ಸಾವಯವ ಕೃಷಿ ಸಂಶೋಧನಾ ಸಂಸ್ಥೆಯ ಮುಖ್ಯಸ್ಥ ಡಾ.ಗುರುರಾಜ ಸುಂಕದ ಅಧ್ಯಕ್ಷತೆ ವಹಿಸಿ, ಸಾವಯವ ಕೃಷಿಯ ಮಹತ್ವದ ಬಗ್ಗೆ ತಿಳಿಸಿದರು. ಮಣ್ಣು ವಿಜ್ಞಾನಿ ಡಾ.ಎಸ್.ಎನ್. ಭಟ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಬೇಸಾಯ ಶಾಸ್ತ್ರದ ಸಹಾಯಕ ಪ್ರಾಧ್ಯಾಪಕ ಡಾ.ಆನಂದ ಕಾಂಬಳೆ ವಂದಿಸಿದರು. ತರಬೇತಿಯಲ್ಲಿ 40 ರೈತರು ಭಾಗವಹಿಸಿದ್ದರು.