ರಾಯಚೂರು: ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಅಗತ್ಯವಾದ ಶಿಸ್ತು, ಸಂಯಮ ಎನ್ಎಸ್ಎಸ್ ಶಿಬಿರದಿಂದ ದೊರೆಯಲಿದೆ ಎಂದು ನಿವೃತ್ತ ಪ್ರಾಚಾರ್ಯ ಅಲ್ಲಾಬಾಷಾ ಹೇಳಿದರು.
ಯರಮರಸ್ ಆದರ್ಶ ವಿದ್ಯಾಲಯದಲ್ಲಿ ಈಚೆಗೆ ಆಯೋಜಿಸಿದ್ದ ಎನ್ಎಸ್ಎಸ್ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಜವಾಹರನಗರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಕಾಶ ಕುಲಕರ್ಣಿ, ಮುಖ್ಯ ಶಿಕ್ಷಕ ಬಸಪ್ಪಗದ್ದಿ ಹಾಗೂ ಪ್ರಾಚಾರ್ಯ ಸದಾಶಿವಪ್ಪ ಮಾತನಾಡಿ, ಎನ್ಎಸ್ಎಸ್ ಶಿಬಿರದಿಂದ ವಿದ್ಯಾರ್ಥಿಗಳ ಜೀವನದಲ್ಲಿ ಆತ್ಮವಿಶ್ವಾಸ ಬೆಳೆಯಲಿದ್ದು, ಉತ್ತಮ ನಾಗರಿಕರಾಗಲಿದ್ದಾರೆ ಎಂದು ಹೇಳಿದರು.
ಗುಲಬರ್ಗಾ ವಿಭಾಗದ ಸಹಾಯಕ ಸಂಯೋಜನಾಧಿಕಾರಿ ಎಸ್.ಶಿವರಾಜ ಮಾತನಾಡಿದರು. ಜ್ಯೋತಿ ಹಾಗೂ ಹನುಮಂತು ಪ್ರತಿಜ್ಞಾ ವಿಧಿ ಬೋಧಿಸಿದರು.