ದೂರುದಾರರಿಗೆ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಹಿರಿಯ ಪುತ್ರನು ಖಾಸಗಿ ಕಂಪೆನಿಯಲ್ಲಿ ನೆಟವರ್ಕ್ ಪ್ಲಾನಿಂಗ್ ಎಂಜಿನಿಯರ್ ಉದ್ಯೋಗಕ್ಕೆ ಸೇರ್ಪಡೆಯಾದ ಬಳಿಕ ಮನೆಗೆ ಬರುವುದನ್ನೆ ನಿಲ್ಲಿಸಿದ್ದರು. ಇದರಿಂದ ಚಿಂತೆಗೊಳಗಾದ ತಂದೆಯು, ‘ಇಷ್ಟು ವರ್ಷ ಕಷ್ಟಪಟ್ಟು ಸಾಕಿದ್ದೇನೆ. ಆದರೆ ಈಗ ಪುತ್ರನು ಆರ್ಥಿಕ ಸಂಕಷ್ಟಕ್ಕೆ ನೆರವಾಗುತ್ತಿಲ್ಲ. ಹೋಟೆಲ್ ಊಟ ಮಾಡಿಕೊಂಡು, ಲಾಡ್ಜ್ನಲ್ಲಿ ಉಳಿದು ಐಷಾರಾಮಿ ಜೀವನ ಸಾಗಿಸುತ್ತಿದ್ದಾನೆ. ಇನ್ನುಳಿದ ಮಕ್ಕಳು ಇನ್ನೂ ಓದುತ್ತಿದ್ದಾರೆ’ ಎಂದು ದೂರು ಸಲ್ಲಿಸಿದ್ದರು.