<p><strong>ಲಿಂಗಸುಗೂರು: ‘</strong>ಕೋವಿಡ್ ನಿಯಮ ಗಳನ್ನು ಗಮನದಲ್ಲಿ ಇಟ್ಟುಕೊಂಡು ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ನಡೆಸುವ ಹೊಣೆಗಾರಿಕೆ ನಿಮ್ಮ ಮೇಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮುಂಜಾಗ್ರತ ಕ್ರಮವಾಗಿ ಜುಲೈ 15 ಮತ್ತು 17ರಂದು ಮಕ್ಕಳಿಗೆ ಅಣಕು ಪರೀಕ್ಷೆ ನಡೆಸುವುದು ಕಡ್ಡಾಯ’ ಎಂದು ಉಪ ವಿಭಾಗಾಧಿಕಾರಿ ರಾಜಶೇಖರ ಡಂಬಳ ಹೇಳಿದರು.</p>.<p>ಶುಕ್ರವಾರ ಶಿಕ್ಷಣ, ಆರೋಗ್ಯ, ಪೊಲೀಸ್ ಹಾಗೂ ತಾಲ್ಲೂಕು ಆಡಳಿತ ಸಹಯೋಗದಲ್ಲಿ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಜುಲೈ 19 ಮತ್ತು 22ರಂದು ನಡೆಯಲಿರುವ ಪರೀಕ್ಷೆಗಳಿಗೆ ಈಗಾಗಲೆ ತಾಲ್ಲೂಕು ಆಡಳಿತ ಪೂರ್ಣ ತಯಾರಿ ಮಾಡಿಕೊಂಡಿದೆ. ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ಸಿಬ್ಬಂದಿ ಜವಾಬ್ದಾರಿ ಅರಿತು ಕೆಲಸ ನಿರ್ವಹಿಸಬೇಕು. ಕರ್ತವ್ಯಲೋಪ ವೆಸಗುವ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಹೇಳಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಹೊಂಬಣ್ಣ ರಾಠೋಡ ಮಾತನಾಡಿ, ‘ತಾಲ್ಲೂಕಿನಲ್ಲಿ 5947 ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ. 27 ಕೇಂದ್ರಗಳನ್ನು ಗುರುತಿಸಲಾಗಿದೆ. ಈಗಾಗಲೆ ಅಗತ್ಯ ಸಿಬ್ಬಂದಿ ನಿಯೋಜನೆ ಮಾಡಿ ತರಬೇತಿ ನೀಡಲಾಗಿದೆ. ಒಎಂಆರ್ ಶೀಟ್ ನೀಡುತ್ತಿದ್ದು ಮೇಲ್ವಿಚಾರಕರು ಜಾಗೃತರಾಗಿರಬೇಕು. ಮಕ್ಕಳನ್ನು ಗೈರು ಆಗದಂತೆ ನೋಡಿಕೊಳ್ಳಬೇಕು ಎಂದರು.</p>.<p>ತಹಶೀಲ್ದಾರ್ ಚಾಮರಾಜ ಪಾಟೀಲ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಅಮರೇಶ ಮಾಕಾಪುರ, ಸಿಪಿಐ ಮಹಾಂತೇಶ ಸಜ್ಜನ ಮಾತನಾಡಿದರು.</p>.<p>ಕ್ಷೇತ್ರ ದೈಹಿಕ ಪರಿವೀಕ್ಷಕ ಚೆನ್ನಬಸವ ಮೇಟಿ ಅವರನ್ನು ಸತ್ಕರಿಸಲಾಯಿತು.</p>.<p>ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಚಂದ್ರಶೇಖರ ಕುಂಬಾರ. ಸಮೂಹ ಸಂಪನ್ಮೂಲ ಸಮನ್ವಯಧಿಕಾರಿ ಹನುಮಂತಪ್ಪ ಕುಳಗೇರಿ. ಸಾಬಣ್ಣ ವಗ್ಗರ, ಪ್ರಭುಲಿಂಗ ಗದ್ದಿ, ಮಲ್ಲಿಕಾರ್ಜುನ ಗೌಡರ್ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು: ‘</strong>ಕೋವಿಡ್ ನಿಯಮ ಗಳನ್ನು ಗಮನದಲ್ಲಿ ಇಟ್ಟುಕೊಂಡು ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ನಡೆಸುವ ಹೊಣೆಗಾರಿಕೆ ನಿಮ್ಮ ಮೇಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮುಂಜಾಗ್ರತ ಕ್ರಮವಾಗಿ ಜುಲೈ 15 ಮತ್ತು 17ರಂದು ಮಕ್ಕಳಿಗೆ ಅಣಕು ಪರೀಕ್ಷೆ ನಡೆಸುವುದು ಕಡ್ಡಾಯ’ ಎಂದು ಉಪ ವಿಭಾಗಾಧಿಕಾರಿ ರಾಜಶೇಖರ ಡಂಬಳ ಹೇಳಿದರು.</p>.<p>ಶುಕ್ರವಾರ ಶಿಕ್ಷಣ, ಆರೋಗ್ಯ, ಪೊಲೀಸ್ ಹಾಗೂ ತಾಲ್ಲೂಕು ಆಡಳಿತ ಸಹಯೋಗದಲ್ಲಿ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಜುಲೈ 19 ಮತ್ತು 22ರಂದು ನಡೆಯಲಿರುವ ಪರೀಕ್ಷೆಗಳಿಗೆ ಈಗಾಗಲೆ ತಾಲ್ಲೂಕು ಆಡಳಿತ ಪೂರ್ಣ ತಯಾರಿ ಮಾಡಿಕೊಂಡಿದೆ. ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ಸಿಬ್ಬಂದಿ ಜವಾಬ್ದಾರಿ ಅರಿತು ಕೆಲಸ ನಿರ್ವಹಿಸಬೇಕು. ಕರ್ತವ್ಯಲೋಪ ವೆಸಗುವ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಹೇಳಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಹೊಂಬಣ್ಣ ರಾಠೋಡ ಮಾತನಾಡಿ, ‘ತಾಲ್ಲೂಕಿನಲ್ಲಿ 5947 ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ. 27 ಕೇಂದ್ರಗಳನ್ನು ಗುರುತಿಸಲಾಗಿದೆ. ಈಗಾಗಲೆ ಅಗತ್ಯ ಸಿಬ್ಬಂದಿ ನಿಯೋಜನೆ ಮಾಡಿ ತರಬೇತಿ ನೀಡಲಾಗಿದೆ. ಒಎಂಆರ್ ಶೀಟ್ ನೀಡುತ್ತಿದ್ದು ಮೇಲ್ವಿಚಾರಕರು ಜಾಗೃತರಾಗಿರಬೇಕು. ಮಕ್ಕಳನ್ನು ಗೈರು ಆಗದಂತೆ ನೋಡಿಕೊಳ್ಳಬೇಕು ಎಂದರು.</p>.<p>ತಹಶೀಲ್ದಾರ್ ಚಾಮರಾಜ ಪಾಟೀಲ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಅಮರೇಶ ಮಾಕಾಪುರ, ಸಿಪಿಐ ಮಹಾಂತೇಶ ಸಜ್ಜನ ಮಾತನಾಡಿದರು.</p>.<p>ಕ್ಷೇತ್ರ ದೈಹಿಕ ಪರಿವೀಕ್ಷಕ ಚೆನ್ನಬಸವ ಮೇಟಿ ಅವರನ್ನು ಸತ್ಕರಿಸಲಾಯಿತು.</p>.<p>ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಚಂದ್ರಶೇಖರ ಕುಂಬಾರ. ಸಮೂಹ ಸಂಪನ್ಮೂಲ ಸಮನ್ವಯಧಿಕಾರಿ ಹನುಮಂತಪ್ಪ ಕುಳಗೇರಿ. ಸಾಬಣ್ಣ ವಗ್ಗರ, ಪ್ರಭುಲಿಂಗ ಗದ್ದಿ, ಮಲ್ಲಿಕಾರ್ಜುನ ಗೌಡರ್ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>