<p>ಸಿರವಾರ: ‘ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಅನ್ನು ಶಾಂತಿ, ಸೌಹಾರ್ದ ಹಾಗೂ ಸಹೋದರತ್ವದ ಭಾವನೆಯೊಂದಿಗೆ ಆಚರಿಸಬೇಕು. ಸರ್ಕಾರದ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಸಿಪಿಐ ಎಂ.ಶಶಿಕಾಂತ ಹೇಳಿದರು.</p>.<p>ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಬಕ್ರೀದ್ ಅಂಗವಾಗಿ ಸೋಮವಾರ ನಡೆದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸದಾ ಸಿದ್ಧವಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಹಿಂದೂ-ಮುಸ್ಲಿಮರು ಒಗ್ಗಟ್ಟಾಗಿ ಬಕ್ರೀದ್ ಆಚರಿಸಬೇಕು. ಶಾಂತಿಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.</p>.<p>ಪಿಎಸ್ಐ ಚಂದ್ರಶೇಖರ ಹಿರೇಮಠ ಮಾತನಾಡಿದರು.</p>.<p>ಖಾಜಿ ಮಂಜೂರ್ ಸಾಬ್, ಖಾಜಿ ನವಾಜ್ ಸಾಬ್, ಪ.ಪಂ ಸದಸ್ಯರಾದ ಹಸೇನಲಿ, ಮೌಲಾಸಾಬ ವರ್ಚಸ್, ಮುಖಂಡರಾದ ಕಲ್ಲೂರು ಬಸವರಾಜ ನಾಯಕ, ರಾಜಪ್ಪ ಹೊನ್ನಟಗಿ, ಮಹ್ಮದ್ ಹುಸೇನ್, ಅರಳಪ್ಪ ಯದಲದಿನ್ನಿ, ಎಚ್.ಕೆ.ಶಿವಗ್ಯಾನಿ, ಜಯಪ್ಪ, ಸತ್ತರಸಾಬ್, ಇಸ್ಮಾಯಿಲ್, ಇಬ್ರಾಹಿಂ, ಶಾಂತಪ್ಪ ಪಿತಗಲ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-32-1273446734</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿರವಾರ: ‘ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಅನ್ನು ಶಾಂತಿ, ಸೌಹಾರ್ದ ಹಾಗೂ ಸಹೋದರತ್ವದ ಭಾವನೆಯೊಂದಿಗೆ ಆಚರಿಸಬೇಕು. ಸರ್ಕಾರದ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಸಿಪಿಐ ಎಂ.ಶಶಿಕಾಂತ ಹೇಳಿದರು.</p>.<p>ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಬಕ್ರೀದ್ ಅಂಗವಾಗಿ ಸೋಮವಾರ ನಡೆದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸದಾ ಸಿದ್ಧವಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಹಿಂದೂ-ಮುಸ್ಲಿಮರು ಒಗ್ಗಟ್ಟಾಗಿ ಬಕ್ರೀದ್ ಆಚರಿಸಬೇಕು. ಶಾಂತಿಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.</p>.<p>ಪಿಎಸ್ಐ ಚಂದ್ರಶೇಖರ ಹಿರೇಮಠ ಮಾತನಾಡಿದರು.</p>.<p>ಖಾಜಿ ಮಂಜೂರ್ ಸಾಬ್, ಖಾಜಿ ನವಾಜ್ ಸಾಬ್, ಪ.ಪಂ ಸದಸ್ಯರಾದ ಹಸೇನಲಿ, ಮೌಲಾಸಾಬ ವರ್ಚಸ್, ಮುಖಂಡರಾದ ಕಲ್ಲೂರು ಬಸವರಾಜ ನಾಯಕ, ರಾಜಪ್ಪ ಹೊನ್ನಟಗಿ, ಮಹ್ಮದ್ ಹುಸೇನ್, ಅರಳಪ್ಪ ಯದಲದಿನ್ನಿ, ಎಚ್.ಕೆ.ಶಿವಗ್ಯಾನಿ, ಜಯಪ್ಪ, ಸತ್ತರಸಾಬ್, ಇಸ್ಮಾಯಿಲ್, ಇಬ್ರಾಹಿಂ, ಶಾಂತಪ್ಪ ಪಿತಗಲ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-32-1273446734</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>