<p><strong>ಸಿರವಾರ:</strong> ‘ದೇವಸ್ಥಾನ ಸೇರಿದಂತೆ ಮಠಮಾನ್ಯಗಳಲ್ಲಿ ಹರಗುರು ಚರಮೂರ್ತಿಗಳ ಆರ್ಶೀವಾದದೊಂದಿಗೆ ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುವವರು ಭಾಗ್ಯವಂತರು’ ಎಂದು ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧಿಶ್ವರ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದಂಗಳು ಹೇಳಿದರು.</p>.<p>ತಾಲ್ಲೂಕಿನ ಬಲ್ಲಟಗಿ ಗ್ರಾಮದಲ್ಲಿನ ಲಿಂಗೈಕ್ಯ ಬಸವಲಿಂಗಯ್ಯ ತಾತನವರ 17ನೇ ಜಾತ್ರಾ ಮಹೋತ್ಸವ ಯಡಿಯೂರು ಸಿದ್ಧಲಿಂಗೇಶ್ವರ ಪುರಾಣ ಮಹಾಮಂಗಲೋತ್ಸವ ಕಾರ್ಯಕ್ರಮದ ಅಂಗವಾಗಿ ಮಂಗಳವಾರ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>‘ದುಬಾರಿ ಜೀವನದಲ್ಲಿ ಸರಳ ಹಾಗೂ ಪುಣ್ಯದಿಂದ ನಡೆಯುವ ಸಾಮೂಹಿಕ ವಿವಾಹದಲ್ಲಿ ವಿವಾಹವಾಗಿ, ನವ ದಂಪತಿಗಳು ಎರಡು ಕುಟುಂಬದೊಂದಿಗೆ ಅನ್ಯೋನ್ಯತೆಯಿಂದ ಜೀವನ ನಡೆಸಬೇಕು’ ಎಂದು ಹಾರೈಸಿದರು.</p>.<p>23 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟವು. ಯಡಿಯೂರು ಸಿದ್ದಲಿಂಗೇಶ್ವರ ಪುರಾಣ ಪ್ರವಚನವನ್ನು ಕರಾಬದಿನ್ನಿ ದೊಡ್ಡಬಸಯ್ಯ ಶಾಸ್ತ್ರಿ, ಸಂಗೀತ ಅಮರೇಶ ಸಾಲಿಮಠ, ತಬಲ ಆರ್. ಮಲ್ಲಿನಾಥಸ್ವಾಮಿ ನಡೆಸಿಕೊಟ್ಟರು.</p>.<p>ನೀಲಗಲ್ ಬೃಹನ್ಮಠದ ಪಂಚಾಕ್ಷರಿ ಶಿವಾಚಾರ್ಯ ಸ್ವಾಮೀಜಿ, ಕರೆಗುಡ್ಡದ ಮಹಾಂತೇಶ್ವರ ಮಠದ ಮಹಾಂತಲಿಂಗ ಶಿವಾವಾರ್ಯರು, ರಾಯಚೂರು ಸೋಮವಾರ ಪೇಟೆಯ ಅಭಿನವ ರಾಯಚೋಟಿವೀರ ಶಿವಾಚಾರ್ಯರು, ದೇವರಭೂಪುರದ ಅಭಿನವ ಗಜದಂಡ ಶಿವಾಚಾರ್ಯರು, ನವಕಲಕಲ್ಲು ಬೃಹನ್ಮಠದ ಅಭಿನವಶ್ರೀ ಸೋಮನಾಥ ಶಿವಾಚಾರ್ಯರು, ಅಲಮೇಲ ಮಠದ ಚಂದ್ರಶೇಖರ ಶಿವಾಚಾರ್ಯರು, ತಡವಲಗಿಯ ರಾಯಚೋಟೇಶ್ವರ ಶಿವಾಚಾರ್ಯರು, ನವಲಕಲ್ಲು ಬೃಹನ್ಮಠದ ಗಂಗಾಧರಯ್ಯ ತಾತ, ಬಲ್ಲಟಗಿ ಶ್ರೀಮಠದ ಗುರುಬಸಯ್ಯಸ್ವಾಮಿ ಹಿರೇಮಠ, ಬಸವರಾಜ ಸ್ವಾಮಿ ಹಿರೇಮಠ, ಮಾಜಿ ಶಾಸಕರಾದ ಬಸವನಗೌಡ ಬ್ಯಾಗವಾಟ, ರಾಜಾ ವೆಂಕಟಪ್ಪನಾಯಕ, ವೈದ್ಯ ಶರಣಪ್ಪ ಬಲ್ಲಟಗಿ, ಟಿ.ಮಲ್ಲಿಕಾರ್ಜುನ ಪಾಟೀಲ ಬಲ್ಲಟಗಿ, ಮಲ್ಲಿಕಾರ್ಜುನ ಜಕ್ಕಲದಿನ್ನಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರವಾರ:</strong> ‘ದೇವಸ್ಥಾನ ಸೇರಿದಂತೆ ಮಠಮಾನ್ಯಗಳಲ್ಲಿ ಹರಗುರು ಚರಮೂರ್ತಿಗಳ ಆರ್ಶೀವಾದದೊಂದಿಗೆ ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುವವರು ಭಾಗ್ಯವಂತರು’ ಎಂದು ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧಿಶ್ವರ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದಂಗಳು ಹೇಳಿದರು.</p>.<p>ತಾಲ್ಲೂಕಿನ ಬಲ್ಲಟಗಿ ಗ್ರಾಮದಲ್ಲಿನ ಲಿಂಗೈಕ್ಯ ಬಸವಲಿಂಗಯ್ಯ ತಾತನವರ 17ನೇ ಜಾತ್ರಾ ಮಹೋತ್ಸವ ಯಡಿಯೂರು ಸಿದ್ಧಲಿಂಗೇಶ್ವರ ಪುರಾಣ ಮಹಾಮಂಗಲೋತ್ಸವ ಕಾರ್ಯಕ್ರಮದ ಅಂಗವಾಗಿ ಮಂಗಳವಾರ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>‘ದುಬಾರಿ ಜೀವನದಲ್ಲಿ ಸರಳ ಹಾಗೂ ಪುಣ್ಯದಿಂದ ನಡೆಯುವ ಸಾಮೂಹಿಕ ವಿವಾಹದಲ್ಲಿ ವಿವಾಹವಾಗಿ, ನವ ದಂಪತಿಗಳು ಎರಡು ಕುಟುಂಬದೊಂದಿಗೆ ಅನ್ಯೋನ್ಯತೆಯಿಂದ ಜೀವನ ನಡೆಸಬೇಕು’ ಎಂದು ಹಾರೈಸಿದರು.</p>.<p>23 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟವು. ಯಡಿಯೂರು ಸಿದ್ದಲಿಂಗೇಶ್ವರ ಪುರಾಣ ಪ್ರವಚನವನ್ನು ಕರಾಬದಿನ್ನಿ ದೊಡ್ಡಬಸಯ್ಯ ಶಾಸ್ತ್ರಿ, ಸಂಗೀತ ಅಮರೇಶ ಸಾಲಿಮಠ, ತಬಲ ಆರ್. ಮಲ್ಲಿನಾಥಸ್ವಾಮಿ ನಡೆಸಿಕೊಟ್ಟರು.</p>.<p>ನೀಲಗಲ್ ಬೃಹನ್ಮಠದ ಪಂಚಾಕ್ಷರಿ ಶಿವಾಚಾರ್ಯ ಸ್ವಾಮೀಜಿ, ಕರೆಗುಡ್ಡದ ಮಹಾಂತೇಶ್ವರ ಮಠದ ಮಹಾಂತಲಿಂಗ ಶಿವಾವಾರ್ಯರು, ರಾಯಚೂರು ಸೋಮವಾರ ಪೇಟೆಯ ಅಭಿನವ ರಾಯಚೋಟಿವೀರ ಶಿವಾಚಾರ್ಯರು, ದೇವರಭೂಪುರದ ಅಭಿನವ ಗಜದಂಡ ಶಿವಾಚಾರ್ಯರು, ನವಕಲಕಲ್ಲು ಬೃಹನ್ಮಠದ ಅಭಿನವಶ್ರೀ ಸೋಮನಾಥ ಶಿವಾಚಾರ್ಯರು, ಅಲಮೇಲ ಮಠದ ಚಂದ್ರಶೇಖರ ಶಿವಾಚಾರ್ಯರು, ತಡವಲಗಿಯ ರಾಯಚೋಟೇಶ್ವರ ಶಿವಾಚಾರ್ಯರು, ನವಲಕಲ್ಲು ಬೃಹನ್ಮಠದ ಗಂಗಾಧರಯ್ಯ ತಾತ, ಬಲ್ಲಟಗಿ ಶ್ರೀಮಠದ ಗುರುಬಸಯ್ಯಸ್ವಾಮಿ ಹಿರೇಮಠ, ಬಸವರಾಜ ಸ್ವಾಮಿ ಹಿರೇಮಠ, ಮಾಜಿ ಶಾಸಕರಾದ ಬಸವನಗೌಡ ಬ್ಯಾಗವಾಟ, ರಾಜಾ ವೆಂಕಟಪ್ಪನಾಯಕ, ವೈದ್ಯ ಶರಣಪ್ಪ ಬಲ್ಲಟಗಿ, ಟಿ.ಮಲ್ಲಿಕಾರ್ಜುನ ಪಾಟೀಲ ಬಲ್ಲಟಗಿ, ಮಲ್ಲಿಕಾರ್ಜುನ ಜಕ್ಕಲದಿನ್ನಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>