<p><strong>ಜಾಲಹಳ್ಳಿ</strong>: ಸಮೀಪದ ವೀರಗೋಟ್ ಗ್ರಾಮದ ಪಕ್ಕದಲ್ಲಿ ಹರಿಯುವ ಕೃಷ್ಣಾ ನದಿಗೆ ಅಡ್ಡಲಾಗಿ ತಿಂಥಣಿ<br> ಗ್ರಾಮದ ಮೌನೇಶ್ವರ ದೇವಸ್ಥಾನಕ್ಕೆ ಹೋಗಲು ಅನುಕೂಲವಾಗುವಂತೆ ತೂಗು ಸೇತುವೆ ನಿರ್ಮಿಸಬೇಕು ಎಂದು ವೀರಗೋಟ ಗ್ರಾಮದ ಆದಿ ಮೌನೇಶ್ವರ ಮಠದ ಅಡವಿಲಿಂಗ ಸ್ವಾಮೀಜಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.</p>.<p>ಈ ಬಗ್ಗೆ ಹೇಳಿಕೆ ನೀಡಿರುವ ಅವರು, ‘ದೇವದುರ್ಗ ತಾಲ್ಲೂಕಿನ ವೀರಗೋಟ ಗ್ರಾಮದಲ್ಲಿರುವ ಆದಿ ಮೌನೇಶ್ವರ ಮಠ ಹಾಗೂ ಸುರಪುರ ತಾಲ್ಲೂಕಿನ ತಿಂಥಣಿ ಗ್ರಾಮದ ಮೌನೇಶ್ವರ ದೇವಸ್ಥಾನಕ್ಕೆ ನಿತ್ಯ ನೂರಾರು ಭಕ್ತರು ಭೇಟಿ ನೀಡುತ್ದಾರೆ. ಈ ಎರಡು ದೇವಸ್ಥಾನಗಳ ಮಧ್ಯೆ ಕೃಷ್ಣಾ ನದಿಯಿದ್ದು ತೆಪ್ಪಗಳಲ್ಲಿ ಹೋಗಿ ಬರುತ್ತಾರೆ. 200 ಮೀಟರ್ ಉದ್ದದ ತೂಗು ಸೇತುವೆ ನಿರ್ಮಾಣಕ್ಕೆ ಎರಡು ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಗಮನ ಹರಿಸಬೇಕು’ ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಾಲಹಳ್ಳಿ</strong>: ಸಮೀಪದ ವೀರಗೋಟ್ ಗ್ರಾಮದ ಪಕ್ಕದಲ್ಲಿ ಹರಿಯುವ ಕೃಷ್ಣಾ ನದಿಗೆ ಅಡ್ಡಲಾಗಿ ತಿಂಥಣಿ<br> ಗ್ರಾಮದ ಮೌನೇಶ್ವರ ದೇವಸ್ಥಾನಕ್ಕೆ ಹೋಗಲು ಅನುಕೂಲವಾಗುವಂತೆ ತೂಗು ಸೇತುವೆ ನಿರ್ಮಿಸಬೇಕು ಎಂದು ವೀರಗೋಟ ಗ್ರಾಮದ ಆದಿ ಮೌನೇಶ್ವರ ಮಠದ ಅಡವಿಲಿಂಗ ಸ್ವಾಮೀಜಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.</p>.<p>ಈ ಬಗ್ಗೆ ಹೇಳಿಕೆ ನೀಡಿರುವ ಅವರು, ‘ದೇವದುರ್ಗ ತಾಲ್ಲೂಕಿನ ವೀರಗೋಟ ಗ್ರಾಮದಲ್ಲಿರುವ ಆದಿ ಮೌನೇಶ್ವರ ಮಠ ಹಾಗೂ ಸುರಪುರ ತಾಲ್ಲೂಕಿನ ತಿಂಥಣಿ ಗ್ರಾಮದ ಮೌನೇಶ್ವರ ದೇವಸ್ಥಾನಕ್ಕೆ ನಿತ್ಯ ನೂರಾರು ಭಕ್ತರು ಭೇಟಿ ನೀಡುತ್ದಾರೆ. ಈ ಎರಡು ದೇವಸ್ಥಾನಗಳ ಮಧ್ಯೆ ಕೃಷ್ಣಾ ನದಿಯಿದ್ದು ತೆಪ್ಪಗಳಲ್ಲಿ ಹೋಗಿ ಬರುತ್ತಾರೆ. 200 ಮೀಟರ್ ಉದ್ದದ ತೂಗು ಸೇತುವೆ ನಿರ್ಮಾಣಕ್ಕೆ ಎರಡು ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಗಮನ ಹರಿಸಬೇಕು’ ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>