<p>ಸಿಂಧನೂರು: ನಗರದ ಕುಷ್ಟಗಿ ರಸ್ತೆಯಲ್ಲಿ, ಕುರಿ ಸಂತೆ ನಡೆಯುವ ಸಂದರ್ಭದಲ್ಲಿ ಕುರಿ ಮಾರಾಟ ಮಾಡಿ ಬಂದ ಹಣ ಇಟ್ಟುಕೊಂಡಿದ್ದ ವ್ಯಕ್ತಿಯಿಂದ ಕಳ್ಳರು ₹3 ಲಕ್ಷ ಕಳವು ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.</p>.<p>ಕೊಪ್ಪಳ ತಾಲ್ಲೂಕಿನ ಬೆನಕನದೊಡ್ಡಿ ಗ್ರಾಮದ ಮುತ್ತುರಾಜ ಗವಿಯಪ್ಪ ಎಂಬುವವರು ಕುರಿ ಮಾರಾಟ ಮಾಡಿ, ಅದರಿಂದ ಬಂದ ₹3 ಲಕ್ಷ ಎಣಿಸಿಕೊಳ್ಳುತ್ತಿದ್ದರು. ಇದನ್ನು ಗಮನಿಸಿದ ಕಳ್ಳರು ಬೈಕ್ನಲ್ಲಿ ಬಂದು ಹಣ ಲಪಟಾಯಿಸಿಕೊಂಡು ಪರಾರಿಯಾಗಿದ್ದಾರೆ. ಹಣ ಕಳೆದುಕೊಂಡ ಮುತ್ತುರಾಜ ಗಾಬರಿಯಿಂದ ಅವರ ಹಿಂದೆ ಚೀರಾಡುತ್ತಾ ಹಿಂಬಾಲಿಸಿದರು. ಆದರೂ ಪ್ರಯೋಜನವಾಗಲಿಲ್ಲ. ನಂತರ ಪೊಲೀಸರಿಗೆ ದೂರು ನೀಡಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-32-1790364742</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿಂಧನೂರು: ನಗರದ ಕುಷ್ಟಗಿ ರಸ್ತೆಯಲ್ಲಿ, ಕುರಿ ಸಂತೆ ನಡೆಯುವ ಸಂದರ್ಭದಲ್ಲಿ ಕುರಿ ಮಾರಾಟ ಮಾಡಿ ಬಂದ ಹಣ ಇಟ್ಟುಕೊಂಡಿದ್ದ ವ್ಯಕ್ತಿಯಿಂದ ಕಳ್ಳರು ₹3 ಲಕ್ಷ ಕಳವು ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.</p>.<p>ಕೊಪ್ಪಳ ತಾಲ್ಲೂಕಿನ ಬೆನಕನದೊಡ್ಡಿ ಗ್ರಾಮದ ಮುತ್ತುರಾಜ ಗವಿಯಪ್ಪ ಎಂಬುವವರು ಕುರಿ ಮಾರಾಟ ಮಾಡಿ, ಅದರಿಂದ ಬಂದ ₹3 ಲಕ್ಷ ಎಣಿಸಿಕೊಳ್ಳುತ್ತಿದ್ದರು. ಇದನ್ನು ಗಮನಿಸಿದ ಕಳ್ಳರು ಬೈಕ್ನಲ್ಲಿ ಬಂದು ಹಣ ಲಪಟಾಯಿಸಿಕೊಂಡು ಪರಾರಿಯಾಗಿದ್ದಾರೆ. ಹಣ ಕಳೆದುಕೊಂಡ ಮುತ್ತುರಾಜ ಗಾಬರಿಯಿಂದ ಅವರ ಹಿಂದೆ ಚೀರಾಡುತ್ತಾ ಹಿಂಬಾಲಿಸಿದರು. ಆದರೂ ಪ್ರಯೋಜನವಾಗಲಿಲ್ಲ. ನಂತರ ಪೊಲೀಸರಿಗೆ ದೂರು ನೀಡಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-32-1790364742</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>