ಶುಕ್ರವಾರ ಮಳೆ ಸುರಿಯದಿದ್ದರೂ ಮೋಡ ಕವಿದ ಮಬ್ಬು ವಾತಾವರಣ ಮುಂದುವರಿದಿತ್ತು. ಮಧ್ಯಾಹ್ನದ ಬಳಿಕ ಬಿಸಿಲು ಕಾಣಿಸಿದ್ದರಿಂದ ಜನರು ಸ್ವಲ್ಪ ನಿರಾಳತೆ ಅನುಭವಿಸಿದರು. ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ್ದ ತೊಗರಿ, ಭತ್ತದ ಕೊಯ್ಲು ಜಿಲ್ಲೆಯಲ್ಲಿ ಭರದಿಂದ ಮುಂದುವರಿದಿತ್ತು. ಮೂರು ದಿನಗಳ ಹಿಂದೆ ದಿಢೀರ್ ಆವರಿಸಿದ ತಂಪಿನಿಂದಾಗಿ ಕೊಯ್ಲು ಮಾಡುವುದಕ್ಕೆ ಅಡಚಣೆ ಆಗಿದೆ.