ಸಮಯ ಕೇಳಿದ್ದಾರೆ. ಅಷ್ಟರೊಳಗಾಗಿ ಪರಿಹಾರ ಕೊಡುವ ತೀರ್ಮಾನ ಕೈಗೊಳ್ಳದಿದ್ದರೆ ಉಗ್ರ ಸ್ವರೂಪದ ಹೋರಾಟಕ್ಕಿಳಿಯುವುದಾಗಿ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಿವರಾಜಪ್ಪ ಸಾಸಲಮರಿ ತಿಳಿಸಿದರು.</p>.<p>ಸಂಘದ ತಾಲ್ಲೂಕು ಘಟಕದ ಕಾರ್ಯದರ್ಶಿಗಳಾದ ನಾಗರಾಜ ಬಿಂಗಿ, ಬೀರಪ್ಪ ಹಾಲಾಪೂರ, ಕೊಪ್ಪಳ ಜಿಲ್ಲೆಯ ಕನಕಗಿರಿ, 3ನೇ ಮೈಲ್ಕ್ಯಾಂಪ್ ಸೇರಿದಂತೆ ಹಲವು ಗ್ರಾಮದ ರೈತ ಮುಖಂಡರು ಭಾಗವಹಿಸಿದ್ದರು.</p>.<p>ಮುಖಂಡರಾದ ಈಶಪ್ಪಗೌಡ ಬೇರ್ಗಿ, ರಮೇಶಪ್ಪಗೌಡ ದೇಸಾಯಿ, ಅಮರೇಶ ಗೊರೇಬಾಳ, ನರಸಪ್ಪ ಗೊರೇಬಾಳ, ಅಂಬಣ್ಣ ಯರದಿಹಾಳ, ಶ್ರೀಕಾಂತ ಹಸ್ಮಕಲ್, ಶಿವು ಮುದಗಲ್ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>