<p><strong>ಸಿಂಧನೂರು:</strong> ತಾಲ್ಲೂಕಿನ ಸಾಲಗುಂದಾ ಬೆಟ್ಟದಲ್ಲಿ ಚಿರತೆಯ ಹೆಜ್ಜೆಗಳು ಪತ್ತೆಯಾಗಿದ್ದು, ಸಾರ್ವಜನಿಕರಿಂದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಇರುವುದನ್ನು ಖಚಿತ ಪಡಿಸಿಕೊಂಡಿದ್ದಾರೆ.</p>.<p>ಇಲಾಖೆಯಿಂದ ಮಂಗಳವಾರ ಡಂಗೂರ ಸಾರಿಸಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.</p>.<p>ಸಾರ್ವಜನಿಕರು ತಮ್ಮ ದನ-ಕರುಗಳು, ಆಡು- ಕುರಿಗಳನ್ನು ಹೊರಗಡೆ ಬಿಡಬಾರದೆಂದು ಅರಣ್ಯಾಧಿಕಾರಿಗಳು ಗ್ರಾಮಸ್ಥರಿಗೆ ತಿಳಿಸಿದ್ದಾರೆ.</p>.<p>ಸಾಲಗುಂದಾ ಪಕ್ಕದಲ್ಲಿರುವ ಗ್ರಾಮಗಳಾದ ಹುಡಾ, ಅಂಬಾಮಠ, ರವುಡಕುಂದ, ಸಿಂಗಾಪುರ, ಮುಕುಂದ ಗ್ರಾಮಗಳು ಸಹ ಬೆಟ್ಟಗುಡ್ಡಗಳಿಂದ ಆವೃತವಾಗಿವೆ. ಅಲ್ಲಿ ಚಿರತೆ, ಕರಡಿ ಸೇರಿ ಇತರೆ ಕಾಡು ಪ್ರಾಣಿಗಳು ಬರುವುದು ಸಹಜವಾಗಿದೆ.</p>.<p>ಯಾವುದೇ ಕಾರಣಕ್ಕೂ ಸಾರ್ವ ಜನಿಕರು ಗುಡ್ಡದ ಕಡೆಗೆ ದನ-ಕುರಿಗಳನ್ನು ಮೇಯಿಸಲು ಹೋಗಬಾರದು. ಗುಡ್ಡದಲ್ಲಿ ಹಲವಾರು ಕಡೆಗಳಲ್ಲಿ ಬೋನು ಇಟ್ಟು ಚಿರತೆಯನ್ನು ಸೆರೆ ಹಿಡಿಯಲಾಗುವುದು ಎಂದು ವಲಯ ಅರಣ್ಯಾಧಿಕಾರಿ ವಿಜಯ ಕುಮಾರ ಹೇಳಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-32-319306014</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು:</strong> ತಾಲ್ಲೂಕಿನ ಸಾಲಗುಂದಾ ಬೆಟ್ಟದಲ್ಲಿ ಚಿರತೆಯ ಹೆಜ್ಜೆಗಳು ಪತ್ತೆಯಾಗಿದ್ದು, ಸಾರ್ವಜನಿಕರಿಂದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಇರುವುದನ್ನು ಖಚಿತ ಪಡಿಸಿಕೊಂಡಿದ್ದಾರೆ.</p>.<p>ಇಲಾಖೆಯಿಂದ ಮಂಗಳವಾರ ಡಂಗೂರ ಸಾರಿಸಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.</p>.<p>ಸಾರ್ವಜನಿಕರು ತಮ್ಮ ದನ-ಕರುಗಳು, ಆಡು- ಕುರಿಗಳನ್ನು ಹೊರಗಡೆ ಬಿಡಬಾರದೆಂದು ಅರಣ್ಯಾಧಿಕಾರಿಗಳು ಗ್ರಾಮಸ್ಥರಿಗೆ ತಿಳಿಸಿದ್ದಾರೆ.</p>.<p>ಸಾಲಗುಂದಾ ಪಕ್ಕದಲ್ಲಿರುವ ಗ್ರಾಮಗಳಾದ ಹುಡಾ, ಅಂಬಾಮಠ, ರವುಡಕುಂದ, ಸಿಂಗಾಪುರ, ಮುಕುಂದ ಗ್ರಾಮಗಳು ಸಹ ಬೆಟ್ಟಗುಡ್ಡಗಳಿಂದ ಆವೃತವಾಗಿವೆ. ಅಲ್ಲಿ ಚಿರತೆ, ಕರಡಿ ಸೇರಿ ಇತರೆ ಕಾಡು ಪ್ರಾಣಿಗಳು ಬರುವುದು ಸಹಜವಾಗಿದೆ.</p>.<p>ಯಾವುದೇ ಕಾರಣಕ್ಕೂ ಸಾರ್ವ ಜನಿಕರು ಗುಡ್ಡದ ಕಡೆಗೆ ದನ-ಕುರಿಗಳನ್ನು ಮೇಯಿಸಲು ಹೋಗಬಾರದು. ಗುಡ್ಡದಲ್ಲಿ ಹಲವಾರು ಕಡೆಗಳಲ್ಲಿ ಬೋನು ಇಟ್ಟು ಚಿರತೆಯನ್ನು ಸೆರೆ ಹಿಡಿಯಲಾಗುವುದು ಎಂದು ವಲಯ ಅರಣ್ಯಾಧಿಕಾರಿ ವಿಜಯ ಕುಮಾರ ಹೇಳಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-32-319306014</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>