<p><strong>ರಾಯಚೂರು:</strong> ‘ಸ್ವಚ್ಛ ಭಾರತ ಮಿಷನ್ 2.0 ಯೋಜನೆಯ ವಿವಿಧ ಘಟಕಗಳಲ್ಲಿ ಸರಿಯಾಗಿ ಕಾರ್ಯನಿರ್ವಹಿಸಬೇಕು. ರಾಯಚೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು’ ಎಂದು ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ ಹೇಳಿದರು.</p>.<p>ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಚ್ಛ ಭಾರತ ಅಭಿಯಾನ 2.0 ಅಡಿ ಐಇಸಿ ಚಟುವಟಿಕೆಗಳ ಕುರಿತು ಸಮುದಾಯ ಸಂಚಾಲಕರ ಹುದ್ದೆಗೆ ಆಯ್ಕೆಯಾದ ಸ್ವ–ಸಹಾಯ ಗುಂಪುಗಳ ಸದಸ್ಯರಿಗೆ ಕಾರ್ಯಾದೇಶ ಪ್ರಮಾಣ ಪತ್ರ ಹಾಗೂ ಗುರುತಿನ ಚೀಟಿ ನೀಡಿ ಅವರು ಮಾತನಾಡಿದರು.</p>.<p>‘ಸಹಕಾರ ಸಂಘದ ಸದಸ್ಯರೊಂದಿಗೆ ಕೆಲಸ ಮಾಡುವುದು ಸಾಮಾನ್ಯ ವಿಚಾರವಲ್ಲ. ಸರ್ಕಾರಿ ಕೆಲಸ ದೇವರ ಕೆಲಸ ಎಂದು ಭಾವಿಸಿ ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪಾಲಿಕೆಯ ವಿವಿಧ ತೆರಿಗೆ ಅಚ್ಚುಕಟ್ಟಾಗಿ ವಸೂಲಿ ಮಾಡಬೇಕು’ ಎಂದು ಸೂಚಿಸಿದರು.</p>.<p>‘ಒಂದೊಂದು ರೂಪಾಯಿಯನ್ನು ಜೋಡಿಸಿ ದೊಡ್ಡ ಕೆಲಸಗಳನ್ನು ಪಾಲಿಕೆಯಿಂದ ಮಾಡಬಹುದಾಗಿದೆ. ಪಾಲಿಕೆಯ ಅಭಿವೃದ್ಧಿ ವಿಷಯದಲ್ಲಿ ಸಹಕಾರ ಸಂಘದ ಸದಸ್ಯರ ಪಾತ್ರ ಮಹತ್ವದ್ದಾಗಿದೆ. ಪ್ರತಿಯೊಬ್ಬರೂ ಕಂಪ್ಯೂಟರ್ ಜ್ಞಾನ ಪಡೆಯಬೇಕು. ಸರ್ಕಾರಿ ಸಿಬ್ಬಂದಿಯಂತೆ ಕೆಲಸ, ಕಾರ್ಯಗಳನ್ನು ಮಾಡಬೇಕು. ಸಂಬಂಧಿಸಿದ ವಿಭಾಗದ ಮುಖ್ಯಸ್ಥರ ಸಲಹೆಗಳನ್ನು ಪಡೆದು ಸಮಾಜ ಬದಲಾವಣೆ ಮಾಡಲು ನೆರವಾಗಬೇಕು’ ಎಂದು ಹೇಳಿದರು.</p>.<p>‘ಪಾಲಿಕೆಯ ವಾರ್ಡ್ಗಳ ಮೂಲಸೌಕರ್ಯಗಳ ಸಮೀಕ್ಷೆಯನ್ನು ತಳಮಟ್ಟದಲ್ಲಿ ನಡೆಸಬೇಕು. ತ್ಯಾಜ್ಯವನ್ನು ಮೂಲದಲ್ಲೇ ವಿಂಗಡಿಸಬೇಕು. ದೊಡ್ಡ ಪ್ರಮಾಣದಲ್ಲಿ ತ್ಯಾಜ್ಯ ಉತ್ಪಾದಿಸುವಲ್ಲಿ ನಿಯಮಗಳ ಪಾಲನೆ, ಒಣ ಮತ್ತು ಹಸಿ ತ್ಯಾಜ್ಯದ ಸಂಸ್ಕರಣೆ ಮಾಡಬೇಕು. ಬಳಕೆದಾರರ ಶುಲ್ಕ ಸಂಗ್ರಹಣೆಗೆ ನಾಗರಿಕರನ್ನು ಸಂವೇದನಾಶೀಲರನ್ನಾಗಿಸಬೇಕು. ಕಸ ಬಿಸಾಡಲು ಆಸ್ಪದ ನೀಡುವಂತಹ ಸ್ಥಳಗಳಲ್ಲಿ ಅವಕಾಶ ಕೊಡಬಾರದು’ ಎಂದರು</p>.<p>‘ವಸತಿ ಪ್ರದೇಶಗಳು, ಶಾಲೆಗಳು, ಮುಖ್ಯ ಮಾರುಕಟ್ಟೆಗಳು, ಬಸ್ ನಿಲ್ದಾಣಗಳು, ರೈಲು ನಿಲ್ದಾಣಗಳು, ಉದ್ಯಾನಗಳು, ಆಸ್ಪತ್ರೆಗಳು, ರೆಸ್ಟೋರೆಂಟ್ಗಳು ಮತ್ತು ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛ ಭಾರತ ಮಿಷನ್ (ನಗರ) ಮಾರ್ಗಸೂಚಿಗಳ ಪ್ರಕಾರ ಆಯಾ ಸ್ಥಳಕ್ಕೆ ಸಂಬಂಧಿಸಿದಂತೆ ಸ್ವಚ್ಛತಾ ಅಭಿಯಾನಗಳನ್ನು ಕೈಗೊಳ್ಳಬೇಕು’ ಎಂದು ತಿಳಿಸಿದರು.</p>.<p>ಸ್ವಚ್ಛ ಸರ್ವೇಕ್ಷಣ ಲೀಗ್ಗಳಲ್ಲಿ ಭಾಗವಹಿಸುವಂತೆ ಮತ್ತು ಅದರ ಬಗ್ಗೆ ಸಕಾರಾತ್ಮಕ ಹಿಮ್ಮಾಹಿತಿ ಪಡೆಯಲು ಅತಿ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರನ್ನು ಸಂಪರ್ಕಿಸಲು ಸ್ವ–ಸಹಾಯ ಗುಂಪಿನ ಸದಸ್ಯರು ಪಾಲಿಕೆಗೆ ಸಹಾಯ ಮಾಡಬೇಕು. ತ್ಯಾಜ್ಯವನ್ನು ಮೂಲದಲ್ಲೇ ಪ್ರತ್ಯೇಕಿಸುವ ಸಲುವಾಗಿ ಮನೆ ಮನೆಗೂ ತೆರಳಿ ಕಸ ವಿಂಗಡಣೆಯ ಬಗ್ಗೆ ಅರಿವು ಮೂಡಿಸಬೇಕು ಎಂದು ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಸೂಚಿಸಿದರು.</p>.<p>ಈ ಸಂದರ್ಭದಲ್ಲಿ ಸ್ವ-ಸಹಾಯ ಗುಂಪುಗಳ ಸದಸ್ಯರು ಪಾಲಿಕೆ ಅಧ್ಯಕ್ಷರು ಹಾಗೂ ಆಯುಕ್ತರನ್ನು ಸನ್ಮಾನಿಸಿದರು.</p>.<p>ಪಾಲಿಕೆಯ ಮೇಯರ್ ನರಸಮ್ಮ ನರಸಿಂಹಲು ಮಾಡಗಿರಿ, ಪಾಲಿಕೆಯ ಅಭಿವೃದ್ಧಿ ವಿಭಾಗದ ಉಪ ಆಯುಕ್ತೆ ಸಂತೋಷರಾಣಿ, ಪರಿಸರ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಜೈಪಾಲ್ ರೆಡ್ಡಿ, ಪಾಲಿಕೆಯ ಸಂಘಟನಾ ಅಧಿಕಾರಿ ಕೃಷ್ಣ ಕಟ್ಟಿಮನಿ ಹಾಜರಿದ್ದರು.</p>.<div><blockquote>ಸಾರ್ವಜನಿಕರು ಕಸ ಬಿಸಾಡುವ ಜಾಗಗಳ ಮೇಲೆ ಎಸ್ಎಜಿ ಸದಸ್ಯರು ಕಣ್ಣು ಇಡಬೇಕು. ಎರಡನೇ ಹಂತದ ಕಸ ಸಂಗ್ರಹಿಸುವ ವ್ಯವಸ್ಥೆ ಮಾಡಲು ನೆರವಾಗಬೇಕು.</blockquote><span class="attribution">-ಜುಬಿನ್ ಮೊಹಾಪಾತ್ರ ಆಯುಕ್ತ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ಸ್ವಚ್ಛ ಭಾರತ ಮಿಷನ್ 2.0 ಯೋಜನೆಯ ವಿವಿಧ ಘಟಕಗಳಲ್ಲಿ ಸರಿಯಾಗಿ ಕಾರ್ಯನಿರ್ವಹಿಸಬೇಕು. ರಾಯಚೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು’ ಎಂದು ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ ಹೇಳಿದರು.</p>.<p>ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಚ್ಛ ಭಾರತ ಅಭಿಯಾನ 2.0 ಅಡಿ ಐಇಸಿ ಚಟುವಟಿಕೆಗಳ ಕುರಿತು ಸಮುದಾಯ ಸಂಚಾಲಕರ ಹುದ್ದೆಗೆ ಆಯ್ಕೆಯಾದ ಸ್ವ–ಸಹಾಯ ಗುಂಪುಗಳ ಸದಸ್ಯರಿಗೆ ಕಾರ್ಯಾದೇಶ ಪ್ರಮಾಣ ಪತ್ರ ಹಾಗೂ ಗುರುತಿನ ಚೀಟಿ ನೀಡಿ ಅವರು ಮಾತನಾಡಿದರು.</p>.<p>‘ಸಹಕಾರ ಸಂಘದ ಸದಸ್ಯರೊಂದಿಗೆ ಕೆಲಸ ಮಾಡುವುದು ಸಾಮಾನ್ಯ ವಿಚಾರವಲ್ಲ. ಸರ್ಕಾರಿ ಕೆಲಸ ದೇವರ ಕೆಲಸ ಎಂದು ಭಾವಿಸಿ ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪಾಲಿಕೆಯ ವಿವಿಧ ತೆರಿಗೆ ಅಚ್ಚುಕಟ್ಟಾಗಿ ವಸೂಲಿ ಮಾಡಬೇಕು’ ಎಂದು ಸೂಚಿಸಿದರು.</p>.<p>‘ಒಂದೊಂದು ರೂಪಾಯಿಯನ್ನು ಜೋಡಿಸಿ ದೊಡ್ಡ ಕೆಲಸಗಳನ್ನು ಪಾಲಿಕೆಯಿಂದ ಮಾಡಬಹುದಾಗಿದೆ. ಪಾಲಿಕೆಯ ಅಭಿವೃದ್ಧಿ ವಿಷಯದಲ್ಲಿ ಸಹಕಾರ ಸಂಘದ ಸದಸ್ಯರ ಪಾತ್ರ ಮಹತ್ವದ್ದಾಗಿದೆ. ಪ್ರತಿಯೊಬ್ಬರೂ ಕಂಪ್ಯೂಟರ್ ಜ್ಞಾನ ಪಡೆಯಬೇಕು. ಸರ್ಕಾರಿ ಸಿಬ್ಬಂದಿಯಂತೆ ಕೆಲಸ, ಕಾರ್ಯಗಳನ್ನು ಮಾಡಬೇಕು. ಸಂಬಂಧಿಸಿದ ವಿಭಾಗದ ಮುಖ್ಯಸ್ಥರ ಸಲಹೆಗಳನ್ನು ಪಡೆದು ಸಮಾಜ ಬದಲಾವಣೆ ಮಾಡಲು ನೆರವಾಗಬೇಕು’ ಎಂದು ಹೇಳಿದರು.</p>.<p>‘ಪಾಲಿಕೆಯ ವಾರ್ಡ್ಗಳ ಮೂಲಸೌಕರ್ಯಗಳ ಸಮೀಕ್ಷೆಯನ್ನು ತಳಮಟ್ಟದಲ್ಲಿ ನಡೆಸಬೇಕು. ತ್ಯಾಜ್ಯವನ್ನು ಮೂಲದಲ್ಲೇ ವಿಂಗಡಿಸಬೇಕು. ದೊಡ್ಡ ಪ್ರಮಾಣದಲ್ಲಿ ತ್ಯಾಜ್ಯ ಉತ್ಪಾದಿಸುವಲ್ಲಿ ನಿಯಮಗಳ ಪಾಲನೆ, ಒಣ ಮತ್ತು ಹಸಿ ತ್ಯಾಜ್ಯದ ಸಂಸ್ಕರಣೆ ಮಾಡಬೇಕು. ಬಳಕೆದಾರರ ಶುಲ್ಕ ಸಂಗ್ರಹಣೆಗೆ ನಾಗರಿಕರನ್ನು ಸಂವೇದನಾಶೀಲರನ್ನಾಗಿಸಬೇಕು. ಕಸ ಬಿಸಾಡಲು ಆಸ್ಪದ ನೀಡುವಂತಹ ಸ್ಥಳಗಳಲ್ಲಿ ಅವಕಾಶ ಕೊಡಬಾರದು’ ಎಂದರು</p>.<p>‘ವಸತಿ ಪ್ರದೇಶಗಳು, ಶಾಲೆಗಳು, ಮುಖ್ಯ ಮಾರುಕಟ್ಟೆಗಳು, ಬಸ್ ನಿಲ್ದಾಣಗಳು, ರೈಲು ನಿಲ್ದಾಣಗಳು, ಉದ್ಯಾನಗಳು, ಆಸ್ಪತ್ರೆಗಳು, ರೆಸ್ಟೋರೆಂಟ್ಗಳು ಮತ್ತು ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛ ಭಾರತ ಮಿಷನ್ (ನಗರ) ಮಾರ್ಗಸೂಚಿಗಳ ಪ್ರಕಾರ ಆಯಾ ಸ್ಥಳಕ್ಕೆ ಸಂಬಂಧಿಸಿದಂತೆ ಸ್ವಚ್ಛತಾ ಅಭಿಯಾನಗಳನ್ನು ಕೈಗೊಳ್ಳಬೇಕು’ ಎಂದು ತಿಳಿಸಿದರು.</p>.<p>ಸ್ವಚ್ಛ ಸರ್ವೇಕ್ಷಣ ಲೀಗ್ಗಳಲ್ಲಿ ಭಾಗವಹಿಸುವಂತೆ ಮತ್ತು ಅದರ ಬಗ್ಗೆ ಸಕಾರಾತ್ಮಕ ಹಿಮ್ಮಾಹಿತಿ ಪಡೆಯಲು ಅತಿ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರನ್ನು ಸಂಪರ್ಕಿಸಲು ಸ್ವ–ಸಹಾಯ ಗುಂಪಿನ ಸದಸ್ಯರು ಪಾಲಿಕೆಗೆ ಸಹಾಯ ಮಾಡಬೇಕು. ತ್ಯಾಜ್ಯವನ್ನು ಮೂಲದಲ್ಲೇ ಪ್ರತ್ಯೇಕಿಸುವ ಸಲುವಾಗಿ ಮನೆ ಮನೆಗೂ ತೆರಳಿ ಕಸ ವಿಂಗಡಣೆಯ ಬಗ್ಗೆ ಅರಿವು ಮೂಡಿಸಬೇಕು ಎಂದು ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಸೂಚಿಸಿದರು.</p>.<p>ಈ ಸಂದರ್ಭದಲ್ಲಿ ಸ್ವ-ಸಹಾಯ ಗುಂಪುಗಳ ಸದಸ್ಯರು ಪಾಲಿಕೆ ಅಧ್ಯಕ್ಷರು ಹಾಗೂ ಆಯುಕ್ತರನ್ನು ಸನ್ಮಾನಿಸಿದರು.</p>.<p>ಪಾಲಿಕೆಯ ಮೇಯರ್ ನರಸಮ್ಮ ನರಸಿಂಹಲು ಮಾಡಗಿರಿ, ಪಾಲಿಕೆಯ ಅಭಿವೃದ್ಧಿ ವಿಭಾಗದ ಉಪ ಆಯುಕ್ತೆ ಸಂತೋಷರಾಣಿ, ಪರಿಸರ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಜೈಪಾಲ್ ರೆಡ್ಡಿ, ಪಾಲಿಕೆಯ ಸಂಘಟನಾ ಅಧಿಕಾರಿ ಕೃಷ್ಣ ಕಟ್ಟಿಮನಿ ಹಾಜರಿದ್ದರು.</p>.<div><blockquote>ಸಾರ್ವಜನಿಕರು ಕಸ ಬಿಸಾಡುವ ಜಾಗಗಳ ಮೇಲೆ ಎಸ್ಎಜಿ ಸದಸ್ಯರು ಕಣ್ಣು ಇಡಬೇಕು. ಎರಡನೇ ಹಂತದ ಕಸ ಸಂಗ್ರಹಿಸುವ ವ್ಯವಸ್ಥೆ ಮಾಡಲು ನೆರವಾಗಬೇಕು.</blockquote><span class="attribution">-ಜುಬಿನ್ ಮೊಹಾಪಾತ್ರ ಆಯುಕ್ತ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>