ಬೇಸಿಗೆಯ ಬಿರುಬಿಸಿಲು ಆರಂಭವಾಗುತ್ತಿದ್ದಂತೆ ನಗರದ ರಸ್ತೆ ಬದಿ, ಜನಸಂದಣಿ ಪ್ರದೇಶಗಳಲ್ಲಿ ತಂಪು ಪಾನೀಯ ಮತ್ತು ಎಳನೀರು ಅಂಗಡಿಗಳು ಎಲ್ಲೆಂದರಲ್ಲಿ ತಲೆ ಎತ್ತಿವೆ. ಬೇಸಿಗೆ ಬಿಸಿಲಿನಿಂದ ಬಸವಳಿದ ಜನರು ಹಣ್ಣು, ತಂಪು ಪಾನೀಯಗಳಿಗೆ ಮೊರೆ ಹೋಗುತ್ತಿರುವುದರಿಂದ ಎಳೆನೀರು, ಕಲ್ಲಂಗಡಿ, ಕಬ್ಬಿನ ಹಾಲಿನ ವ್ಯಾಪಾರ ಜೋರಾಗಿದೆ. ಜೊತೆಗೆ ಹಣ್ಣಿನ ಜ್ಯೂಸ್, ನಿಂಬು ರಸ, ಮಜ್ಜಿಗೆ ಮಾರಾಟ ಭರಾಟೆಯಿಂದ ಸಾಗಿದೆ. ₹ 10ಕ್ಕೆ ಗ್ಲಾಸ್ ಹಣ್ಣಿ ರಸ ಸಿಗುತ್ತಿರುವದರಿಂದ ಜನ ದಾಹ ತೀರಿಸಿಕೊಳ್ಳುತ್ತಿದ್ದಾರೆ.