<p><strong>ಮಾನ್ವಿ</strong>: ತಾಲ್ಲೂಕಿನ ಖರಾಬದಿನ್ನಿ, ಮುದ್ದಂಗುಡ್ಡಿ, ತಡಕಲ್, ಜೀನೂರು, ದೇವಿಪುರ ಸೇರಿದಂತೆ ವಿವಿಧ ಗ್ರಾಮಗಳ ವ್ಯಾಪ್ತಿಯಲ್ಲಿ ಬೆಳೆದ ಸೂರ್ಯಕಾಂತಿ ಬೆಳೆಯಲ್ಲಿ ಕೀಟಬಾಧೆ ಕಂಡುಬಂದಿದೆ.</p>.<p>ಈ ಗ್ರಾಮಗಳಲ್ಲಿ ಹತ್ತಿ ಮತ್ತು ಜೋಳಕ್ಕೆ ಪರ್ಯಾಯವಾಗಿ ನೂರಾರು ರೈತರು ಮುಂಗಾರಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೂರ್ಯಕಾಂತಿ ಬೆಳೆಗೆ ಆದ್ಯತೆ ನೀಡಿದ್ದಾರೆ. ಈ ವರ್ಷ ತಾಲ್ಲೂಕಿನಲ್ಲಿ ಒಟ್ಟು ಸುಮಾರು 1,200 ಎಕರೆ ಪ್ರದೇಶದಲ್ಲಿ ಸೂರ್ಯಕಾಂತಿ ಬೆಳೆಯಲಾಗುತ್ತಿದೆ.</p>.<p>ಆದರೆ ಕೆಲ ದಿನಗಳಿಂದ ಸೂರ್ಯಕಾಂತಿ ಬೆಳೆಗೆ ತೆನೆಗಳನ್ನು ತಿನ್ನುವ ಹೆಲಿಕೋವರ್ಪಾ ಆರ್ಮಿಜೆರಾ ಕೀಟದ ಹಾವಳಿ ಕಂಡು ಬಂದಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಈ ಕೀಟಗಳು ಕಾಳು ಕಟ್ಟುವ ಹಂತದಲ್ಲಿನ ಸೂರ್ಯಕಾಂತಿ ಹೂವುಗಳನ್ನು ತಿನ್ನುವ ಮೂಲಕ ಹೆಚ್ಚಿನ ನಷ್ಟವನ್ನು ಉಂಟುಮಾಡುತ್ತಿವೆ.</p>.<p>ರೈತರು ಸೂರ್ಯಕಾಂತಿಯ ಮೊಗ್ಗು ಬರುವ ಸಮಯದಲ್ಲಿ ಜೈವಿಕ ಕೀಟನಾಶಕಗಳನ್ನು ಬಳಸಿದರೆ ಕೀಟ ಬಾಧೆ ತಡೆಯಬಹುದು ಎಂಬುದು ತಜ್ಞರ ಅಭಿಪ್ರಾಯ.</p>.<p>ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಜ್ಞಾನಿಗಳ ತಂಡ ಈಚೆಗೆ ಸೂರ್ಯಕಾಂತಿ ಬೆಳೆದ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿತು.</p>.<p>‘ರೈತರು ಸೂರ್ಯಕಾಂತಿಯ ಮೊಗ್ಗು ಬರುವ ಸಮಯದಲ್ಲಿ ಪ್ರಾಥಮಿಕವಾಗಿ ಜೈವಿಕ ಕೀಟನಾಶಕವಾದ ಎಚ್ಎಎನ್ ಪಿವಿ 100 ಎಲ್ಇ ಅನ್ನು ಸಿಂಪರಣೆ ಮಾಡಬೇಕು. ಕಾಳು ಕಟ್ಟುವ ಹಂತದಲ್ಲಿ ಸೈಪರಮಿತ್ರಿನ್, ಲ್ಯಾಂಬ್ಡಾ ಸೈಹೆಲೊತ್ರಿನ್ ಅಥವಾ ಇಂಡಾಕ್ಸಾಕಾರ್ಬ ದ್ರಾವಣವನ್ನು ಸಿಂಪಡಿಸುವ ಮೂಲಕ ಈ ಕೀಟವನ್ನು ಹತೋಟಿ ಮಾಡಬಹುದು’ ಎಂದು ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಬೇಸಾಯ ತಜ್ಞ ಡಾ. ಮಲ್ಲರೆಡ್ಡಿ ತಿಳಿಸಿದರು.</p>.<div><blockquote>ಸೂರ್ಯಕಾಂತಿ ಬೆಳೆಗೆ ಕೀಟ ಬಾಧೆಯ ನಿಯಂತ್ರಣಕ್ಕಾಗಿ ಕೀಟನಾಶಕಗಳನ್ನು ಸಿಂಪಡಿಸುವ ಕುರಿತು ರೈತರಿಗೆ ಮಾಹಿತಿ ನೀಡಲಾಗುವುದು.</blockquote><span class="attribution">ಗುರುನಾಥ ಭೂಸನೂರ, ಸಹಾಯಕ ಕೃಷಿ ನಿರ್ದೇಶಕ ಮಾನ್ವಿ</span></div>.<div><blockquote>ಸೂರ್ಯಕಾಂತಿ ಬೆಳೆಗೆ ಕೀಟಗಳ ಹಾವಳಿ ತಡೆಯಲು ಕೃಷಿ ಇಲಾಖೆಯ ಅಧಿಕಾರಿಗಳು ಸೂಕ್ತ ಕೀಟನಾಶಕಗಳನ್ನು ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ವಿತರಿಸಬೇಕು. </blockquote><span class="attribution">ದೇವರಾಜ ದೇವಿಪುರ ರೈತ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ</strong>: ತಾಲ್ಲೂಕಿನ ಖರಾಬದಿನ್ನಿ, ಮುದ್ದಂಗುಡ್ಡಿ, ತಡಕಲ್, ಜೀನೂರು, ದೇವಿಪುರ ಸೇರಿದಂತೆ ವಿವಿಧ ಗ್ರಾಮಗಳ ವ್ಯಾಪ್ತಿಯಲ್ಲಿ ಬೆಳೆದ ಸೂರ್ಯಕಾಂತಿ ಬೆಳೆಯಲ್ಲಿ ಕೀಟಬಾಧೆ ಕಂಡುಬಂದಿದೆ.</p>.<p>ಈ ಗ್ರಾಮಗಳಲ್ಲಿ ಹತ್ತಿ ಮತ್ತು ಜೋಳಕ್ಕೆ ಪರ್ಯಾಯವಾಗಿ ನೂರಾರು ರೈತರು ಮುಂಗಾರಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೂರ್ಯಕಾಂತಿ ಬೆಳೆಗೆ ಆದ್ಯತೆ ನೀಡಿದ್ದಾರೆ. ಈ ವರ್ಷ ತಾಲ್ಲೂಕಿನಲ್ಲಿ ಒಟ್ಟು ಸುಮಾರು 1,200 ಎಕರೆ ಪ್ರದೇಶದಲ್ಲಿ ಸೂರ್ಯಕಾಂತಿ ಬೆಳೆಯಲಾಗುತ್ತಿದೆ.</p>.<p>ಆದರೆ ಕೆಲ ದಿನಗಳಿಂದ ಸೂರ್ಯಕಾಂತಿ ಬೆಳೆಗೆ ತೆನೆಗಳನ್ನು ತಿನ್ನುವ ಹೆಲಿಕೋವರ್ಪಾ ಆರ್ಮಿಜೆರಾ ಕೀಟದ ಹಾವಳಿ ಕಂಡು ಬಂದಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಈ ಕೀಟಗಳು ಕಾಳು ಕಟ್ಟುವ ಹಂತದಲ್ಲಿನ ಸೂರ್ಯಕಾಂತಿ ಹೂವುಗಳನ್ನು ತಿನ್ನುವ ಮೂಲಕ ಹೆಚ್ಚಿನ ನಷ್ಟವನ್ನು ಉಂಟುಮಾಡುತ್ತಿವೆ.</p>.<p>ರೈತರು ಸೂರ್ಯಕಾಂತಿಯ ಮೊಗ್ಗು ಬರುವ ಸಮಯದಲ್ಲಿ ಜೈವಿಕ ಕೀಟನಾಶಕಗಳನ್ನು ಬಳಸಿದರೆ ಕೀಟ ಬಾಧೆ ತಡೆಯಬಹುದು ಎಂಬುದು ತಜ್ಞರ ಅಭಿಪ್ರಾಯ.</p>.<p>ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಜ್ಞಾನಿಗಳ ತಂಡ ಈಚೆಗೆ ಸೂರ್ಯಕಾಂತಿ ಬೆಳೆದ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿತು.</p>.<p>‘ರೈತರು ಸೂರ್ಯಕಾಂತಿಯ ಮೊಗ್ಗು ಬರುವ ಸಮಯದಲ್ಲಿ ಪ್ರಾಥಮಿಕವಾಗಿ ಜೈವಿಕ ಕೀಟನಾಶಕವಾದ ಎಚ್ಎಎನ್ ಪಿವಿ 100 ಎಲ್ಇ ಅನ್ನು ಸಿಂಪರಣೆ ಮಾಡಬೇಕು. ಕಾಳು ಕಟ್ಟುವ ಹಂತದಲ್ಲಿ ಸೈಪರಮಿತ್ರಿನ್, ಲ್ಯಾಂಬ್ಡಾ ಸೈಹೆಲೊತ್ರಿನ್ ಅಥವಾ ಇಂಡಾಕ್ಸಾಕಾರ್ಬ ದ್ರಾವಣವನ್ನು ಸಿಂಪಡಿಸುವ ಮೂಲಕ ಈ ಕೀಟವನ್ನು ಹತೋಟಿ ಮಾಡಬಹುದು’ ಎಂದು ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಬೇಸಾಯ ತಜ್ಞ ಡಾ. ಮಲ್ಲರೆಡ್ಡಿ ತಿಳಿಸಿದರು.</p>.<div><blockquote>ಸೂರ್ಯಕಾಂತಿ ಬೆಳೆಗೆ ಕೀಟ ಬಾಧೆಯ ನಿಯಂತ್ರಣಕ್ಕಾಗಿ ಕೀಟನಾಶಕಗಳನ್ನು ಸಿಂಪಡಿಸುವ ಕುರಿತು ರೈತರಿಗೆ ಮಾಹಿತಿ ನೀಡಲಾಗುವುದು.</blockquote><span class="attribution">ಗುರುನಾಥ ಭೂಸನೂರ, ಸಹಾಯಕ ಕೃಷಿ ನಿರ್ದೇಶಕ ಮಾನ್ವಿ</span></div>.<div><blockquote>ಸೂರ್ಯಕಾಂತಿ ಬೆಳೆಗೆ ಕೀಟಗಳ ಹಾವಳಿ ತಡೆಯಲು ಕೃಷಿ ಇಲಾಖೆಯ ಅಧಿಕಾರಿಗಳು ಸೂಕ್ತ ಕೀಟನಾಶಕಗಳನ್ನು ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ವಿತರಿಸಬೇಕು. </blockquote><span class="attribution">ದೇವರಾಜ ದೇವಿಪುರ ರೈತ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>