<p><strong>ರಾಯಚೂರು:</strong> ನಗರದ ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ (ರಿಮ್ಸ್) ಆಸ್ಪತ್ರೆಯಲ್ಲಿ ಶುಕ್ರವಾರ ತಡರಾತ್ರಿ ಇಬ್ಬರು ವೈದ್ಯರ ಮೇಲೆ ರೋಗಿ ಸಂಬಂಧಿಗಳು ಹಲ್ಲೆ ನಡೆಸಿದ್ದು, ಘಟನೆ ವಿರುದ್ಧ ಕಾನೂನುಕ್ರಮಕ್ಕೆ ಒತ್ತಾಯಿಸಿ ವೈದ್ಯ ವಿದ್ಯಾರ್ಥಿಗಳು (ಇಂಟರ್ನಿ) ಆಸ್ಪತ್ರೆ ಎದುರು ಪ್ರತಿಭಟನೆ ಆರಂಭಿಸಿದ್ದಾರೆ.</p>.<p>ರಿಮ್ಸ್ ನಿರ್ದೇಶಕರು ಸ್ಥಳಕ್ಕೆ ಬರುವಂತೆ ಒತ್ತಾಯ ಆರಂಭಿಸಿದ್ದಾರೆ. ಆಸ್ಪತ್ರೆಗೆ ಕರೆತರಲಾಗಿದ್ದ ರೋಗಿಯೊಬ್ಬರು ನಿಧನರಾಗಿದ್ದರಿಂದ ಆಕ್ರೋಶಗೊಂಡ ಸಂಬಂಧಿಗಳು, ರಾತ್ರಿಪಾಳಿಯಲ್ಲಿ ನಿಯೋಜಿಸಲಾಗಿದ್ದ ಇಬ್ಬರು ಇಂಟರ್ನಿ ಪುರುಷ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.</p>.<p>ಹಲ್ಲೆಗೊಳಗಾದ ವೈದ್ಯರಿಗೆ ಏನಾಗಿದೆ ಹಾಗೂ ಯಾರು ಹಲ್ಲೆ ಮಾಡಿದ್ದಾರೆ ಎಂಬುದರ ಮಾಹಿತಿ ಇನ್ನೂ ಗೊತ್ತಾಗಿಲ್ಲ.</p>.<p><a href="https://www.prajavani.net/karnataka-news/there-is-no-question-of-giving-resignation-says-bs-yediyurappa-848941.html" itemprop="url">ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಬಿಎಸ್ ಯಡಿಯೂರಪ್ಪ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ನಗರದ ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ (ರಿಮ್ಸ್) ಆಸ್ಪತ್ರೆಯಲ್ಲಿ ಶುಕ್ರವಾರ ತಡರಾತ್ರಿ ಇಬ್ಬರು ವೈದ್ಯರ ಮೇಲೆ ರೋಗಿ ಸಂಬಂಧಿಗಳು ಹಲ್ಲೆ ನಡೆಸಿದ್ದು, ಘಟನೆ ವಿರುದ್ಧ ಕಾನೂನುಕ್ರಮಕ್ಕೆ ಒತ್ತಾಯಿಸಿ ವೈದ್ಯ ವಿದ್ಯಾರ್ಥಿಗಳು (ಇಂಟರ್ನಿ) ಆಸ್ಪತ್ರೆ ಎದುರು ಪ್ರತಿಭಟನೆ ಆರಂಭಿಸಿದ್ದಾರೆ.</p>.<p>ರಿಮ್ಸ್ ನಿರ್ದೇಶಕರು ಸ್ಥಳಕ್ಕೆ ಬರುವಂತೆ ಒತ್ತಾಯ ಆರಂಭಿಸಿದ್ದಾರೆ. ಆಸ್ಪತ್ರೆಗೆ ಕರೆತರಲಾಗಿದ್ದ ರೋಗಿಯೊಬ್ಬರು ನಿಧನರಾಗಿದ್ದರಿಂದ ಆಕ್ರೋಶಗೊಂಡ ಸಂಬಂಧಿಗಳು, ರಾತ್ರಿಪಾಳಿಯಲ್ಲಿ ನಿಯೋಜಿಸಲಾಗಿದ್ದ ಇಬ್ಬರು ಇಂಟರ್ನಿ ಪುರುಷ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.</p>.<p>ಹಲ್ಲೆಗೊಳಗಾದ ವೈದ್ಯರಿಗೆ ಏನಾಗಿದೆ ಹಾಗೂ ಯಾರು ಹಲ್ಲೆ ಮಾಡಿದ್ದಾರೆ ಎಂಬುದರ ಮಾಹಿತಿ ಇನ್ನೂ ಗೊತ್ತಾಗಿಲ್ಲ.</p>.<p><a href="https://www.prajavani.net/karnataka-news/there-is-no-question-of-giving-resignation-says-bs-yediyurappa-848941.html" itemprop="url">ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಬಿಎಸ್ ಯಡಿಯೂರಪ್ಪ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>