<p><strong>ರಾಯಚೂರು</strong>: ಇಲ್ಲಿನ ಕಲಾ ಸಂಕುಲ ಸಂಸ್ಥೆ ವತಿಯಿಂದ ಮಾ.16ರಂದು ಬೆಳಿಗ್ಗೆ 8ರಿಂದ ಸಂಜೆ 6 ಗಂಟೆಯವರೆಗೆ ರಾಜ್ಯಮಟ್ಟದ ನಾಲ್ಕನೇ ಚಿತ್ರಸಂತೆಯನ್ನು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಕಲಾ ಸಂಕುಲ ಸಂಸ್ಥೆಯ ಅಧ್ಯಕ್ಷೆ ರೇಖಾ ಬಡಿಗೇರ ಹೇಳಿದರು.</p>.<p>ಮೂರು ಚಿತ್ರ ಸಂತೆಗಳನ್ನು ಉದ್ಯಾನದ ಬಳಿ ನಡೆಸಲಾಗಿತ್ತು. ಬಿಸಿಲಿನ ತಾಪ ಹೆಚ್ಚಿರುವುದರಿಂದ ಈ ಬಾರಿ ರಂಗಮಂದಿರದಲ್ಲಿ ಆಯೋಜಿಸಲಾಗಿದೆ. ಚಿತ್ರಕಲಾವಿದರು ಬೇರೆ ರಾಜ್ಯ ಹಾಗೂ ಜಿಲ್ಲೆಗಳಿಂದ ಬರಲಿದ್ದಾರೆ. ಅವರಿಗೆ ಶೌಚಾಲಯ, ಕುಡಿಯುವ ನೀರು, ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ನಗರದಲ್ಲಿ ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.</p>.<p>ಕಲ್ಯಾಣ ಕರ್ನಾಟಕದ ಭಾಗದ ಕಲಾವಿದರಿಗೆ ಅನುಕೂಲವಾಗಲೆಂದು ರಾಯಚೂರಿನಲ್ಲಿ ಚಿತ್ರಸಂತೆ ಆಯೋಜಿಸಲಾಗಿದೆ. ಗೋವಾ, ಮುಂಬೈ, ಕೋಲ್ಹಾಪುರ ಹಾಗೂ ರಾಜ್ಯದ ವಿವಿಧೆಡೆಯಿಂದ ಚಿತ್ರಕಲಾವಿದರು ಈ ಚಿತ್ರಸಂತೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.</p>.<p>ಮಾ.10ರೊಳಗಾಗಿ ಆಸಕ್ತ ಚಿತ್ರಕಲಾವಿದರು ಅಮರಗೌಡ ಮೊ:8310235776, ಈರಣ್ಣ ಮೊ:9986724198 ಅವರನ್ನು ನೋಂದಣಿಗಾಗಿ ಸಂಪರ್ಕಿಸಬೇಕು ಎಂದು ತಿಳಿಸಿದರು.</p>.<p>ಕಲಾ ಸಂಕುಲ ಸಂಸ್ಥೆಯ ಕಾರ್ಯದರ್ಶಿ ಮಾರುತಿ ಬಡಿಗೇರ, ಚಿತ್ರಕಲಾವಿದ ಅಮರಗೌಡ, ಗಾಯಕಿ ಸಂತೋಷಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಇಲ್ಲಿನ ಕಲಾ ಸಂಕುಲ ಸಂಸ್ಥೆ ವತಿಯಿಂದ ಮಾ.16ರಂದು ಬೆಳಿಗ್ಗೆ 8ರಿಂದ ಸಂಜೆ 6 ಗಂಟೆಯವರೆಗೆ ರಾಜ್ಯಮಟ್ಟದ ನಾಲ್ಕನೇ ಚಿತ್ರಸಂತೆಯನ್ನು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಕಲಾ ಸಂಕುಲ ಸಂಸ್ಥೆಯ ಅಧ್ಯಕ್ಷೆ ರೇಖಾ ಬಡಿಗೇರ ಹೇಳಿದರು.</p>.<p>ಮೂರು ಚಿತ್ರ ಸಂತೆಗಳನ್ನು ಉದ್ಯಾನದ ಬಳಿ ನಡೆಸಲಾಗಿತ್ತು. ಬಿಸಿಲಿನ ತಾಪ ಹೆಚ್ಚಿರುವುದರಿಂದ ಈ ಬಾರಿ ರಂಗಮಂದಿರದಲ್ಲಿ ಆಯೋಜಿಸಲಾಗಿದೆ. ಚಿತ್ರಕಲಾವಿದರು ಬೇರೆ ರಾಜ್ಯ ಹಾಗೂ ಜಿಲ್ಲೆಗಳಿಂದ ಬರಲಿದ್ದಾರೆ. ಅವರಿಗೆ ಶೌಚಾಲಯ, ಕುಡಿಯುವ ನೀರು, ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ನಗರದಲ್ಲಿ ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.</p>.<p>ಕಲ್ಯಾಣ ಕರ್ನಾಟಕದ ಭಾಗದ ಕಲಾವಿದರಿಗೆ ಅನುಕೂಲವಾಗಲೆಂದು ರಾಯಚೂರಿನಲ್ಲಿ ಚಿತ್ರಸಂತೆ ಆಯೋಜಿಸಲಾಗಿದೆ. ಗೋವಾ, ಮುಂಬೈ, ಕೋಲ್ಹಾಪುರ ಹಾಗೂ ರಾಜ್ಯದ ವಿವಿಧೆಡೆಯಿಂದ ಚಿತ್ರಕಲಾವಿದರು ಈ ಚಿತ್ರಸಂತೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.</p>.<p>ಮಾ.10ರೊಳಗಾಗಿ ಆಸಕ್ತ ಚಿತ್ರಕಲಾವಿದರು ಅಮರಗೌಡ ಮೊ:8310235776, ಈರಣ್ಣ ಮೊ:9986724198 ಅವರನ್ನು ನೋಂದಣಿಗಾಗಿ ಸಂಪರ್ಕಿಸಬೇಕು ಎಂದು ತಿಳಿಸಿದರು.</p>.<p>ಕಲಾ ಸಂಕುಲ ಸಂಸ್ಥೆಯ ಕಾರ್ಯದರ್ಶಿ ಮಾರುತಿ ಬಡಿಗೇರ, ಚಿತ್ರಕಲಾವಿದ ಅಮರಗೌಡ, ಗಾಯಕಿ ಸಂತೋಷಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>