ಜಿಲ್ಲೆಯಲ್ಲಿರುವ 3,45,293 ಹೆಕ್ಟೇರ್ ಬಿತ್ತನೆ ಪ್ರದೇಶದ ಪೈಕಿ 1,45,937 ಹೆಕ್ಟೇರ್ನಲ್ಲಿ ಬಿತ್ತನೆ ಮುಗಿದಿದೆ. ಸಿಂಧನೂರು ತಾಲ್ಲೂಕಿನಲ್ಲಿ ಜುಲೈ ಅಸಮರ್ಪಕ ಸುರಿದ ಮಳೆ ಕಾರಣದಿಂದ ಬಿತ್ತನೆ ಜೋರಾಗಿಲ್ಲ. ಕಾಲುವೆ ಭಾಗವನ್ನು ಹೊರತುಪಡಿಸಿ ಮಳೆಯಾಶ್ರಿತ ಭೂಮಿಯೂ ಅಲ್ಲಿ ಬಹಳಷ್ಟಿದೆ. ಇನ್ನುಳಿದ ತಾಲ್ಲೂಕುಗಳಿಗೆ ಹೋಲಿಸಿದೆ ಅತಿಹೆಚ್ಚು ಬಿತ್ತನೆ ಪ್ರದೇಶ ಇದ್ದರೂ ಶೇ 9ರಷ್ಟು ಮಾತ್ರ ಬಿತ್ತನೆ ಆಗಿದೆ. ರಾಯಚೂರು ತಾಲ್ಲೂಕಿನಲ್ಲಿ ಶೇ 41, ಮಾನ್ವಿ ತಾಲ್ಲೂಕಿನಲ್ಲಿ ಶೇ 47, ಸಿರವಾರ ತಾಲ್ಲೂಕಿನಲ್ಲಿ ಶೇ 72, ದೇವದುರ್ಗ ತಾಲ್ಲೂಕಿನಲ್ಲಿ ಶೇ 44, ಲಿಂಗಸುಗೂರು ತಾಲ್ಲೂಕಿನಲ್ಲಿ ಶೇ 65, ಮಸ್ಕಿ ತಾಲ್ಲೂಕಿನಲ್ಲಿ ಶೇ 53 ರಷ್ಟು ಬಿತ್ತನೆ ಆಗಿದೆ. ಒಟ್ಟು ಜಿಲ್ಲೆಯಲ್ಲಿ ಶೇ 50 ಕ್ಕಿಂತ ಹೆಚ್ಚು ಭೂಮಿಯಲ್ಲಿ ಬಿತ್ತನೆ ಆಗಬೇಕಿದೆ.