ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಯಾಂಪಸ್ ನಿರ್ಮಾಣದ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ, ಸಮುದಾಯದಿಂದ ಹಾಗೂ ಜನಪ್ರತಿನಿಧಿಗಳಿಂದ ಸಕಾರಾತ್ಮಕ ಸ್ಪಂದನೆ ದೊರಕಿದೆ. ಕುಲಪತಿಯಾಗಿ ನೇಮಕವಾದ 100 ದಿನಗಳಲ್ಲಿ ಯಾವ ಕೆಲಸಗಳಾಗಿವೆ ಎಂಬುದನ್ನು ಹಂಚಿಕೊಳ್ಳುವ ಉದ್ದೇಶವಿದೆ. ಎಲ್ಲರಿಂದಲೂ ಸಲಹೆ ಪಡೆದು ಮಾದರಿ ಕ್ಯಾಂಪಸ್ ನಿರ್ಮಿಸಲಾಗುವುದು ಎಂದರು.
ಈ ವರ್ಷ ಕೋವಿಡ್ ಇರುವುದರಿಂದ ರಾಜ್ಯ ಸರ್ಕಾರದಿಂದ ಕನಿಷ್ಠ ₹100 ಕೋಟಿ ಅನುದಾನ ಸಿಗುವ ನಿರೀಕ್ಷೆ ಇದೆ. ಅದರಲ್ಲಿ ಆಡಳಿತ ಭವನ, ಪಾಠದ ಕೋಣೆಗಳು, ವಸತಿಗಳು, ತಾತ್ಕಾಲಿಕ ನೇಮಕಾತಿಗಳನ್ನು ಮಾಡಿಕೊಳ್ಳಲು ಸಾಧ್ಯವಾಗಲಿದೆ ಎಂದು ಹೇಳಿದರು.