ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶ ಎಂ. ಮಹಾದೇವಯ್ಯ, ಪೊಲೀಸರು 24 ಗಂಟೆಯೂ ಕರ್ತವ್ಯ ನಿಭಾಯಿಸುವ ಅನಿವಾರ್ಯತೆ ಇರುತ್ತದೆ. ಹೀಗಾಗಿ ದೈಹಿಕ ಸದೃಢತೆ ಕಾಪಾಡಿಕೊಳ್ಳಲು ಗಮನ ಹರಿಸಬೇಕು. ಕ್ರೀಡಾ ಸ್ಫೂರ್ತಿ ಬೆಳೆಸುವ ಉದ್ದೇಶಕ್ಕಾಗಿಯೆ ಇಲಾಖೆಯು ಕ್ರೀಡಾಕೂಟಗಳನ್ನು ಆಯೋಜಿಸಿ, ಪೊಲೀಸರನ್ನು ಉತ್ತೇಜಿಸುವ ಕೆಲಸ ಮಾಡುತ್ತಿದೆ. ಯಾವುದಾದರೂ ಕ್ರೀಡೆಯನ್ನು ಪ್ರತಿನಿತ್ಯ ಅಭ್ಯಾಸ ಮಾಡುತ್ತಿರಬೇಕಾಗುತ್ತದೆ. ಅಭ್ಯಾಸ ಮಾಡಿದವರು ಕ್ರೀಡಾಕೂಟದಲ್ಲಿ ಜಯಶಾಲಿಗಳಾತ್ತಾರೆ ಎಂದು ತಿಳಿಸಿದರು.