<p>ಪ್ರಜಾವಾಣಿ ವಾರ್ತೆ</p>.<p><strong>ರಾಯಚೂರು</strong>: ಆನೆಗೊಂದಿಯ ನವ ವೃಂದಾವನ ಗಡ್ಡೆಯಲ್ಲಿನ ಯತಿಗಳ ವೃಂದಾವನ ಪೂಜೆ ವಿಚಾರದ ವಿವಾದವನ್ನು ಸೌಹಾರ್ದ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠ ಹಾಗೂ ಉತ್ತರಾದಿಮಠದ ಶ್ರೀಗಳು ಚೆನ್ನೈನಲ್ಲಿ ಗುರುವಾರ ಭೇಟಿ ಮಾಡಿದರು.</p>.<p>ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸಂಜಯ್ ಕೌಲ್ ಮಧ್ಯಸ್ಥಿಕೆಯಲ್ಲಿ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಹಾಗೂ ಉತ್ತರಾದಿಮಠದ ಸತ್ಯಾತ್ಮ ತೀರ್ಥರು ಭೇಟಿ ಮಾಡಿ ಮಾತುಕತೆ ನಡೆಸಿದರು.</p>.<p>ಈ ವೇಳೆ ಪ್ರತಿಕ್ರಿಯೆ ನೀಡಿದ ಉಭಯ ಶ್ರೀಗಳು, ‘ಉಭಯ ಮಠಗಳ ಭಕ್ತರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇವೆ. ಸಮಾಜದ ಹಿತಕ್ಕಾಗಿ ಆದಷ್ಟು ಬೇಗನೆ ವಿವಾದಗಳು ಪರಿಹಾರವಾಗಿ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಬೇಕಿದೆ. ಎಲ್ಲರೂ ಒಗ್ಗಟ್ಟಾಗಿ ಪರಿಹಾರ ಕಂಡುಕೊಳ್ಳಲು ಪ್ರಯತ್ನ ಮಾಡುತ್ತೇವೆ’ ಎಂದು ಹೇಳಿದರು.</p>.<p>ಆನೆಗೊಂದಿಯ ನವ ವೃಂದಾವನ ಗಡ್ಡೆಯಲ್ಲಿನ ಯತಿಗಳ ವೃಂದಾವನ ಪೂಜೆ ಹಕ್ಕು ಪಡೆದುಕೊಳ್ಳುವ ವಿಷಯದಲ್ಲಿ ಎರಡು ಮಠಗಳ ನಡುವೆ ವಿವಾದವಿದೆ. ಯತಿಗಳ ಆರಾಧನೆ ವೇಳೆ ನವವೃಂದಾವನ ಗಡ್ಡೆಯಲ್ಲಿ ಬಹಳ ಸೂಕ್ಷ್ಮ ಪರಿಸ್ಥಿತಿ ನಿರ್ಮಾಣವಾಗುತ್ತದೆ. ವಿವಾದ ಇತ್ಯರ್ಥಕ್ಕೆ ಉಭಯ ಮಠಗಳು ನ್ಯಾಯಾಲಯದ ಮೆಟ್ಟಿಲೇರಿವೆ.</p>.<p>ಸ್ಥಳೀಯ ನ್ಯಾಯಾಲಯಗಳು ಎರಡೂ ಮಠಕ್ಕೂ ಒಂದೂವರೆ ದಿನದ ಆಧಾರದಲ್ಲಿ ಪೂಜೆಗೆ ಅವಕಾಶ ಮಾಡಿಕೊಟ್ಟಿವೆ. ಆದರೆ, ವಿವಾದ ಇತ್ಯರ್ಥಗೊಂಡಿಲ್ಲ. ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ಸುಪ್ರೀಂಕೋರ್ಟ್ ಸೂಚನೆ ನೀಡಿರುವುದು ಭಕ್ತರಲ್ಲಿ ಆಶಾಭಾವನೆ ಮೂಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ರಾಯಚೂರು</strong>: ಆನೆಗೊಂದಿಯ ನವ ವೃಂದಾವನ ಗಡ್ಡೆಯಲ್ಲಿನ ಯತಿಗಳ ವೃಂದಾವನ ಪೂಜೆ ವಿಚಾರದ ವಿವಾದವನ್ನು ಸೌಹಾರ್ದ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠ ಹಾಗೂ ಉತ್ತರಾದಿಮಠದ ಶ್ರೀಗಳು ಚೆನ್ನೈನಲ್ಲಿ ಗುರುವಾರ ಭೇಟಿ ಮಾಡಿದರು.</p>.<p>ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸಂಜಯ್ ಕೌಲ್ ಮಧ್ಯಸ್ಥಿಕೆಯಲ್ಲಿ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಹಾಗೂ ಉತ್ತರಾದಿಮಠದ ಸತ್ಯಾತ್ಮ ತೀರ್ಥರು ಭೇಟಿ ಮಾಡಿ ಮಾತುಕತೆ ನಡೆಸಿದರು.</p>.<p>ಈ ವೇಳೆ ಪ್ರತಿಕ್ರಿಯೆ ನೀಡಿದ ಉಭಯ ಶ್ರೀಗಳು, ‘ಉಭಯ ಮಠಗಳ ಭಕ್ತರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇವೆ. ಸಮಾಜದ ಹಿತಕ್ಕಾಗಿ ಆದಷ್ಟು ಬೇಗನೆ ವಿವಾದಗಳು ಪರಿಹಾರವಾಗಿ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಬೇಕಿದೆ. ಎಲ್ಲರೂ ಒಗ್ಗಟ್ಟಾಗಿ ಪರಿಹಾರ ಕಂಡುಕೊಳ್ಳಲು ಪ್ರಯತ್ನ ಮಾಡುತ್ತೇವೆ’ ಎಂದು ಹೇಳಿದರು.</p>.<p>ಆನೆಗೊಂದಿಯ ನವ ವೃಂದಾವನ ಗಡ್ಡೆಯಲ್ಲಿನ ಯತಿಗಳ ವೃಂದಾವನ ಪೂಜೆ ಹಕ್ಕು ಪಡೆದುಕೊಳ್ಳುವ ವಿಷಯದಲ್ಲಿ ಎರಡು ಮಠಗಳ ನಡುವೆ ವಿವಾದವಿದೆ. ಯತಿಗಳ ಆರಾಧನೆ ವೇಳೆ ನವವೃಂದಾವನ ಗಡ್ಡೆಯಲ್ಲಿ ಬಹಳ ಸೂಕ್ಷ್ಮ ಪರಿಸ್ಥಿತಿ ನಿರ್ಮಾಣವಾಗುತ್ತದೆ. ವಿವಾದ ಇತ್ಯರ್ಥಕ್ಕೆ ಉಭಯ ಮಠಗಳು ನ್ಯಾಯಾಲಯದ ಮೆಟ್ಟಿಲೇರಿವೆ.</p>.<p>ಸ್ಥಳೀಯ ನ್ಯಾಯಾಲಯಗಳು ಎರಡೂ ಮಠಕ್ಕೂ ಒಂದೂವರೆ ದಿನದ ಆಧಾರದಲ್ಲಿ ಪೂಜೆಗೆ ಅವಕಾಶ ಮಾಡಿಕೊಟ್ಟಿವೆ. ಆದರೆ, ವಿವಾದ ಇತ್ಯರ್ಥಗೊಂಡಿಲ್ಲ. ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ಸುಪ್ರೀಂಕೋರ್ಟ್ ಸೂಚನೆ ನೀಡಿರುವುದು ಭಕ್ತರಲ್ಲಿ ಆಶಾಭಾವನೆ ಮೂಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>