ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಕ್ತಿನಗರ: ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭ

Last Updated 17 ಡಿಸೆಂಬರ್ 2021, 10:41 IST
ಅಕ್ಷರ ಗಾತ್ರ

ಶಕ್ತಿನಗರ: 'ಜ್ಞಾನ ಸಮುದ್ರದ ವೈಶಾಲ್ಯತೆಯನ್ನು ಮೀರಿದ ಸಾಧನಶೀಲತೆಯನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು' ಎಂದು ಆರ್‌ಟಿಪಿಎಸ್‌ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಶಶಿಕಾಂತ ಹೇಳಿದರು.

ಕರ್ನಾಟಕ ವಿದ್ಯುತ್ ನಿಗಮದ(ಕೆಪಿಸಿಎಲ್‌)ದಯಾನಂದ ಆಂಗ್ಲೋ ವೇದಿಕೆಯ(ಡಿಎವಿ ಪಬ್ಲಿಕ್‌ ಸ್ಕೂಲ್‌) ಶಾಲೆಯಲ್ಲಿ 2021-22ನೇ ಸಾಲಿನ ಶಾಲಾ ವಿದ್ಯಾರ್ಥಿ ಪರಿಷತ್ತಿನ ವಿವಿಧ ಸ್ಥಾನಗಳಿಗೆ ಮೆರಿಟ್ ವಿದ್ಯಾರ್ಹತೆಯ ಮೇಲೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.

ದೈಹಿಕ ಶಿಕ್ಷಣ ಶಿಕ್ಷಕರು, ವಿದ್ಯಾರ್ಥಿ ಪರಿಷತ್ತಿನ ಸದಸ್ಯರ ಆಕರ್ಷಕ ಸಮವಸ್ತ್ರದೊಂದಿಗಿನ ಸಾಮೂಹಿಕ ಪಥಸಂಚಲನ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು. ಪ್ರಾಚಾರ್ಯ ವಿ.ಕೆ. ಅಂಗಡಿ ಸ್ವಾಗತಿಸಿದರು.

ಶಿಕ್ಷಕಿ ಗೀತಾ ನಾಯಕ ನಿರೂಪಿಸಿದರು. ಶಿಕ್ಷಕ ಮೋಹನ ಉಪ್ಪೇರಿ ವಂದಿಸಿದರು.

ಆರ್‌ಟಿಪಿಎಸ್‌ ಮುಖ್ಯ ಎಂಜಿನಿಯರ್ ರಾಜಮುಡಿ, ಕೇಂದ್ರ ಭದ್ರತಾ ಪಡೆಯ(ಸಿಐಎಸ್‌ಎಫ್‌) ಕಮಾಂಡೆಂಟ್ ಸಂತೋಷ್ ಕುಮಾರ್ ಪಾಸ್ವಾನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT