ಪರೀಕ್ಷೆ ನಂತರ ಪ್ರತಿಕ್ರಿಯಿಸಿದ ಹಲವು ವಿದ್ಯಾರ್ಥಿಗಳು, 'ರಸಾಯನ ಶಾಸ್ತ್ರ ವಿಷಯದಲ್ಲಿ ಆರು ಮತ್ತು ಭೌತಶಾಸ್ತ್ರ ವಿಷಯದಲ್ಲಿ ಐದು ಪ್ರಶ್ನೆಗಳು ಪರೀಕ್ಷೆಗೆ ನಿಗದಿತ ಪಠ್ಯಕ್ರಮದಿಂದ ಹೊರತಾಗಿದ್ದವು' ಎಂದು ದೂರಿದರು.
ಪ್ರವೇಶ ಪತ್ರದಲ್ಲಿ ನಮೂದಿಸಲಾದ ಪರೀಕ್ಷಾ ಕೇಂದ್ರಗಳ ವಿಳಾಸ ಗೊಂದಲದಿಂದಾಗಿ ಪರೀಕ್ಷಾ ಕೇಂದ್ರವನ್ನು ಪತ್ತೆ ಹಚ್ಚಲು ಪರದಾಡಬೇಕಾಯಿತು ಎಂದು ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಕೆಲ ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳ ಕೆಲವು ಪಾಲಕರು ಮಾತನಾಡಿ, 'ಮುಂದಿನ ಬಾರಿ ತಾಲ್ಲೂಕು ಕೇಂದ್ರಗಳಲ್ಲಿಯೂ ಸಿಇಟಿ ಪರೀಕ್ಷಾ ಕೇಂದ್ರಗಳ ವ್ಯವಸ್ಥೆ ಕಲ್ಪಿಸಬೇಕು. ಸಿಇಟಿ ಪರೀಕ್ಷೆಗಾಗಿ ದೂರದ ಲಿಂಗಸೂಗುರು, ಮುದಗಲ್ ಭಾಗದ ಗ್ರಾಮಗಳಿಂದ ನಿತ್ಯ ರಾಯಚೂರು ಜಿಲ್ಲಾ ಕೇಂದ್ರಕ್ಕೆ ಬರಲು ತೊಂದರೆಯಾಗುತ್ತಿದೆ. ಸಾರಿಗೆ ಬಸ್ಗಳ ಕೊರತೆಯಿಂದ ನಿಗದಿತ ಸಮಯಕ್ಕೆ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ' ಎಂದು ತಿಳಿಸಿದರು.