<p><strong>ರಾಯಚೂರು:</strong> ‘ಪೂರ್ಣಿಮಾ ಪಿಯು ಕಾಲೇಜ್ ವೇದಾಂತ ಪದವಿ ಕಾಲೇಜ್ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ಸಹಯೋಗದಲ್ಲಿ ಎಸ್ಎಸ್ಎಲ್ಸಿ ಅಭ್ಯಾಸ ಪುಸ್ತಕ ವಿತರಣೆ ಕಾರ್ಯಕ್ರಮ ರಾಯಚೂರು ತಾಲ್ಲೂಕಿನ ಸಗಮಕುಂಟ. ಗಿಲ್ಲೆಸೂರ್. ಗುಂಜಹಳ್ಳಿ ಹಾಗೂ ಯರಗೇರ ಸರ್ಕಾರಿ ಪ್ರೌಢಶಾಲೆಗಳಲ್ಲಿ ನಡೆಯಿತು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಈರಣ್ಣ ಕೋಸಗಿ ಮಾತನಾಡಿ, ‘ಎಸ್ಎಸ್ಎಲ್ಸಿ ವಿದ್ಯಾಭ್ಯಾಸದ ಮೈಲುಗಲ್ಲು ಇದನ್ನು ಉತ್ತೀರ್ಣ ಆಗುವ ಮೂಲಕ ಮುಂದಿನ ಭವಿಷ್ಯ ಕಟ್ಟಿಕೊಳ್ಳಲು ಅನುಕೂಲವಾಗುತ್ತದೆ. ಈಗ ಅಭ್ಯಾಸಕ್ಕೆ ಹೆಚ್ಚಿನ ಸಮಯ ಕೊಡಬೇಕು’ ಎಂದರು.</p>.<p>‘ದೊಡ್ಡ ಕನಸನ್ನು ಕಂಡು ಗುರಿಯತ್ತ ಮುನ್ನಡೆಯಬೇಕು. ತಂದೆ ತಾಯಿ ತಮ್ಮ ಮಕ್ಕಳ ಭವಿಷ್ಯ ಉಜ್ವಲವಾಗಲಿ ಎಂಬ ಕನಸು ಕಟ್ಟಿ ಕಷ್ಟಪಟ್ಟು ಶಾಲೆಗೆ ಕಳಿಸುತ್ತಾರೆ. ವಿದ್ಯಾರ್ಥಿಗಳು ಪಾಲಕರ ವಿಶ್ವಾಸ ಉಳಿಸಿಕೊಳ್ಳಬೇಕು‘ ಎಂದು ಹೇಳಿದರು.</p>.<p>ವೇದಾಂತ ಕಾಲೇಜಿನ ಪ್ರಾಚಾರ್ಯ ಮಾತನಾಡಿದರು. ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ಪೂರ್ಣಿಮಾ ಪಿಯು ಕಾಲೇಜ್ ವೇದಾಂತ ಪದವಿ ಕಾಲೇಜ್ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ಸಹಯೋಗದಲ್ಲಿ ಎಸ್ಎಸ್ಎಲ್ಸಿ ಅಭ್ಯಾಸ ಪುಸ್ತಕ ವಿತರಣೆ ಕಾರ್ಯಕ್ರಮ ರಾಯಚೂರು ತಾಲ್ಲೂಕಿನ ಸಗಮಕುಂಟ. ಗಿಲ್ಲೆಸೂರ್. ಗುಂಜಹಳ್ಳಿ ಹಾಗೂ ಯರಗೇರ ಸರ್ಕಾರಿ ಪ್ರೌಢಶಾಲೆಗಳಲ್ಲಿ ನಡೆಯಿತು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಈರಣ್ಣ ಕೋಸಗಿ ಮಾತನಾಡಿ, ‘ಎಸ್ಎಸ್ಎಲ್ಸಿ ವಿದ್ಯಾಭ್ಯಾಸದ ಮೈಲುಗಲ್ಲು ಇದನ್ನು ಉತ್ತೀರ್ಣ ಆಗುವ ಮೂಲಕ ಮುಂದಿನ ಭವಿಷ್ಯ ಕಟ್ಟಿಕೊಳ್ಳಲು ಅನುಕೂಲವಾಗುತ್ತದೆ. ಈಗ ಅಭ್ಯಾಸಕ್ಕೆ ಹೆಚ್ಚಿನ ಸಮಯ ಕೊಡಬೇಕು’ ಎಂದರು.</p>.<p>‘ದೊಡ್ಡ ಕನಸನ್ನು ಕಂಡು ಗುರಿಯತ್ತ ಮುನ್ನಡೆಯಬೇಕು. ತಂದೆ ತಾಯಿ ತಮ್ಮ ಮಕ್ಕಳ ಭವಿಷ್ಯ ಉಜ್ವಲವಾಗಲಿ ಎಂಬ ಕನಸು ಕಟ್ಟಿ ಕಷ್ಟಪಟ್ಟು ಶಾಲೆಗೆ ಕಳಿಸುತ್ತಾರೆ. ವಿದ್ಯಾರ್ಥಿಗಳು ಪಾಲಕರ ವಿಶ್ವಾಸ ಉಳಿಸಿಕೊಳ್ಳಬೇಕು‘ ಎಂದು ಹೇಳಿದರು.</p>.<p>ವೇದಾಂತ ಕಾಲೇಜಿನ ಪ್ರಾಚಾರ್ಯ ಮಾತನಾಡಿದರು. ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>