<p><strong>ಸಿರವಾರ</strong>: ‘ರಸಗೊಬ್ಬರ, ಕೀಟನಾಶಕ, ಬೀಜಗಳನ್ನು ಅಕ್ರಮವಾಗಿ ದಾಸ್ತಾನು ಮಾಡವುದಾಗಲಿ, ಅಧಿಕ ದರಕ್ಕೆ ಮಾರಾಟ ಮಾಡುವುದಾಗಲಿ ಕಂಡುಬಂದಲ್ಲಿ ಅಂತಹ ಮಾರಾಟ ಮಳಿಗಗಳ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಮಲ್ಲಟ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಮಾರುತಿ ಯರಗಲ್ ಎಚ್ಚರಿಕೆ ನೀಡಿದರು.</p>.<p>ತಾಲ್ಲೂಕಿನ ಮಲ್ಲಟ ರೈತ ಸಂಪರ್ಕ ಕೇಂದ್ರದ ವ್ಯಾಪ್ತಿಯ ನೂಗಡೋಣಿ, ಎನ್. ಹೊಸೂರ, ಬಲ್ಲಟಗಿ, ಬಸವಣ್ಣ ಕ್ಯಾಂಪ್ ಮತ್ತು ಬಾಗಲವಾಡ ಗ್ರಾಮಗಳಲ್ಲಿನ ರಸಗೊಬ್ಬರ, ಕೀಟನಾಶಕ ಮಾರಾಟ ಮಳಿಗೆಗಳಿಗೆ ಬುಧವಾರ ಭೇಟಿ ನೀಡಿ ದಾಸ್ತಾನು ಪರಿಶೀಲನೆ ನಡೆಸಿ ಮಾತನಾಡಿದರು.</p>.<p>‘ರಸಗೊಬ್ಬರ ಅಗತ್ಯ ವಸ್ತುಗಳ ಕಾಯ್ದೆಯಡಿ ಬರುವುದರಿಂದ, ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು, ಅಕ್ರಮ ದಾಸ್ತಾನು ಮಾಡುವುದು, ಅವಧಿ ಮೀರಿದ, ಬೀಜ ಹಾಗೂ ಕೀಟನಾಶಕಗಳ ಮಾರಾಟ, ನಿಷೇಧಿತ ಬಯೋ ಕೀಟನಾಶಕಗಳ ಮಾರಾಟ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>‘ನಿತ್ಯವೂ ದಾಸ್ತಾನು ಫಲಕ (ಸ್ಟಾಕ್ ಬೋರ್ಡ್) ಬರೆಯಬೇಕು. ರೈತರಿಗೆ ಖರೀದಿಯ ರಶೀದಿ ನೀಡುವುದು ಕಡ್ಡಾಯವಾಗಿದೆ’ ಎಂದು ತಾಕೀತು ಮಾಡಿದರು.</p>.<p>ಕೃಷಿ ವ್ಯವಸ್ಥಾಪಕ ನಾಗರಾಜ ಕಂಬಾರ, ಆಂಜನೇಯ, ಕೃಷಿ ಮಿತ್ರರು ಹಾಗೂ ಅಂಗಡಿ ಮಾಲೀಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರವಾರ</strong>: ‘ರಸಗೊಬ್ಬರ, ಕೀಟನಾಶಕ, ಬೀಜಗಳನ್ನು ಅಕ್ರಮವಾಗಿ ದಾಸ್ತಾನು ಮಾಡವುದಾಗಲಿ, ಅಧಿಕ ದರಕ್ಕೆ ಮಾರಾಟ ಮಾಡುವುದಾಗಲಿ ಕಂಡುಬಂದಲ್ಲಿ ಅಂತಹ ಮಾರಾಟ ಮಳಿಗಗಳ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಮಲ್ಲಟ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಮಾರುತಿ ಯರಗಲ್ ಎಚ್ಚರಿಕೆ ನೀಡಿದರು.</p>.<p>ತಾಲ್ಲೂಕಿನ ಮಲ್ಲಟ ರೈತ ಸಂಪರ್ಕ ಕೇಂದ್ರದ ವ್ಯಾಪ್ತಿಯ ನೂಗಡೋಣಿ, ಎನ್. ಹೊಸೂರ, ಬಲ್ಲಟಗಿ, ಬಸವಣ್ಣ ಕ್ಯಾಂಪ್ ಮತ್ತು ಬಾಗಲವಾಡ ಗ್ರಾಮಗಳಲ್ಲಿನ ರಸಗೊಬ್ಬರ, ಕೀಟನಾಶಕ ಮಾರಾಟ ಮಳಿಗೆಗಳಿಗೆ ಬುಧವಾರ ಭೇಟಿ ನೀಡಿ ದಾಸ್ತಾನು ಪರಿಶೀಲನೆ ನಡೆಸಿ ಮಾತನಾಡಿದರು.</p>.<p>‘ರಸಗೊಬ್ಬರ ಅಗತ್ಯ ವಸ್ತುಗಳ ಕಾಯ್ದೆಯಡಿ ಬರುವುದರಿಂದ, ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು, ಅಕ್ರಮ ದಾಸ್ತಾನು ಮಾಡುವುದು, ಅವಧಿ ಮೀರಿದ, ಬೀಜ ಹಾಗೂ ಕೀಟನಾಶಕಗಳ ಮಾರಾಟ, ನಿಷೇಧಿತ ಬಯೋ ಕೀಟನಾಶಕಗಳ ಮಾರಾಟ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>‘ನಿತ್ಯವೂ ದಾಸ್ತಾನು ಫಲಕ (ಸ್ಟಾಕ್ ಬೋರ್ಡ್) ಬರೆಯಬೇಕು. ರೈತರಿಗೆ ಖರೀದಿಯ ರಶೀದಿ ನೀಡುವುದು ಕಡ್ಡಾಯವಾಗಿದೆ’ ಎಂದು ತಾಕೀತು ಮಾಡಿದರು.</p>.<p>ಕೃಷಿ ವ್ಯವಸ್ಥಾಪಕ ನಾಗರಾಜ ಕಂಬಾರ, ಆಂಜನೇಯ, ಕೃಷಿ ಮಿತ್ರರು ಹಾಗೂ ಅಂಗಡಿ ಮಾಲೀಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>