ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಾಲ್ಮೀಕಿಗೆ ಅಪಮಾನ: ಕಿಡಿಗೇಡಿಗಳ ಬಂಧಿಸಿ’

Last Updated 15 ಸೆಪ್ಟೆಂಬರ್ 2020, 10:30 IST
ಅಕ್ಷರ ಗಾತ್ರ

ಸಿರವಾರ: ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನೆಯ ತಾಲ್ಲೂಕು ಘಟಕದ ಪದಾಧಿಕಾರಿಗಳು ತಹಶೀಲ್ ಕಚೇರಿ ಸಿಬ್ಬಂದಿ ವಿಜಯಕುಮಾರ ಸುಗಂಧಿ ಅವರಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಿದರು.

ಗೃಹ ಸಚಿವರಿಗೆ ಬರೆದ ಮನವಿ ಪತ್ರದಲ್ಲಿ ಬಾಗಲಕೋಟೆ ಜಿಲ್ಲೆ ರಬಕವಿ ಪಟ್ಟಣದ ಪ್ರಶಾಂತ, ಬಸವರಾಜ ಹಾಗೂ ಹರ್ಷಿತ ಮಹರ್ಷಿ ವಾಲ್ಮೀಕಿ ಹೆಸರಿನಲ್ಲಿ ವಾಟ್ಸ್‌ ಆ್ಯಪ್‌ ಗ್ರೂಪ್ ಮಾಡಿದ್ದಲ್ಲದೆ, ಅದರಲ್ಲಿ ವಾಲ್ಮೀಕಿ ಅವರ ಫೋಟೊಗಳನ್ನು ಅಶ್ಲೀಲವಾಗಿ ತಿದ್ದಿ ಸಾಮಾಜಿಕ ಜಾಲಾತಾಣದಲ್ಲಿ ಬಿಟ್ಟಿರುವುದು ಖಂಡನೀಯ. ಕೂಡಲೇ ಅವರನ್ನು ಬಂಧಿಸಿ ಕರ್ನಾಟಕದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಲಾಯಿತು.

ಶ್ರೀರಾಮ ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಅಂಬಣ್ಣ ನಾಯಕ, ವೆಂಕಟೇಶ ನಾಯಕ, ರಮೇಶ ನಾಯಕ, ಸಿದ್ದಲಿಂಗ ನಾಯಕ, ಮುಕ್ಕಣ್ಣ ಮತ್ತು ಸುರೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT