<p><strong>ಶಕ್ತಿನಗರ</strong>: 'ಜ್ಞಾನ ಸಮುದ್ರದ ವೈಶಾಲ್ಯತೆಯನ್ನು ಮೀರಿದ ಸಾಧನಶೀಲತೆಯನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು' ಎಂದು ಆರ್ಟಿಪಿಎಸ್ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಶಶಿಕಾಂತ ಹೇಳಿದರು.</p>.<p>ಕರ್ನಾಟಕ ವಿದ್ಯುತ್ ನಿಗಮದ(ಕೆಪಿಸಿಎಲ್)ದಯಾನಂದ ಆಂಗ್ಲೋ ವೇದಿಕೆಯ(ಡಿಎವಿ ಪಬ್ಲಿಕ್ ಸ್ಕೂಲ್) ಶಾಲೆಯಲ್ಲಿ 2021-22ನೇ ಸಾಲಿನ ಶಾಲಾ ವಿದ್ಯಾರ್ಥಿ ಪರಿಷತ್ತಿನ ವಿವಿಧ ಸ್ಥಾನಗಳಿಗೆ ಮೆರಿಟ್ ವಿದ್ಯಾರ್ಹತೆಯ ಮೇಲೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.</p>.<p>ದೈಹಿಕ ಶಿಕ್ಷಣ ಶಿಕ್ಷಕರು, ವಿದ್ಯಾರ್ಥಿ ಪರಿಷತ್ತಿನ ಸದಸ್ಯರ ಆಕರ್ಷಕ ಸಮವಸ್ತ್ರದೊಂದಿಗಿನ ಸಾಮೂಹಿಕ ಪಥಸಂಚಲನ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು. ಪ್ರಾಚಾರ್ಯ ವಿ.ಕೆ. ಅಂಗಡಿ ಸ್ವಾಗತಿಸಿದರು.</p>.<p>ಶಿಕ್ಷಕಿ ಗೀತಾ ನಾಯಕ ನಿರೂಪಿಸಿದರು. ಶಿಕ್ಷಕ ಮೋಹನ ಉಪ್ಪೇರಿ ವಂದಿಸಿದರು.</p>.<p>ಆರ್ಟಿಪಿಎಸ್ ಮುಖ್ಯ ಎಂಜಿನಿಯರ್ ರಾಜಮುಡಿ, ಕೇಂದ್ರ ಭದ್ರತಾ ಪಡೆಯ(ಸಿಐಎಸ್ಎಫ್) ಕಮಾಂಡೆಂಟ್ ಸಂತೋಷ್ ಕುಮಾರ್ ಪಾಸ್ವಾನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಕ್ತಿನಗರ</strong>: 'ಜ್ಞಾನ ಸಮುದ್ರದ ವೈಶಾಲ್ಯತೆಯನ್ನು ಮೀರಿದ ಸಾಧನಶೀಲತೆಯನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು' ಎಂದು ಆರ್ಟಿಪಿಎಸ್ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಶಶಿಕಾಂತ ಹೇಳಿದರು.</p>.<p>ಕರ್ನಾಟಕ ವಿದ್ಯುತ್ ನಿಗಮದ(ಕೆಪಿಸಿಎಲ್)ದಯಾನಂದ ಆಂಗ್ಲೋ ವೇದಿಕೆಯ(ಡಿಎವಿ ಪಬ್ಲಿಕ್ ಸ್ಕೂಲ್) ಶಾಲೆಯಲ್ಲಿ 2021-22ನೇ ಸಾಲಿನ ಶಾಲಾ ವಿದ್ಯಾರ್ಥಿ ಪರಿಷತ್ತಿನ ವಿವಿಧ ಸ್ಥಾನಗಳಿಗೆ ಮೆರಿಟ್ ವಿದ್ಯಾರ್ಹತೆಯ ಮೇಲೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.</p>.<p>ದೈಹಿಕ ಶಿಕ್ಷಣ ಶಿಕ್ಷಕರು, ವಿದ್ಯಾರ್ಥಿ ಪರಿಷತ್ತಿನ ಸದಸ್ಯರ ಆಕರ್ಷಕ ಸಮವಸ್ತ್ರದೊಂದಿಗಿನ ಸಾಮೂಹಿಕ ಪಥಸಂಚಲನ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು. ಪ್ರಾಚಾರ್ಯ ವಿ.ಕೆ. ಅಂಗಡಿ ಸ್ವಾಗತಿಸಿದರು.</p>.<p>ಶಿಕ್ಷಕಿ ಗೀತಾ ನಾಯಕ ನಿರೂಪಿಸಿದರು. ಶಿಕ್ಷಕ ಮೋಹನ ಉಪ್ಪೇರಿ ವಂದಿಸಿದರು.</p>.<p>ಆರ್ಟಿಪಿಎಸ್ ಮುಖ್ಯ ಎಂಜಿನಿಯರ್ ರಾಜಮುಡಿ, ಕೇಂದ್ರ ಭದ್ರತಾ ಪಡೆಯ(ಸಿಐಎಸ್ಎಫ್) ಕಮಾಂಡೆಂಟ್ ಸಂತೋಷ್ ಕುಮಾರ್ ಪಾಸ್ವಾನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>