ರಥಕ್ಕೆ ವೈವಿಧ್ಯಮಯ ಹೂಗಳು ಹಾಗೂ ತಳಿರು ತೋರಣದಿಂದ ಅಲಂಕಾರ ಮಾಡಲಾಗಿತ್ತು. ಕಳಸ ಮತ್ತು ಛತ್ರಿ ಅರೋಹಣ ಮಾಡಲಾಯಿತು. ಸೂಗೂರೇಶ್ವರ ಸ್ವಾಮಿಯ ಮೂರ್ತಿಯೊಂದಿಗೆ ಅರ್ಚಕರು ರಥದಲ್ಲಿ ಅಸೀನರಾಗುತ್ತಿದ್ದಂತೆ, ನೆರೆದಿದ್ದ ಭಕ್ತರು ದೇವರ ಜಯಘೋಷಣೆಗಳ ಸಮೇತ ರಥವನ್ನು ಸೀಮಿತವಾದ ಜಾಗದೊಳಗೆ ಎಳೆದು ಭಕ್ತಿ ಭಾವ ಮೆರೆದರು.