<p><strong>ರಾಯಚೂರು:</strong> ‘ಉತ್ತರ ಕರ್ನಾಟಕದಲ್ಲಿಯೇ ಅತ್ಯಂತ ಹಿಂದುಳಿದ ಜಿಲ್ಲೆಯಾಗಿರುವ ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಬೇಕು. ಈ ಬೇಡಿಕೆಯನ್ನು ಇಟ್ಟುಕೊಂಡು ನಡೆಯುತ್ತಿರುವ ಸತ್ಯಾಗ್ರಹದಲ್ಲಿ ನಾನು ಪಾಲ್ಗೊಳ್ಳುತ್ತೇನೆ’ ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ಹೇಳಿದರು.<br /><br />ರಾಯರ ಪಟ್ಟಾಭಿಷೇಕ ನಿಮಿತ್ತ ಬುಧವಾರ ಮಂತ್ರಾಲಯದಲ್ಲಿ ನಡೆದ ಕಾರ್ಯಕ್ರಮದ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು.<br />ಏಮ್ಸ್ ಬೇಡಿಕೆಯನ್ನಿಟ್ಟುಕೊಂಡು 284 ದಿನಗಳಿಂದ ನಡೆಸುತ್ತಿರುವ ಧರಣಿಗೆ ಈಗಾಗಲೇ ಬೆಂಬಲ ಸೂಚಿಸಲಾಗಿತ್ತು. ಆದರೆ ಸರ್ಕಾರ ಏಮ್ಸ್ ಮಾದರಿ ಮಾಡುತ್ತೇವೆ ಎಂದು ಹೇಳಿರುವುದನ್ನು ಒಪ್ಪಲಾಗದು. ಈಗಾಗಲೇ ಐಐಟಿ ಬೇರೆ ಜಿಲ್ಲೆಗೆ ಕೊಡಲಾಗಿದೆ. ಈಗ ಆ ರೀತಿ ಸರ್ಕಾರ ಮಾಡಬಾರದು. ಕಡು ಬಡವರು ಹೆಚ್ಚಿನ ಸಂಖ್ಯೆಯಲ್ಲಿರುವ ರಾಯಚೂರು ಜಿಲ್ಲೆಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಹೇಳಿದರು.<br /><br />ಏಮ್ಸ್ ಬೇಡಿಕೆಗೆ ಸಂಬಂಧಿಸಿ ಕರ್ನಾಟಕ ಮುಖ್ಯಮಂತ್ರಿ ಅವರಿಗೆ ಒತ್ತಾಯಿಸುವ ಕೆಲಸ ಮಾಡಲಾಗುವುದು ಎಂದರು.</p>.<p><strong>ಓದಿ... <a href="https://www.prajavani.net/district/raichur/special-pooja-program-mantralaya-raghavendra-swamy-temple-1017578.html" target="_blank">ಮಂತ್ರಾಲಯ: ಶ್ರೀಗುರುರಾಯರ ಪಟ್ಟಾಭಿಷೇಕ ಮಹೋತ್ಸವ ಆರಂಭ </a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ಉತ್ತರ ಕರ್ನಾಟಕದಲ್ಲಿಯೇ ಅತ್ಯಂತ ಹಿಂದುಳಿದ ಜಿಲ್ಲೆಯಾಗಿರುವ ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಬೇಕು. ಈ ಬೇಡಿಕೆಯನ್ನು ಇಟ್ಟುಕೊಂಡು ನಡೆಯುತ್ತಿರುವ ಸತ್ಯಾಗ್ರಹದಲ್ಲಿ ನಾನು ಪಾಲ್ಗೊಳ್ಳುತ್ತೇನೆ’ ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ಹೇಳಿದರು.<br /><br />ರಾಯರ ಪಟ್ಟಾಭಿಷೇಕ ನಿಮಿತ್ತ ಬುಧವಾರ ಮಂತ್ರಾಲಯದಲ್ಲಿ ನಡೆದ ಕಾರ್ಯಕ್ರಮದ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು.<br />ಏಮ್ಸ್ ಬೇಡಿಕೆಯನ್ನಿಟ್ಟುಕೊಂಡು 284 ದಿನಗಳಿಂದ ನಡೆಸುತ್ತಿರುವ ಧರಣಿಗೆ ಈಗಾಗಲೇ ಬೆಂಬಲ ಸೂಚಿಸಲಾಗಿತ್ತು. ಆದರೆ ಸರ್ಕಾರ ಏಮ್ಸ್ ಮಾದರಿ ಮಾಡುತ್ತೇವೆ ಎಂದು ಹೇಳಿರುವುದನ್ನು ಒಪ್ಪಲಾಗದು. ಈಗಾಗಲೇ ಐಐಟಿ ಬೇರೆ ಜಿಲ್ಲೆಗೆ ಕೊಡಲಾಗಿದೆ. ಈಗ ಆ ರೀತಿ ಸರ್ಕಾರ ಮಾಡಬಾರದು. ಕಡು ಬಡವರು ಹೆಚ್ಚಿನ ಸಂಖ್ಯೆಯಲ್ಲಿರುವ ರಾಯಚೂರು ಜಿಲ್ಲೆಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಹೇಳಿದರು.<br /><br />ಏಮ್ಸ್ ಬೇಡಿಕೆಗೆ ಸಂಬಂಧಿಸಿ ಕರ್ನಾಟಕ ಮುಖ್ಯಮಂತ್ರಿ ಅವರಿಗೆ ಒತ್ತಾಯಿಸುವ ಕೆಲಸ ಮಾಡಲಾಗುವುದು ಎಂದರು.</p>.<p><strong>ಓದಿ... <a href="https://www.prajavani.net/district/raichur/special-pooja-program-mantralaya-raghavendra-swamy-temple-1017578.html" target="_blank">ಮಂತ್ರಾಲಯ: ಶ್ರೀಗುರುರಾಯರ ಪಟ್ಟಾಭಿಷೇಕ ಮಹೋತ್ಸವ ಆರಂಭ </a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>