ಉಪ್ಪಾರಪೇಟೆ ಪೊಲೀಸ್ ಠಾಣೆಯ ಪೊಲೀಸರು ಮೃತದೇಹವನ್ನು ಸಂಬಂಧಿಗಳ ವಶಕ್ಕೆ ನೀಡುವಾಗ, ವಸತಿಗೃಹದಲ್ಲಿ ದೊರಕಿದ್ದ ಚೆಕ್, ಪಾಸ್ ಬುಕ್, ಎಟಿಎಂ ಕಾರ್ಡ್ ಸೇರಿ ಮತ್ತಿತರ ದಾಖಲೆಗಳನ್ನು ಕೂಡಾ ನೀಡಿದ್ದಾರೆ ಎಂಬುದಾಗಿ ಶಂಕರ ಬಾಬು ಮಾಹಿತಿ ನೀಡಿದ್ದರು. ಎಲ್ಲಾ ಆಯಾಮಗಳ ತನಿಖೆಯ ಭಾಗವಾಗಿ ಸ್ಥಳದಲ್ಲಿ ಪತ್ತೆಯಾದ ಅಂಶಗಳನ್ನು ಕೂಡಾ ಪರಿಶೀಲಿಸುವಂತೆ ತನಿಖಾ ಧಿಕಾರಿಗಳನ್ನು ಕೋರಲಾಗಿದೆ ಎಂದು ಉಪವಿಭಾಗಾಧಿಕಾರಿ ತಿಳಿಸಿದ್ದಾರೆ.