ರಾಯಚೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಅವರ ಜನ್ಮ ದಿನದ ನಿಮಿತ್ತ ಬುಧವಾರ ಪೊಲೀಸ್ ಇಲಾಖೆಯ ಆವರಣದಲ್ಲಿ ರಕ್ತದಾನ ಶಿಬಿರ, ರಸ್ತೆಗಳಲ್ಲಿ ಗುಂಡಿ ಮುಚ್ಚುವುದು ಹಾಗೂ ನಿರಾಶ್ರಿತರ ಕೇಂದ್ರದಲ್ಲಿ ಅನ್ನಸಂತರ್ಪಣೆ, ಹಣ್ಣು ಹಂಪಲ ವಿತರಣೆ ಸೇರಿದಂತೆ ಹಲವು ಚಟುವಟಿಕೆಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.