ಜನರು ಬಂದೇ ಬರುತ್ತಾರೆ ಎಂದು ತರಕಾರಿ ವ್ಯಾಪಾರಿಗಳು ನಿರಾಸೆಯಿಂದ ಬಿಸಿಲಿನ ತಾಪದಲ್ಲಿ ಕಾದು ಕುಳಿತಿರುವುದು ಕಂಡುಬಂತು. ವಾರದ ಸಂತೆ ಜನರಿಲ್ಲದೆ ಭಣ ಗುಟ್ಟುತ್ತಿತ್ತು. ತಾಪಮಾನವು 41 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಜನರು ಮನೆಯಿಂದ ಹೊರಬರುವುದು ಹಿಂದೇಟು ಹಾಕುವಂತಾಗಿದೆ. ಗ್ರಾಮೀಣ ಪ್ರದೇಶದಿಂದ ಪಟ್ಟಣಕ್ಕೆ ಬಂದಿದ್ದ ಕೆಲವೇ ಜನರು ಬಿಸಿಲಿಗೆ ಬಸವಳಿದು ಎಳೆನೀರು, ತಂಪುಪಾನೀಯ, ಹಣ್ಣಿನ ರಸ ಕುಡಿದು ದಣಿವು ನಿವಾರಿಸಿಕೊಳ್ಳುವುದರಲ್ಲಿ ತಲ್ಲೀನರಾಗಿದ್ದರು.