<p><strong>ಜಾಲಹಳ್ಳಿ:</strong> ಗಲಗ ಗ್ರಾಮದ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬರನ್ನು ಕೊಠಡಿಯಲ್ಲಿ ಕೂಡಿ ಹಾಕಿ ಥಳಿಸಿದ ಆರೋಪದ ಮೇಲೆ ಅತಿಥಿ ಶಿಕ್ಷಕಿ ಹರ್ಷಿಯಾ ತಸ್ಕಿನ್ ಎಂಬುವವರನ್ನು ಕೆಲಸದಿಂದ ಬಿಡುಗಡೆ ಮಾಡಲಾಗಿದೆ.</p>.<p>ವಿದ್ಯಾರ್ಥಿಯ ಪಾಲಕರು ಶಾಲೆಗೆ ಭೇಟಿ ನೀಡಿ ಹಲ್ಲೆ ನಡೆಸಿದ ಕುರಿತು ವಿಚಾರಿಸಿದಾಗ,‘ವಿದ್ಯಾರ್ಥಿಗೆ ಓದು–ಬರಹ ಬರುವುದಿಲ್ಲ’ ಎಂದು ಶಿಕ್ಷಕರು ಉತ್ತರಿಸಿದ್ದಾರೆ. ಆಗ ‘ಮಗನ ವರ್ಗಾವಣೆ ಪ್ರಮಾಣ ಪತ್ರ ನೀಡಿ, ನಾವು ಬೇರೆ ಶಾಲೆಗೆ ಸೇರಿಸುತ್ತೇವೆ’ ಎಂದು ಮುಖ್ಯಶಿಕ್ಷಕರಿಗೆ ಪಾಲಕರು ತಿಳಿಸಿದ್ದಾರೆ.</p>.<p>‘ಮೂರನೇ ತರಗತಿಯ ಬಾಲಕನಿಗೆ ಓದಲು ಬರುವುದಿಲ್ಲ ಎಂದು ಹೇಳಿ ಈ ರೀತಿ ಥಳಿಸುವುದು ಎಷ್ಟು ಸರಿ’ ಎಂದು ಪಾಲಕರು ಪ್ರಶ್ನಿಸಿದ್ದಾರೆ. ಘಟನೆಯ ಕುರಿತು ಶಾಲೆಯ ಮುಖ್ಯಶಿಕ್ಷಕರು ಮೇಲಧಿಕಾರಿಗಳ ಗಮನಕ್ಕೆ ತಂದಿದ್ದಾರೆ.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಮಲ್ಲಿಕಾರ್ಜುನ, ಬಿಆರ್ಪಿ ಶಿವರಾಜ ನಾಯಕ ಪೂಜಾರಿ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿ ಅತಿಥಿ ಶಿಕ್ಷಕಿಯನ್ನು ಸೇವೆಯಿಂದ ಬಿಡುಗಡೆಗೊಳಿಸಿದ್ದಾರೆ. ವಿಷಯ ತಿಳಿದು ಜಾಲಹಳ್ಳಿ ಪಿಎಸ್ಐ ವೈಶಾಲಿ ಝಳಕಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಾಲಹಳ್ಳಿ:</strong> ಗಲಗ ಗ್ರಾಮದ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬರನ್ನು ಕೊಠಡಿಯಲ್ಲಿ ಕೂಡಿ ಹಾಕಿ ಥಳಿಸಿದ ಆರೋಪದ ಮೇಲೆ ಅತಿಥಿ ಶಿಕ್ಷಕಿ ಹರ್ಷಿಯಾ ತಸ್ಕಿನ್ ಎಂಬುವವರನ್ನು ಕೆಲಸದಿಂದ ಬಿಡುಗಡೆ ಮಾಡಲಾಗಿದೆ.</p>.<p>ವಿದ್ಯಾರ್ಥಿಯ ಪಾಲಕರು ಶಾಲೆಗೆ ಭೇಟಿ ನೀಡಿ ಹಲ್ಲೆ ನಡೆಸಿದ ಕುರಿತು ವಿಚಾರಿಸಿದಾಗ,‘ವಿದ್ಯಾರ್ಥಿಗೆ ಓದು–ಬರಹ ಬರುವುದಿಲ್ಲ’ ಎಂದು ಶಿಕ್ಷಕರು ಉತ್ತರಿಸಿದ್ದಾರೆ. ಆಗ ‘ಮಗನ ವರ್ಗಾವಣೆ ಪ್ರಮಾಣ ಪತ್ರ ನೀಡಿ, ನಾವು ಬೇರೆ ಶಾಲೆಗೆ ಸೇರಿಸುತ್ತೇವೆ’ ಎಂದು ಮುಖ್ಯಶಿಕ್ಷಕರಿಗೆ ಪಾಲಕರು ತಿಳಿಸಿದ್ದಾರೆ.</p>.<p>‘ಮೂರನೇ ತರಗತಿಯ ಬಾಲಕನಿಗೆ ಓದಲು ಬರುವುದಿಲ್ಲ ಎಂದು ಹೇಳಿ ಈ ರೀತಿ ಥಳಿಸುವುದು ಎಷ್ಟು ಸರಿ’ ಎಂದು ಪಾಲಕರು ಪ್ರಶ್ನಿಸಿದ್ದಾರೆ. ಘಟನೆಯ ಕುರಿತು ಶಾಲೆಯ ಮುಖ್ಯಶಿಕ್ಷಕರು ಮೇಲಧಿಕಾರಿಗಳ ಗಮನಕ್ಕೆ ತಂದಿದ್ದಾರೆ.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಮಲ್ಲಿಕಾರ್ಜುನ, ಬಿಆರ್ಪಿ ಶಿವರಾಜ ನಾಯಕ ಪೂಜಾರಿ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿ ಅತಿಥಿ ಶಿಕ್ಷಕಿಯನ್ನು ಸೇವೆಯಿಂದ ಬಿಡುಗಡೆಗೊಳಿಸಿದ್ದಾರೆ. ವಿಷಯ ತಿಳಿದು ಜಾಲಹಳ್ಳಿ ಪಿಎಸ್ಐ ವೈಶಾಲಿ ಝಳಕಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>