<p><strong>ಸಿರವಾರ</strong>: ‘ವಿದ್ಯಾರ್ಥಿಯ ಮನಸ್ಸು ಏನಾನ್ನಾದರೂ ಹೊಸತನ ಸೆಳೆಯುವ ಸ್ಥಿತಿಯಲ್ಲಿದೆ. ಈ ಸಮಯದಲ್ಲಿಯೇ ಪಠ್ಯದ ಜೊತೆಗೆ ಯೋಗ, ಧ್ಯಾನ, ಆಟೋಟಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಉತ್ತಮ ಜೀವನ ನಡೆಸಲು ಸಾಧ್ಯವಾಗುತ್ತದೆ’ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ಜನಜಾಗೃತಿ ವೇದಿಕೆಯ ಕೋಶಾಧಿಕಾರಿ ಅಯ್ಯನಗೌಡ ಏರಡ್ಡಿ ಹೇಳಿದರು.</p>.<p>ಪಟ್ಟಣದ ಬಾಲಕರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯಿಂದ ಶನಿವಾರ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಚಿಕ್ಕ ವಯಸ್ಸಿನಲ್ಲಿ ದುರಾಭ್ಯಾಸಗಳಿಗೆ ದಾಸರಾಗದೇ ಉತ್ತಮ ಆಲೋಚನೆಗಳೊಂದಿಗೆ ನಡೆದ ಅಭ್ಯಾಸದಲ್ಲಿ ಉತ್ತಮ ಅಂಕ ಪಡೆದು ಏನಾದರೂ ಸಾಧಿಸಲು ಸಾಧ್ಯವಾಗುತ್ತದೆ ಎಂದರು.</p>.<p>ಶಾಲೆಯ ಮುಖ್ಯಶಿಕ್ಷಕಿ ಗಿರಿಜಾ, ಎಸ್ಡಿಎಂಸಿ ಅಧ್ಯಕ್ಷ ಮಹ್ಮದ್ ರಫಿ, ಶಿಕ್ಷಕರಾದ ವೆಂಕಟೇಶ ರಾಯಚೂರುಕರ್, ಚನ್ನಪ್ಪ, ಮಂಜುಳಾ ದರ್ಶನಕರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ವನಿತಾ, ಸೇವಾಪ್ರತಿನಿಧಿ ಶಾಂತಾ, ಕಲ್ಪನಾ ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರವಾರ</strong>: ‘ವಿದ್ಯಾರ್ಥಿಯ ಮನಸ್ಸು ಏನಾನ್ನಾದರೂ ಹೊಸತನ ಸೆಳೆಯುವ ಸ್ಥಿತಿಯಲ್ಲಿದೆ. ಈ ಸಮಯದಲ್ಲಿಯೇ ಪಠ್ಯದ ಜೊತೆಗೆ ಯೋಗ, ಧ್ಯಾನ, ಆಟೋಟಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಉತ್ತಮ ಜೀವನ ನಡೆಸಲು ಸಾಧ್ಯವಾಗುತ್ತದೆ’ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ಜನಜಾಗೃತಿ ವೇದಿಕೆಯ ಕೋಶಾಧಿಕಾರಿ ಅಯ್ಯನಗೌಡ ಏರಡ್ಡಿ ಹೇಳಿದರು.</p>.<p>ಪಟ್ಟಣದ ಬಾಲಕರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯಿಂದ ಶನಿವಾರ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಚಿಕ್ಕ ವಯಸ್ಸಿನಲ್ಲಿ ದುರಾಭ್ಯಾಸಗಳಿಗೆ ದಾಸರಾಗದೇ ಉತ್ತಮ ಆಲೋಚನೆಗಳೊಂದಿಗೆ ನಡೆದ ಅಭ್ಯಾಸದಲ್ಲಿ ಉತ್ತಮ ಅಂಕ ಪಡೆದು ಏನಾದರೂ ಸಾಧಿಸಲು ಸಾಧ್ಯವಾಗುತ್ತದೆ ಎಂದರು.</p>.<p>ಶಾಲೆಯ ಮುಖ್ಯಶಿಕ್ಷಕಿ ಗಿರಿಜಾ, ಎಸ್ಡಿಎಂಸಿ ಅಧ್ಯಕ್ಷ ಮಹ್ಮದ್ ರಫಿ, ಶಿಕ್ಷಕರಾದ ವೆಂಕಟೇಶ ರಾಯಚೂರುಕರ್, ಚನ್ನಪ್ಪ, ಮಂಜುಳಾ ದರ್ಶನಕರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ವನಿತಾ, ಸೇವಾಪ್ರತಿನಿಧಿ ಶಾಂತಾ, ಕಲ್ಪನಾ ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>