<p><strong>ಕವಿತಾಳ:</strong> ‘ಮಕ್ಕಳಲ್ಲಿ ಶಿಸ್ತು, ಸಂಯಮ ಸೇರಿ ಸಾಮಾಜಿಕ ಬದ್ಧತೆ ಕುರಿತು ಅರಿವು ಮೂಡಿಸುವುದು, ತುರ್ತು ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಕಠಿಣ ನಿರ್ಧಾರಗಳ ಕುರಿತು ಮಕ್ಕಳನ್ನು ಅಣಿಗೊಳಿಸುವುದು ಸ್ಕೌಟ್ಸ್ ಆಂಡ್ ಗೈಡ್ಸ್ನ ಪ್ರಮುಖ ಉದ್ದೇಶವಾಗಿದೆ’ ಎಂದು ಸ್ಕೌಟ್ಸ್ ಆಂಡ್ ಗೈಡ್ಸ್ನ ಕ್ಯಾಪ್ಟನ್ ಪುಷ್ಪಾ ಪತ್ತಾರ ಹೇಳಿದರು.</p>.<p>ಸಮೀಪದ ವಟಗಲ್ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ ಸ್ಕೌಟ್ಸ್ ಆಂಡ್ ಗೈಡ್ಸ್ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಮೂರು ದಿನಗಳ ಬೇಸಿಗೆ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>‘ಯೋಗ, ಧ್ಯಾನದ ಮೂಲಕ ಏಕಾಗ್ರತೆ ಹೆಚ್ಚಿಸಿ ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವುದು, ಸ್ವಚ್ಛತೆ ಹಾಗೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವುದು ಮತ್ತು ಸಾಹಸ ಕ್ರೀಡೆಗಳ ಕುರಿತು ಮಕ್ಕಳಿಗೆ ತರಬೇತಿ ನೀಡಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಎಸ್ಡಿಎಂಸಿ ಅಧ್ಯಕ್ಷ ಅಂಬರೀಶ, ಗ್ರಾಮ ಪಂಚಾಯಿತಿ ಸದಸ್ಯ ಆದನಗೌಡ, ಮುಖಂಡರಾದ ಮಲ್ಲನಗೌಡ ಅಂಗಡಿ, ವಿಜಯಕುಮಾರ, ಸ್ಕೌಟ್ಸ್ ಆಂಡ್ ಗೈಡ್ಸ್ನ ತರಬೇತುದಾರ, ಶಿಕ್ಷಕ ಹನುಮೇಶ ಮಡಿವಾಳ, ಯೋಗ ಶಿಕ್ಷಕ ದೇವರಾಜ ಹಾಗೂ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ:</strong> ‘ಮಕ್ಕಳಲ್ಲಿ ಶಿಸ್ತು, ಸಂಯಮ ಸೇರಿ ಸಾಮಾಜಿಕ ಬದ್ಧತೆ ಕುರಿತು ಅರಿವು ಮೂಡಿಸುವುದು, ತುರ್ತು ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಕಠಿಣ ನಿರ್ಧಾರಗಳ ಕುರಿತು ಮಕ್ಕಳನ್ನು ಅಣಿಗೊಳಿಸುವುದು ಸ್ಕೌಟ್ಸ್ ಆಂಡ್ ಗೈಡ್ಸ್ನ ಪ್ರಮುಖ ಉದ್ದೇಶವಾಗಿದೆ’ ಎಂದು ಸ್ಕೌಟ್ಸ್ ಆಂಡ್ ಗೈಡ್ಸ್ನ ಕ್ಯಾಪ್ಟನ್ ಪುಷ್ಪಾ ಪತ್ತಾರ ಹೇಳಿದರು.</p>.<p>ಸಮೀಪದ ವಟಗಲ್ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ ಸ್ಕೌಟ್ಸ್ ಆಂಡ್ ಗೈಡ್ಸ್ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಮೂರು ದಿನಗಳ ಬೇಸಿಗೆ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>‘ಯೋಗ, ಧ್ಯಾನದ ಮೂಲಕ ಏಕಾಗ್ರತೆ ಹೆಚ್ಚಿಸಿ ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವುದು, ಸ್ವಚ್ಛತೆ ಹಾಗೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವುದು ಮತ್ತು ಸಾಹಸ ಕ್ರೀಡೆಗಳ ಕುರಿತು ಮಕ್ಕಳಿಗೆ ತರಬೇತಿ ನೀಡಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಎಸ್ಡಿಎಂಸಿ ಅಧ್ಯಕ್ಷ ಅಂಬರೀಶ, ಗ್ರಾಮ ಪಂಚಾಯಿತಿ ಸದಸ್ಯ ಆದನಗೌಡ, ಮುಖಂಡರಾದ ಮಲ್ಲನಗೌಡ ಅಂಗಡಿ, ವಿಜಯಕುಮಾರ, ಸ್ಕೌಟ್ಸ್ ಆಂಡ್ ಗೈಡ್ಸ್ನ ತರಬೇತುದಾರ, ಶಿಕ್ಷಕ ಹನುಮೇಶ ಮಡಿವಾಳ, ಯೋಗ ಶಿಕ್ಷಕ ದೇವರಾಜ ಹಾಗೂ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>