<p><strong>ಮಾನ್ವಿ (ರಾಯಚೂರು):</strong> ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ನೆರವಾಗಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಕಚೇರಿಯ ಸಿಬ್ಬಂದಿ ಸಂಚಾರಿ ವಾಹನದ ಮೂಲಕ ಆರಂಭಿಸಿರುವ ಅರ್ಜಿ ಭರ್ತಿ ಅಭಿಯಾನಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ.</p>.<p>ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರ ಮೆಟ್ರಿಕ್ ನಂತರದ ಹಿಂದುಳಿದ ವರ್ಗ, ಅಲ್ಪಸಂಖ್ಯಾತ, ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ ನೂತನ ಎಸ್ಎಸ್ಪಿ ಆನ್ಲೈನ್ ಪೋರ್ಟಲ್ ವ್ಯವಸ್ಥೆ ಜಾರಿಗೊಳಿಸಿದೆ.</p>.<p>ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗಾಗಿ ಖಾಸಗಿ ಕಂಪ್ಯೂಟರ್ ಸೇವಾ ಕೇಂದ್ರಗಳ ಮೊರೆ ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಹೊಸ ಉಚಿತ ವ್ಯವಸ್ಥೆಯಿಂದ ಅನುಕೂಲವಾಗಿದೆ. ಪ್ರತಿ ಅರ್ಜಿ ಸಲ್ಲಿಕೆಗೆ ₹ 50 ರಿಂದ ₹ 100 ಖರ್ಚು ಮಾಡುವುದು ತಪ್ಪಿಸಿದಂತಾಗಿದೆ.</p>.<p>ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಕಚೇರಿಯ ಸಿಬ್ಬಂದಿ ರಾಜ್ಯದಲ್ಲೇ ವಿನೂತನ ಪ್ರಯತ್ನವಾಗಿ ಅರ್ಜಿಗಳ ಭರ್ತಿಗೆ ಖುದ್ದಾಗಿ ಕಾಲೇಜುಗಳಿಗೆ ತೆರಳುತ್ತಿದ್ದಾರೆ. ಕಾಲೇಜು ವಿದ್ಯಾರ್ಥಿಗಳಿಂದ ದಾಖಲಾತಿಗಳನ್ನು ಪಡೆದು ಸ್ಥಳದಲ್ಲಿಯೇ ಉಚಿತವಾಗಿ ಅರ್ಜಿಗಳನ್ನು ಭರ್ತಿ ಮಾಡಿಕೊಳ್ಳುತ್ತಿದ್ದಾರೆ.</p>.<p>ಸ್ಥಳೀಯ ಶಾಸಕ ರಾಜಾ ವೆಂಕಟಪ್ಪ ನಾಯಕ ನ.25ರಂದು ಮಾನ್ವಿ ಪಟ್ಟಣದಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಿದರು. ಸಂಚಾರಿ ವಾಹನದಲ್ಲಿ ಲ್ಯಾಪ್ಟಾಪ್ ಕಂಪ್ಯೂಟರ್, ಇಂಟರ್ನೆಟ್ ವ್ಯವಸ್ಥೆ ಸೇರಿ ಅಗತ್ಯ ಸಾಮಾಗ್ರಿಗಳ ಸಮೇತ ಕಾಲೇಜುಗಳಿಗೆ ಭೇಟಿ ನೀಡುವ ಸಿಬ್ಬಂದಿ ಸ್ಥಳದಲ್ಲಿಯೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳಿಸುತ್ತಾರೆ.</p>.<p>ವಿದ್ಯುತ್ ಹಾಗೂ ಸರ್ವರ್ ಸಮಸ್ಯೆ, ದಾಖಲಾತಿಗಳ ಮಾಹಿತಿ ಕೊರತೆಯಿಂದ ನಿಗದಿತ ಸಮಯಕ್ಕೆ ಅರ್ಜಿ ಸಲ್ಲಿಸದೆ ವಂಚಿತರಾಗುತ್ತಿದ್ದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಈ ಹೊಸ ವ್ಯವಸ್ಥೆಯಿಂದ ಅನುಕೂಲವಾಗಿದೆ.</p>.<p>ಮಾನ್ವಿ ಪಟ್ಟಣ, ಸಿರವಾರ, ಕವಿತಾಳದ 10ಕ್ಕೂ ಅಧಿಕ ಕಾಲೇಜುಗಳಿಗೆ ತೆರಳಿರುವ ಪರಿಶಿಷ್ಟ ವರ್ಗ ಕಲ್ಯಾಣ ಇಲಾಖೆ ಸಿಬ್ಬಂದಿ ಈವರೆಗೆ ಪರಿಶಿಷ್ಟ ವರ್ಗಕ್ಕೆ ಸೇರಿದ 650ಕ್ಕೂ ಅಧಿಕ ವಿದ್ಯಾರ್ಥಿಗಳ ಅರ್ಜಿ ಭರ್ತಿ ಮಾಡಿದ್ದಾರೆ.</p>.<p>ಸಂಚಾರಿ ವಾಹನದ ಭೇಟಿಯ ವಿವರದ ಕುರಿತು ಕಾಲೇಜುಗಳಿಗೆ ಮುಂಚಿತವಾಗಿ ಮಾಹಿತಿ ನೀಡುವ ಇಲಾಖೆಯ ಸಿಬ್ಬಂದಿ ನಿಗದಿತ ದಿನಾಂಕದಂದು ತೆರಳಿ ವಿದ್ಯಾರ್ಥಿ ವೇತನದ ಅರ್ಜಿಗಳನ್ನು ಭರ್ತಿ ಮಾಡುತ್ತಿದ್ದಾರೆ.</p>.<p>‘ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳ ಜತೆಗೆ ಇತರೇ ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಹಾಗೂ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಕೂಡ ಎಸ್ಎಸ್ಪಿ ಪೋರ್ಟಲ್ ಮೂಲಕ ವಿದ್ಯಾರ್ಥಿ ವೇತನ ಅರ್ಜಿ ಭರ್ತಿಗೆ ಅವಕಾಶ ಕಲ್ಪಿಸಲಾಗುವುದು’ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಕೆ ಅವಧಿಯನ್ನು ಡಿ.31ರವರೆಗೆ ವಿಸ್ತರಿಸಲಾಗಿದ್ದು ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಅರ್ಜಿ ಸಲ್ಲಿಕೆ ಪ್ರಮಾಣ ಹೆಚ್ಚಾಗಲಿದೆ’ ಎಂದು ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ (ರಾಯಚೂರು):</strong> ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ನೆರವಾಗಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಕಚೇರಿಯ ಸಿಬ್ಬಂದಿ ಸಂಚಾರಿ ವಾಹನದ ಮೂಲಕ ಆರಂಭಿಸಿರುವ ಅರ್ಜಿ ಭರ್ತಿ ಅಭಿಯಾನಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ.</p>.<p>ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರ ಮೆಟ್ರಿಕ್ ನಂತರದ ಹಿಂದುಳಿದ ವರ್ಗ, ಅಲ್ಪಸಂಖ್ಯಾತ, ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ ನೂತನ ಎಸ್ಎಸ್ಪಿ ಆನ್ಲೈನ್ ಪೋರ್ಟಲ್ ವ್ಯವಸ್ಥೆ ಜಾರಿಗೊಳಿಸಿದೆ.</p>.<p>ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗಾಗಿ ಖಾಸಗಿ ಕಂಪ್ಯೂಟರ್ ಸೇವಾ ಕೇಂದ್ರಗಳ ಮೊರೆ ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಹೊಸ ಉಚಿತ ವ್ಯವಸ್ಥೆಯಿಂದ ಅನುಕೂಲವಾಗಿದೆ. ಪ್ರತಿ ಅರ್ಜಿ ಸಲ್ಲಿಕೆಗೆ ₹ 50 ರಿಂದ ₹ 100 ಖರ್ಚು ಮಾಡುವುದು ತಪ್ಪಿಸಿದಂತಾಗಿದೆ.</p>.<p>ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಕಚೇರಿಯ ಸಿಬ್ಬಂದಿ ರಾಜ್ಯದಲ್ಲೇ ವಿನೂತನ ಪ್ರಯತ್ನವಾಗಿ ಅರ್ಜಿಗಳ ಭರ್ತಿಗೆ ಖುದ್ದಾಗಿ ಕಾಲೇಜುಗಳಿಗೆ ತೆರಳುತ್ತಿದ್ದಾರೆ. ಕಾಲೇಜು ವಿದ್ಯಾರ್ಥಿಗಳಿಂದ ದಾಖಲಾತಿಗಳನ್ನು ಪಡೆದು ಸ್ಥಳದಲ್ಲಿಯೇ ಉಚಿತವಾಗಿ ಅರ್ಜಿಗಳನ್ನು ಭರ್ತಿ ಮಾಡಿಕೊಳ್ಳುತ್ತಿದ್ದಾರೆ.</p>.<p>ಸ್ಥಳೀಯ ಶಾಸಕ ರಾಜಾ ವೆಂಕಟಪ್ಪ ನಾಯಕ ನ.25ರಂದು ಮಾನ್ವಿ ಪಟ್ಟಣದಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಿದರು. ಸಂಚಾರಿ ವಾಹನದಲ್ಲಿ ಲ್ಯಾಪ್ಟಾಪ್ ಕಂಪ್ಯೂಟರ್, ಇಂಟರ್ನೆಟ್ ವ್ಯವಸ್ಥೆ ಸೇರಿ ಅಗತ್ಯ ಸಾಮಾಗ್ರಿಗಳ ಸಮೇತ ಕಾಲೇಜುಗಳಿಗೆ ಭೇಟಿ ನೀಡುವ ಸಿಬ್ಬಂದಿ ಸ್ಥಳದಲ್ಲಿಯೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳಿಸುತ್ತಾರೆ.</p>.<p>ವಿದ್ಯುತ್ ಹಾಗೂ ಸರ್ವರ್ ಸಮಸ್ಯೆ, ದಾಖಲಾತಿಗಳ ಮಾಹಿತಿ ಕೊರತೆಯಿಂದ ನಿಗದಿತ ಸಮಯಕ್ಕೆ ಅರ್ಜಿ ಸಲ್ಲಿಸದೆ ವಂಚಿತರಾಗುತ್ತಿದ್ದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಈ ಹೊಸ ವ್ಯವಸ್ಥೆಯಿಂದ ಅನುಕೂಲವಾಗಿದೆ.</p>.<p>ಮಾನ್ವಿ ಪಟ್ಟಣ, ಸಿರವಾರ, ಕವಿತಾಳದ 10ಕ್ಕೂ ಅಧಿಕ ಕಾಲೇಜುಗಳಿಗೆ ತೆರಳಿರುವ ಪರಿಶಿಷ್ಟ ವರ್ಗ ಕಲ್ಯಾಣ ಇಲಾಖೆ ಸಿಬ್ಬಂದಿ ಈವರೆಗೆ ಪರಿಶಿಷ್ಟ ವರ್ಗಕ್ಕೆ ಸೇರಿದ 650ಕ್ಕೂ ಅಧಿಕ ವಿದ್ಯಾರ್ಥಿಗಳ ಅರ್ಜಿ ಭರ್ತಿ ಮಾಡಿದ್ದಾರೆ.</p>.<p>ಸಂಚಾರಿ ವಾಹನದ ಭೇಟಿಯ ವಿವರದ ಕುರಿತು ಕಾಲೇಜುಗಳಿಗೆ ಮುಂಚಿತವಾಗಿ ಮಾಹಿತಿ ನೀಡುವ ಇಲಾಖೆಯ ಸಿಬ್ಬಂದಿ ನಿಗದಿತ ದಿನಾಂಕದಂದು ತೆರಳಿ ವಿದ್ಯಾರ್ಥಿ ವೇತನದ ಅರ್ಜಿಗಳನ್ನು ಭರ್ತಿ ಮಾಡುತ್ತಿದ್ದಾರೆ.</p>.<p>‘ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳ ಜತೆಗೆ ಇತರೇ ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಹಾಗೂ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಕೂಡ ಎಸ್ಎಸ್ಪಿ ಪೋರ್ಟಲ್ ಮೂಲಕ ವಿದ್ಯಾರ್ಥಿ ವೇತನ ಅರ್ಜಿ ಭರ್ತಿಗೆ ಅವಕಾಶ ಕಲ್ಪಿಸಲಾಗುವುದು’ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಕೆ ಅವಧಿಯನ್ನು ಡಿ.31ರವರೆಗೆ ವಿಸ್ತರಿಸಲಾಗಿದ್ದು ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಅರ್ಜಿ ಸಲ್ಲಿಕೆ ಪ್ರಮಾಣ ಹೆಚ್ಚಾಗಲಿದೆ’ ಎಂದು ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>