ಸರ್ಕಾರಿ ನೌಕರರ ತಾಲ್ಲೂಕು ಘಟಕದ ಅಧ್ಯಕ್ಷ ಶಂಕರಗೌಡ ಮಾತನಾಡಿ, ಕ್ರೀಡೆ ಎಂಬುದು ಮನುಷ್ಯನ ಕ್ರಿಯಾಶಿಲತೆ ಹೆಚ್ಚಿಸುತ್ತದೆ. ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುವ ನೌಕರರಿಗೆ ಕ್ರೀಡೆ ಉತ್ಸಾಹ ತುಂಬಲಿದೆ ಎಂದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ, ಪುರಸಭೆ ಮುಖ್ಯಾಧಿಕಾರಿ ರೆಡ್ಡಿರಾಯನಗೌಡ, ಸರ್ಕಾರಿ ನೌಕರರ ಸಂಘದ ರಾಜ್ಯ ಸಮಿತಿ ಸದಸ್ಯ ರವೀಂದ್ರ ಉಪ್ಪಾರ, ಬಸನಗೌಡ ಪೊಲೀಸ್ ಪಾಟೀಲ್ ಇದ್ದರು. ಕೊಕ್ಕೊ, ಕಬಡ್ಡಿ, ವಾಲಿಬಾಲ್, ಕ್ರಿಕೆಟ್, ಚೆಸ್, ಬ್ಯಾಡ್ಮಿಂಟನ್, ಓಟದ ಸ್ಪರ್ಧೆ ಸೇರಿದಂತೆ ವಿವಿಧ ಕ್ರೀಡೆಗಳು ನಡೆದವು. ತಾಲ್ಲೂಕಿನ 400 ಕ್ಕೂ ಹೆಚ್ಚು ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.