ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕ್ರೀಡೆಗಳಿಂದ ದೈಹಿಕ,ಮಾನಸಿಕ ದೃಢತೆ’

Last Updated 18 ನವೆಂಬರ್ 2020, 13:43 IST
ಅಕ್ಷರ ಗಾತ್ರ

ರಾಯಚೂರು: ಕ್ರೀಡೆಯಿಂದ ಪ್ರತಿಭೆ ಹೊರಹಾಕುವ ಅವಕಾಶದ ಜೊತೆಗೆ ದೈಹಿಕ, ಮಾನಸಿಕ ಅಭಿವೃದ್ಧಿಯಾಗಲಿದೆ ಎಂದು ಕಿಲ್ಲೆ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯರು ಹೇಳಿದರು.

ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಜಿಲ್ಲಾ ಘಟಕದಿಂದ ಮಂಗಳವಾರದಿಂದ ಹಮ್ಮಿಕೊಳ್ಳಲಾಗಿದ್ದ ಓಪನ್ ಟೆನ್ನಿಸ್ ಬಾಲ್ ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.

ಕ್ರೀಡೆಗಳು ಯುವಕರಲ್ಲಿ ಆತ್ಮವಿಶ್ವಾಸ, ಉಲ್ಲಾಸ ಹೆಚ್ಚಿಸುತ್ತವೆ. ಸೋಲು–ಗೆಲುವು ಸಹಜ. ಕ್ರೀಡಾಪಟುಗಳು ತಮಗೆ ದೊರೆತ ಅವಕಾಶ ಸದ್ಬಳಕೆ ಮಾಡಿಕೊಂಡು ಪ್ರತಿಭೆ ಹೊರಹಾಕಬೇಕು ಎಂದು ತಿಳಿಸಿದರು.

ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ವಕೀಲ ಎನ್. ಶಿವಶಂಕರ ಮಾತನಾಡಿದರು. ನಗರಸಭೆ ಸದಸ್ಯ ಸಾಜಿದ್ ಸಮೀರ್, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ವಿನೋದ ರೆಡ್ಡಿ, ಪದಾಧಿಕಾರಿ ಅಶೋಕ, ಮಂಜುನಾಥ, ಶರಣಪ್ಪ ಗೋನಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT