<p>ರಾಯಚೂರು: ‘ಪ್ರತಿ ಮಗು ಕ್ರೀಡೆಯಲ್ಲಿ ಭಾಗವಹಿಸಬೇಕು. ಅವರ ದೈಹಿಕ ಮಾನಸಿಕ ಬೌದ್ಧಿಕ ಬೆಳವಣಿಗೆಯಲ್ಲಿ ಕ್ರೀಡೆಗಳು ಮಹತ್ವದ ಪಾತ್ರ ವಹಿಸುತ್ತದೆ’ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ದೈಹಿಕ ನಿರ್ದೇಶಕ ರಾಜಣ್ಣ ಹೇಳಿದರು.<br><br> ಇಲ್ಲಿಯ ಬಸವಶ್ರೀ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ದಿನಾಚರಣೆ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ವಿದ್ಯಾರ್ಥಿನಿಯರು ಹೆಚ್ಚಿನ ಆಸಕ್ತಿ ಆಟದಲ್ಲಿ ತೊಡಗಿರಬೇಕು. ಆಟದಿಂದ ನಾಯಕತ್ವದ ಗುಣಗಳು, ಆಟದ ಉತ್ಸಾಹ, ಸೋಲು ಗೆಲುವು ಎಲ್ಲದರ ಅನುಭವ ಸ್ವೀಕರಿಸಿ ಯಶಸ್ಸಿನತ್ತ ಸಾಗಬೇಕು’ ಎಂದು ತಿಳಿಸಿದರು.<br><br> ಶಾಲೆಯ ಸಂಸ್ಥಾಪಕಿ ಲಲಿತಾ ಎಂ. ಮಾತನಾಡಿದರು. ಸುಗುಣ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ. ಬಸನಗೌಡ, ಶಾರದ ದಯಾಸಾಗರ, ಕ್ರೀಡಾ ಶಿಕ್ಷಕ ಆಂಥೋನಿ ಉಪಸ್ಥಿತರಿದ್ದರು.</p>.<p>ಶಾಲೆಯ ಮಕ್ಕಳು ಸಮವಸ್ತ್ರದಲ್ಲಿ ಲೇಜಿಮ್, ಡಂಬಲ್ಸ್, ಬೊಂಬು, ಬಳಸಿ ಆಕರ್ಷಕವಾಗಿ ನೃತ್ಯ ಪ್ರದರ್ಶಿಸಿದರು. ನಂತರ ಕ್ರೀಡೆ ವಿಜೇತರಿಗೆ ಬಹುಮಾನವಾಗಿ ಪದಕ, ಟ್ರೋಫಿ ಮತ್ತು ಪ್ರಮಾಣಪತ್ರ ವಿತರಿಸಲಾಯಿತು.</p>.<p>ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಆಂಥೋನಿ ಮಕ್ಕಳಿಗೆ ಬಹುಮಾನ ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ‘ಪ್ರತಿ ಮಗು ಕ್ರೀಡೆಯಲ್ಲಿ ಭಾಗವಹಿಸಬೇಕು. ಅವರ ದೈಹಿಕ ಮಾನಸಿಕ ಬೌದ್ಧಿಕ ಬೆಳವಣಿಗೆಯಲ್ಲಿ ಕ್ರೀಡೆಗಳು ಮಹತ್ವದ ಪಾತ್ರ ವಹಿಸುತ್ತದೆ’ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ದೈಹಿಕ ನಿರ್ದೇಶಕ ರಾಜಣ್ಣ ಹೇಳಿದರು.<br><br> ಇಲ್ಲಿಯ ಬಸವಶ್ರೀ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ದಿನಾಚರಣೆ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ವಿದ್ಯಾರ್ಥಿನಿಯರು ಹೆಚ್ಚಿನ ಆಸಕ್ತಿ ಆಟದಲ್ಲಿ ತೊಡಗಿರಬೇಕು. ಆಟದಿಂದ ನಾಯಕತ್ವದ ಗುಣಗಳು, ಆಟದ ಉತ್ಸಾಹ, ಸೋಲು ಗೆಲುವು ಎಲ್ಲದರ ಅನುಭವ ಸ್ವೀಕರಿಸಿ ಯಶಸ್ಸಿನತ್ತ ಸಾಗಬೇಕು’ ಎಂದು ತಿಳಿಸಿದರು.<br><br> ಶಾಲೆಯ ಸಂಸ್ಥಾಪಕಿ ಲಲಿತಾ ಎಂ. ಮಾತನಾಡಿದರು. ಸುಗುಣ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ. ಬಸನಗೌಡ, ಶಾರದ ದಯಾಸಾಗರ, ಕ್ರೀಡಾ ಶಿಕ್ಷಕ ಆಂಥೋನಿ ಉಪಸ್ಥಿತರಿದ್ದರು.</p>.<p>ಶಾಲೆಯ ಮಕ್ಕಳು ಸಮವಸ್ತ್ರದಲ್ಲಿ ಲೇಜಿಮ್, ಡಂಬಲ್ಸ್, ಬೊಂಬು, ಬಳಸಿ ಆಕರ್ಷಕವಾಗಿ ನೃತ್ಯ ಪ್ರದರ್ಶಿಸಿದರು. ನಂತರ ಕ್ರೀಡೆ ವಿಜೇತರಿಗೆ ಬಹುಮಾನವಾಗಿ ಪದಕ, ಟ್ರೋಫಿ ಮತ್ತು ಪ್ರಮಾಣಪತ್ರ ವಿತರಿಸಲಾಯಿತು.</p>.<p>ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಆಂಥೋನಿ ಮಕ್ಕಳಿಗೆ ಬಹುಮಾನ ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>