ರಾಯಚೂರು: ನಗರದಲ್ಲಿ100 ಕ್ಕಿಂತ ಹೆಚ್ಚು ಜನರು ಅಥವಾ ಒಂದು ದಿನದಲ್ಲಿ 500 ಕ್ಕಿಂತ ಹೆಚ್ಚು ಜನರು ಸೇರುವಂತಹ ಅಥವಾ ಬಂದು ಹೋಗುವಂತಹ ಸ್ಥಳಗಳಲ್ಲಿ ಕಮರ್ಷಿಯಲ್ ಕಾಂಪ್ಲೆಕ್ಸ್, ಧಾರ್ಮಿಕ ಸ್ಥಳಗಳಲ್ಲಿ, ಶಾಲಾ ಕಾಲೇಜುಗಳಲ್ಲಿ, ಆಸ್ಪತ್ರೆಗಳಲ್ಲಿ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ, ಬ್ಯಾಂಕುಗಳಲ್ಲಿ, ಪೆಟ್ರೊಲ್ ಬಂಕ್ ಸೇರಿದಂತೆ ಜನಸಂದಣಿ ಸ್ಥಳಗಳಲ್ಲಿ ಮಾಲೀಕರು ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಸೂಚಿಸಿದ್ದಾರೆ.