ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಟಿ.ಮಂಜುನಾಥಸ್ವಾಮಿ ಸ್ವಾಗತಿಸಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಂಟಿ ಕಾರ್ಯದರ್ಶಿ ಎನ್.ಮಲ್ಲಿಕಾರ್ಜುನ, ಜಿಲ್ಲಾ ಘಟಕದ ಅಧ್ಯಕ್ಷ ಮಹೆಬೂಬ ಪಾಷ ಮೂಲಿಮನಿ, ಖಜಾಂಚಿ ಲಕ್ಷ್ಮಪ್ಪ, ಪ್ರಾಥಮಿಕ ಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾ ಘಟಕ ಅಧ್ಯಕ್ಷ ವೀರಭದ್ರಪ್ಪ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ನೀರಜಕುಮಾರ, ನೌಕರರ ಸಂಘದ ಸಿಂಧನೂರು ತಾಲ್ಲೂಕು ಅಧ್ಯಕ್ಷ ಚಂದ್ರಶೇಖರ ಹಿರೇಮಠ, ಸಿರವಾರ ಅಧ್ಯಕ್ಷ ಅಯ್ಯನಗೌಡ, ಮಸ್ಕಿ ಅಧ್ಯಕ್ಷ ಶಂಕರಗೌಡ, ಅಕ್ಕಮಹಾದೇವಿ, ಯಂಕಪ್ಪ ಇದ್ದರು.