<p><strong>ಸಿಂಧನೂರು:</strong> ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಕಲಾವಿದ ಪಂಡಿತ್ ದೇವೇಂದ್ರಕುಮಾರ ಮುಧೋಳ ಹೇಳಿದರು.</p>.<p>ತಾಲ್ಲೂಕಿನ ತಿಡಿಗೋಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ನಡೆದ ‘ಎಸ್ಸೆಸ್ಸೆಲ್ಸಿ ನಂತರ ಮುಂದೇನು?’ ವಿಚಾರ ಸಂಕೀರಣದಲ್ಲಿ ಅವರು ಮಾತನಾಡಿದರು.</p>.<p>ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಜೀವನದ ಮಹತ್ವ ಘಟ್ಟವಾಗಿದ್ದು, ಭವಿಷ್ಯದ ಗುರಿಗೆ ಇದು ಪ್ರಥಮ ಹಂತ. ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳಲು ಪರೀಕ್ಷೆಯಲ್ಲಿ ಪಡೆದ ಅಂಕಗಳು ಪ್ರಮುಖ ಪಾತ್ರ ವಹಿಸುತ್ತವೆ. ಈ ಪರೀಕ್ಷೆಯಲ್ಲಿ ಅತಿ ಹೆಚ್ಚಿನ ಅಂಕಗಳೊಂದಿಗೆ ತೇರ್ಗಡೆ ಹೊಂದಿದರೆ ಮುಂದಿನ ವ್ಯಾಸಂಗ ಸುಲಭವಾಗುತ್ತದೆ ಎಂದರು.</p>.<p>ಪಿಯುಸಿಯಲ್ಲಿ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಿದ್ದು, ಇವುಗಳನ್ನು ಆಯ್ಕೆ ಮಾಡಿಕೊಳ್ಳುವಾಗ ತಾನು ಈ ವಿಭಾಗವನ್ನು ಅಭ್ಯಾಸ ಮಾಡಿಯೇ ತೀರುತ್ತೇನೆ ಎಂಬ ಮಹತ್ವಾಕಾಂಕ್ಷೆಯನ್ನು ವಿದ್ಯಾರ್ಥಿಗಳು ಹೊಂದಬೇಕು. ಯಾವ ವಿಭಾಗವೇ ಆದರೂ ಎಲ್ಲವೂ ಉತ್ತಮ ಭವಿಷ್ಯವನ್ನೇ ರೂಪಿಸುತ್ತವೆ. ಆದರೆ ನಿರಂತರ ಅಧ್ಯಯನಶೀಲತೆ, ಕಠಿಣ ಪರಿಶ್ರಮ ಇರಬೇಕೆಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕ ಬೀರಪ್ಪ ಶಂಭೋಜಿ ಮಾತನಾಡಿ, ಗುರುಗಳ ಮಾರ್ಗದರ್ಶನ, ಪಾಲಕರ ಪ್ರೋತ್ಸಾಹದಿಂದ ಮುಂದಿನ ವ್ಯಾಸಂಗದ ಬಗ್ಗೆ ಸರಿಯಾದ ನಿರ್ಧಾರವನ್ನು ವಿದ್ಯಾರ್ಥಿಗಳು ತೆಗೆದುಕೊಳ್ಳಬೇಕು. ಆಸಕ್ತಿಗನುಗುಣವಾಗಿ ಆಯಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಸಮಾಜದಲ್ಲಿ ಸತ್ಪ್ರಜೆಯಾಗಿ ಬದುಕು ರೂಪಿಸಿಕೊಳ್ಳಬೇಕು ಎಂದರು.</p>.<p>ಶಿಕ್ಷಕರಾದ ವಾಸುದೇವ ವಿಶ್ವಕರ್ಮ, ನಾಗಪ್ಪ ಕೆಲ್ಲೂರು, ನೀಲನಗೌಡ, ನಾಗವೇಣಿ ಹೆಚ್., ಜಯಲಕ್ಷ್ಮಿ,<br />ಗಾಯತ್ರಿಬಾಯಿ, ಅಂಬುಜಾ, ಅಕ್ಕವiಹಾದೇವಿ, ಶಿವದೇವಿ, ಹೊನ್ನೂರಮ್ಮ, ಸಾವಿತ್ರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು:</strong> ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಕಲಾವಿದ ಪಂಡಿತ್ ದೇವೇಂದ್ರಕುಮಾರ ಮುಧೋಳ ಹೇಳಿದರು.</p>.<p>ತಾಲ್ಲೂಕಿನ ತಿಡಿಗೋಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ನಡೆದ ‘ಎಸ್ಸೆಸ್ಸೆಲ್ಸಿ ನಂತರ ಮುಂದೇನು?’ ವಿಚಾರ ಸಂಕೀರಣದಲ್ಲಿ ಅವರು ಮಾತನಾಡಿದರು.</p>.<p>ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಜೀವನದ ಮಹತ್ವ ಘಟ್ಟವಾಗಿದ್ದು, ಭವಿಷ್ಯದ ಗುರಿಗೆ ಇದು ಪ್ರಥಮ ಹಂತ. ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳಲು ಪರೀಕ್ಷೆಯಲ್ಲಿ ಪಡೆದ ಅಂಕಗಳು ಪ್ರಮುಖ ಪಾತ್ರ ವಹಿಸುತ್ತವೆ. ಈ ಪರೀಕ್ಷೆಯಲ್ಲಿ ಅತಿ ಹೆಚ್ಚಿನ ಅಂಕಗಳೊಂದಿಗೆ ತೇರ್ಗಡೆ ಹೊಂದಿದರೆ ಮುಂದಿನ ವ್ಯಾಸಂಗ ಸುಲಭವಾಗುತ್ತದೆ ಎಂದರು.</p>.<p>ಪಿಯುಸಿಯಲ್ಲಿ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಿದ್ದು, ಇವುಗಳನ್ನು ಆಯ್ಕೆ ಮಾಡಿಕೊಳ್ಳುವಾಗ ತಾನು ಈ ವಿಭಾಗವನ್ನು ಅಭ್ಯಾಸ ಮಾಡಿಯೇ ತೀರುತ್ತೇನೆ ಎಂಬ ಮಹತ್ವಾಕಾಂಕ್ಷೆಯನ್ನು ವಿದ್ಯಾರ್ಥಿಗಳು ಹೊಂದಬೇಕು. ಯಾವ ವಿಭಾಗವೇ ಆದರೂ ಎಲ್ಲವೂ ಉತ್ತಮ ಭವಿಷ್ಯವನ್ನೇ ರೂಪಿಸುತ್ತವೆ. ಆದರೆ ನಿರಂತರ ಅಧ್ಯಯನಶೀಲತೆ, ಕಠಿಣ ಪರಿಶ್ರಮ ಇರಬೇಕೆಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕ ಬೀರಪ್ಪ ಶಂಭೋಜಿ ಮಾತನಾಡಿ, ಗುರುಗಳ ಮಾರ್ಗದರ್ಶನ, ಪಾಲಕರ ಪ್ರೋತ್ಸಾಹದಿಂದ ಮುಂದಿನ ವ್ಯಾಸಂಗದ ಬಗ್ಗೆ ಸರಿಯಾದ ನಿರ್ಧಾರವನ್ನು ವಿದ್ಯಾರ್ಥಿಗಳು ತೆಗೆದುಕೊಳ್ಳಬೇಕು. ಆಸಕ್ತಿಗನುಗುಣವಾಗಿ ಆಯಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಸಮಾಜದಲ್ಲಿ ಸತ್ಪ್ರಜೆಯಾಗಿ ಬದುಕು ರೂಪಿಸಿಕೊಳ್ಳಬೇಕು ಎಂದರು.</p>.<p>ಶಿಕ್ಷಕರಾದ ವಾಸುದೇವ ವಿಶ್ವಕರ್ಮ, ನಾಗಪ್ಪ ಕೆಲ್ಲೂರು, ನೀಲನಗೌಡ, ನಾಗವೇಣಿ ಹೆಚ್., ಜಯಲಕ್ಷ್ಮಿ,<br />ಗಾಯತ್ರಿಬಾಯಿ, ಅಂಬುಜಾ, ಅಕ್ಕವiಹಾದೇವಿ, ಶಿವದೇವಿ, ಹೊನ್ನೂರಮ್ಮ, ಸಾವಿತ್ರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>