<p><strong>ರಾಯಚೂರು:</strong> ಜನವರಿ 6 ಹಾಗೂ 7 ರಂದು ದಾವಣಗೆರೆಯಲ್ಲಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್) ವತಿಯಿಂದ 7ನೇ ರಾಜ್ಯ ಮಟ್ಟದ ಮಹಿಳಾ ಸಮ್ಮೇಳನ ಏರ್ಪಡಿಸಲಾಗಿದೆ ಎಂದು ಸಂಘಟನೆಯ ರಾಜ್ಯ ಸೆಕ್ರೇಟೇರಿಯಟ್ ಸದಸ್ಯೆ ಗುಂಡಮ್ಮ ಮಡಿವಾಳ ತಿಳಿಸಿದರು.</p>.<p>ದೇಶಕ್ಕೆ ಸ್ವಾತಂತ್ರ್ಯ ಬಂದು 76 ವರ್ಷ ಕಳೆದರೂ ಮಹಿಳೆಯರ ಮೇಲಿನ ದೌರ್ಜನ್ಯ ನಿಂತಿಲ್ಲ. ಅಪ್ರಾಪ್ತ ಬಾಲಕಿಯರ ಹಾಗೂ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ ಎಂದು ಶುಕ್ರವಾರ ಮಾಧ್ಯಮ ಗೋಷ್ಠಿಯಲ್ಲಿ ಹೇಳಿದರು.</p>.<p>ಮಹಿಳೆಯರಿಗೆ ಶಿಕ್ಷಣ, ಉದ್ಯೋಗ, ಆರೋಗ್ಯ ಖಚಿತಪಡಿಸಬೇಕು. ದುಡಿಯುವ ಮಹಿಳೆಯರಿಗೆ ಕನಿಷ್ಠ ವೇತನ, ಸೇವಾ ಭದ್ರತೆ ಖಾತ್ರಿಪಡಿಸಬೇಕು ಎನ್ನುವ ಘೋಷ ವಾಕ್ಯಗಳೊಂದಿಗೆ ಎರಡು ದಿನ ಸಮ್ಮೇಳನ ಆಯೋಜಿಸಿ ಮಹಿಳೆಯರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದರು.</p>.<p>ಸಮ್ಮೇಳನದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಲಿದ್ದಾರೆ. ಪ್ರತಿನಿಧಿ ಸಭೆಯಲ್ಲಿ 800 ಮಹಿಳಾ ಮುಖಂಡರು ಭಾಗವಹಿಸುವರು. ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.</p>.<p>ಪದಾಧಿಕಾರಿಗಳಾದ ಸರೋಜಾ ಗೋನವಾರ, ಮೇಘನಾ ಹಾಗೂ ನವನೀತ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಜನವರಿ 6 ಹಾಗೂ 7 ರಂದು ದಾವಣಗೆರೆಯಲ್ಲಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್) ವತಿಯಿಂದ 7ನೇ ರಾಜ್ಯ ಮಟ್ಟದ ಮಹಿಳಾ ಸಮ್ಮೇಳನ ಏರ್ಪಡಿಸಲಾಗಿದೆ ಎಂದು ಸಂಘಟನೆಯ ರಾಜ್ಯ ಸೆಕ್ರೇಟೇರಿಯಟ್ ಸದಸ್ಯೆ ಗುಂಡಮ್ಮ ಮಡಿವಾಳ ತಿಳಿಸಿದರು.</p>.<p>ದೇಶಕ್ಕೆ ಸ್ವಾತಂತ್ರ್ಯ ಬಂದು 76 ವರ್ಷ ಕಳೆದರೂ ಮಹಿಳೆಯರ ಮೇಲಿನ ದೌರ್ಜನ್ಯ ನಿಂತಿಲ್ಲ. ಅಪ್ರಾಪ್ತ ಬಾಲಕಿಯರ ಹಾಗೂ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ ಎಂದು ಶುಕ್ರವಾರ ಮಾಧ್ಯಮ ಗೋಷ್ಠಿಯಲ್ಲಿ ಹೇಳಿದರು.</p>.<p>ಮಹಿಳೆಯರಿಗೆ ಶಿಕ್ಷಣ, ಉದ್ಯೋಗ, ಆರೋಗ್ಯ ಖಚಿತಪಡಿಸಬೇಕು. ದುಡಿಯುವ ಮಹಿಳೆಯರಿಗೆ ಕನಿಷ್ಠ ವೇತನ, ಸೇವಾ ಭದ್ರತೆ ಖಾತ್ರಿಪಡಿಸಬೇಕು ಎನ್ನುವ ಘೋಷ ವಾಕ್ಯಗಳೊಂದಿಗೆ ಎರಡು ದಿನ ಸಮ್ಮೇಳನ ಆಯೋಜಿಸಿ ಮಹಿಳೆಯರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದರು.</p>.<p>ಸಮ್ಮೇಳನದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಲಿದ್ದಾರೆ. ಪ್ರತಿನಿಧಿ ಸಭೆಯಲ್ಲಿ 800 ಮಹಿಳಾ ಮುಖಂಡರು ಭಾಗವಹಿಸುವರು. ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.</p>.<p>ಪದಾಧಿಕಾರಿಗಳಾದ ಸರೋಜಾ ಗೋನವಾರ, ಮೇಘನಾ ಹಾಗೂ ನವನೀತ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>