<p><strong>ಸಿಂಧನೂರು</strong>: ಸಾಹಿತ್ಯ, ಸಂಗೀತ, ನೃತ್ಯ, ಕಲೆಗಳನ್ನು ನಿರಂತರವಾಗಿ ಅಭ್ಯಾಸ ಮಾಡಿ ವಿದ್ಯಾರ್ಥಿಗಳು ಸಮಾಜದಲ್ಲಿ ಪ್ರತಿಭಾವಂತರಾಗಿ ಹೊರಹೊಮ್ಮಬೇಕು ಎಂದು ವಶಿಷ್ಠಧಾಮ ಸೇವಾ ಟ್ರಸ್ಟ್ ಅಧ್ಯಕ್ಷ ಭೀಮಸೇನಾಚಾರ್ಯ ನವಲಿ ಸಲಹೆ ನೀಡಿದರು.</p>.<p>ನಗರದ ಉಪ್ಪಾರವಾಡಿಯ ಗುರುಸಿದ್ದಯ್ಯನ ಮಠದ ಕಾಲೊನಿಯಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಶಿಷ್ಠಧಾಮ ಸೇವಾ ಟ್ರಸ್ಟ್ನಿಂದ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ಕಂಪಾಸ್ ಬಾಕ್ಸ್ ಹಾಗೂ ವಾಟರ್ ವಾಟಲ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮುಖಂಡ ಸುಧಾಕರರಾವ್ ಕುಲಕರ್ಣಿ ಕಲಬುರಗಿ ಮಾತನಾಡಿ, ತಂದೆ ತಾಯಿ ಹಾಗೂ ಗುರುಗಳ ಮಾತುಗಳನ್ನು ಕೇಳಿ ವಿದ್ಯಾವಂತರಾಗಿ ಒಳ್ಳೆಯ ಪ್ರಜೆಗಳಾಗಬೇಕು ಎಂದರು.</p>.<p>ಮುಖ್ಯಶಿಕ್ಷಕಿ ಸಾವಿತ್ರಿ ದೀಕ್ಷಿತ್, ಶೋಭಾ ನವಲಿ, ಪ್ರಭಾರಿ ಮುಖ್ಯಶಿಕ್ಷಕ ಗಿರೀಶ ವಿ.ಬಿ ಮಾತನಾಡಿದರು. ಶಾಲೆಯ ಎಸ್ಡಿಎಂಸಿ ಅಧ್ಯಕ್ಷೆ ಹುಲಿಗೆಮ್ಮ ಮತ್ತು ಶಿಕ್ಷಕರು, ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು</strong>: ಸಾಹಿತ್ಯ, ಸಂಗೀತ, ನೃತ್ಯ, ಕಲೆಗಳನ್ನು ನಿರಂತರವಾಗಿ ಅಭ್ಯಾಸ ಮಾಡಿ ವಿದ್ಯಾರ್ಥಿಗಳು ಸಮಾಜದಲ್ಲಿ ಪ್ರತಿಭಾವಂತರಾಗಿ ಹೊರಹೊಮ್ಮಬೇಕು ಎಂದು ವಶಿಷ್ಠಧಾಮ ಸೇವಾ ಟ್ರಸ್ಟ್ ಅಧ್ಯಕ್ಷ ಭೀಮಸೇನಾಚಾರ್ಯ ನವಲಿ ಸಲಹೆ ನೀಡಿದರು.</p>.<p>ನಗರದ ಉಪ್ಪಾರವಾಡಿಯ ಗುರುಸಿದ್ದಯ್ಯನ ಮಠದ ಕಾಲೊನಿಯಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಶಿಷ್ಠಧಾಮ ಸೇವಾ ಟ್ರಸ್ಟ್ನಿಂದ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ಕಂಪಾಸ್ ಬಾಕ್ಸ್ ಹಾಗೂ ವಾಟರ್ ವಾಟಲ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮುಖಂಡ ಸುಧಾಕರರಾವ್ ಕುಲಕರ್ಣಿ ಕಲಬುರಗಿ ಮಾತನಾಡಿ, ತಂದೆ ತಾಯಿ ಹಾಗೂ ಗುರುಗಳ ಮಾತುಗಳನ್ನು ಕೇಳಿ ವಿದ್ಯಾವಂತರಾಗಿ ಒಳ್ಳೆಯ ಪ್ರಜೆಗಳಾಗಬೇಕು ಎಂದರು.</p>.<p>ಮುಖ್ಯಶಿಕ್ಷಕಿ ಸಾವಿತ್ರಿ ದೀಕ್ಷಿತ್, ಶೋಭಾ ನವಲಿ, ಪ್ರಭಾರಿ ಮುಖ್ಯಶಿಕ್ಷಕ ಗಿರೀಶ ವಿ.ಬಿ ಮಾತನಾಡಿದರು. ಶಾಲೆಯ ಎಸ್ಡಿಎಂಸಿ ಅಧ್ಯಕ್ಷೆ ಹುಲಿಗೆಮ್ಮ ಮತ್ತು ಶಿಕ್ಷಕರು, ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>