<p><strong>ರಾಯಚೂರು: </strong>ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಪ್ರಾಣೇಶ ಕುಲಕರ್ಣಿ ಅವರ ಮೇಲೆ ಗುರುವಾರ ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕಾಲೇಜಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ರಾಳದೊಡ್ಡಿ ಗ್ರಾಮದ ಬಿಸಿಎ 6ನೇ ಸೆಮಿಸ್ಟರ್ ವಿದ್ಯಾರ್ಥಿ ರಂಜಿತಕುಮಾರ್ಗೌಡ ಹಾಗೂ ಸಂಗಡಿಗರು ಸೇರಿ ಗುರುವಾರ ಹಲ್ಲೆ ಮಾಡಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಪ್ರಾಧ್ಯಾಪಕರನ್ನು ಕೂಡಲೇ ಸಮೀಪದ ಬಸವ ಆಸ್ಪತ್ರೆಗೆ ದಾಖಲಿಸಲಾಯಿತುಎಂದು ಮನವಿಯಲ್ಲಿ ವಿವರಿಸಲಾಗಿದೆ.</p>.<p>ಬಿ.ಎ. ವಿದ್ಯಾರ್ಥಿ ಆಂಜೀನೇಯ್ಯ ಮತ್ತು ರಂಜಿತ್ ಮಧ್ಯ ಗಲಾಟೆ ನಡೆದಿರುವ ವಿಚಾರವಾಗಿ ಕಾಲೇಜಿನಲ್ಲಿ ಪ್ರಾಧ್ಯಾಪಕ ಪ್ರಾಣೇಶ ಅವರು ಇಬ್ಬರಿಗೂ ಕಾಲೇಜಿನಲ್ಲಿ ಬುದ್ಧಿವಾದ ಹೇಳಿದ್ದರು. ಆ ಸಂದರ್ಭದಲ್ಲಿಯೆ ವಿದ್ಯಾರ್ಥಿಗಳು ಆವೇಷದಿಂದ ಮಾತನಾಡಿದಾಗ, ಎಲ್ಲ ಪ್ರಾಧ್ಯಾಪಕರು ತಿಳಿವಳಿಕೆ ನೀಡಿದ್ದರು. ಆದರೆ, ಮಧ್ಯಾಹ್ನ ಪ್ರಾಣೇಶ ಅವರು ಬೈಕ್ ಮೂಲಕ ಸಂಚರಿಸುವಾಗ ಗುಂಪು ಹಲ್ಲೆ ನಡೆಸಿಲಾಗಿದೆ ಎಂದು ತಿಳಿದುಬಂದಿದೆ.</p>.<p><strong>ದೂರು ದಾಖಲು</strong></p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಪ್ರಾಧ್ಯಾಪಕರು ಪಶ್ಚಿಮ ಠಾಣೆಗೆ ರಂಜಿತ್ ಸೇರಿದಂತೆ ಆರು ವಿದ್ಯಾರ್ಥಿಗಳ ವಿರುದ್ಧ ದೂರು ನೀಡಿದ್ದಾರೆ. ಪೊಲೀಸರು ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಪ್ರಾಣೇಶ ಕುಲಕರ್ಣಿ ಅವರ ಮೇಲೆ ಗುರುವಾರ ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕಾಲೇಜಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ರಾಳದೊಡ್ಡಿ ಗ್ರಾಮದ ಬಿಸಿಎ 6ನೇ ಸೆಮಿಸ್ಟರ್ ವಿದ್ಯಾರ್ಥಿ ರಂಜಿತಕುಮಾರ್ಗೌಡ ಹಾಗೂ ಸಂಗಡಿಗರು ಸೇರಿ ಗುರುವಾರ ಹಲ್ಲೆ ಮಾಡಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಪ್ರಾಧ್ಯಾಪಕರನ್ನು ಕೂಡಲೇ ಸಮೀಪದ ಬಸವ ಆಸ್ಪತ್ರೆಗೆ ದಾಖಲಿಸಲಾಯಿತುಎಂದು ಮನವಿಯಲ್ಲಿ ವಿವರಿಸಲಾಗಿದೆ.</p>.<p>ಬಿ.ಎ. ವಿದ್ಯಾರ್ಥಿ ಆಂಜೀನೇಯ್ಯ ಮತ್ತು ರಂಜಿತ್ ಮಧ್ಯ ಗಲಾಟೆ ನಡೆದಿರುವ ವಿಚಾರವಾಗಿ ಕಾಲೇಜಿನಲ್ಲಿ ಪ್ರಾಧ್ಯಾಪಕ ಪ್ರಾಣೇಶ ಅವರು ಇಬ್ಬರಿಗೂ ಕಾಲೇಜಿನಲ್ಲಿ ಬುದ್ಧಿವಾದ ಹೇಳಿದ್ದರು. ಆ ಸಂದರ್ಭದಲ್ಲಿಯೆ ವಿದ್ಯಾರ್ಥಿಗಳು ಆವೇಷದಿಂದ ಮಾತನಾಡಿದಾಗ, ಎಲ್ಲ ಪ್ರಾಧ್ಯಾಪಕರು ತಿಳಿವಳಿಕೆ ನೀಡಿದ್ದರು. ಆದರೆ, ಮಧ್ಯಾಹ್ನ ಪ್ರಾಣೇಶ ಅವರು ಬೈಕ್ ಮೂಲಕ ಸಂಚರಿಸುವಾಗ ಗುಂಪು ಹಲ್ಲೆ ನಡೆಸಿಲಾಗಿದೆ ಎಂದು ತಿಳಿದುಬಂದಿದೆ.</p>.<p><strong>ದೂರು ದಾಖಲು</strong></p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಪ್ರಾಧ್ಯಾಪಕರು ಪಶ್ಚಿಮ ಠಾಣೆಗೆ ರಂಜಿತ್ ಸೇರಿದಂತೆ ಆರು ವಿದ್ಯಾರ್ಥಿಗಳ ವಿರುದ್ಧ ದೂರು ನೀಡಿದ್ದಾರೆ. ಪೊಲೀಸರು ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>