<p><strong>ಮಸ್ಕಿ:</strong> ‘ಆರೋಗ್ಯ ಉಚಿತ ತಪಾಸಣೆ ಶಿಬಿರದಲ್ಲಿ ಭಾಗವಹಿಸಿ ದೇಹದ ಎಲ್ಲ ಸಮಸ್ಯೆಗಳಿಗೆ ಸೂಕ್ತ ಸಲಹೆ ಪಡೆದುಕೊಳ್ಳಿ’ ಎಂದು ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷರೂ ಆದ ಹಿರಿಯ ವಕೀಲ ಮಸ್ಕಿ ನಾಗರಾಜ ಸಲಹೆ ನೀಡಿದರು.</p>.<p>ಪಟ್ಟಣದ ಭ್ರಮರಾಂಬ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶನಿವಾರ ವೀರಭದ್ರಯ್ಯ ತಾತನವರ ಫೌಂಡೇಶನ್, ಸಪ್ತಗಿರಿ ಆಸ್ಪತ್ರೆ ಹಾಗೂ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ನಡೆದ ಆರೋಗ್ಯ ಉಚಿತ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವೀರಭದ್ರಯ್ಯ ತಾತನವರ ಹೆಸರು ಈ ಭಾಗದಲ್ಲಿ ಚಿರಪರಿಚಿತ. ಅವರ ಮಕ್ಕಳು ಹಾಗೂ ಕುಟುಂಬದ ಸದಸ್ಯರು ವೀರಭದ್ರಯ್ಯ ತಾತನವರ ಹೆಸರಿನಲ್ಲಿ ಫೌಂಡೇಶನ್ ಸ್ಥಾಪಿಸಿ ಶ್ರಾವಣಮಾಸದ ಈ ದಿನಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಂಡಿದ್ದು ಉತ್ತಮ ಕೆಲಸ’ ಎಂದರು.</p>.<p>ಗಚ್ಚಿನಮಠದ ವರರುದ್ರಮುನಿ ಸ್ವಾಮೀಜಿ, ಮುಖಂಡ ಮಹಾದೇವಪ್ಪಗೌಡ ಪೋಲಿಸ್ಪಾಟೀಲ, ಡಾ.ಶಿವಶರಣಪ್ಪ ಇತ್ಲಿ, ಡಾ. ಬಿ.ಎಚ್.ದಿವಟರ್, ಲಯನ್ಸ್ ಕ್ಲಬ್ ಅಧ್ಯಕ್ಷ ಆದಯ್ಯಸ್ವಾಮಿ ಕ್ಯಾತನಟ್ಟಿ, ವೀರಭದ್ರಯ್ಯ ತಾತನವರ ಫೌಂಡೇಶನ್ ಅಧ್ಯಕ್ಷ ಸಿದ್ದಲಿಂಗಯ್ಯ ಸೊಪ್ಪಿಮಠ, ಕಾರ್ಯದರ್ಶಿ ಎಂ.ಅಮರೇಶ, ಡಾ.ಮೌನೇಶ, ಸಪ್ತಗಿರಿ ಆಸ್ಪತ್ರೆ ಬೆಂಗಳೂರಿನ ವೈದ್ಯರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ:</strong> ‘ಆರೋಗ್ಯ ಉಚಿತ ತಪಾಸಣೆ ಶಿಬಿರದಲ್ಲಿ ಭಾಗವಹಿಸಿ ದೇಹದ ಎಲ್ಲ ಸಮಸ್ಯೆಗಳಿಗೆ ಸೂಕ್ತ ಸಲಹೆ ಪಡೆದುಕೊಳ್ಳಿ’ ಎಂದು ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷರೂ ಆದ ಹಿರಿಯ ವಕೀಲ ಮಸ್ಕಿ ನಾಗರಾಜ ಸಲಹೆ ನೀಡಿದರು.</p>.<p>ಪಟ್ಟಣದ ಭ್ರಮರಾಂಬ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶನಿವಾರ ವೀರಭದ್ರಯ್ಯ ತಾತನವರ ಫೌಂಡೇಶನ್, ಸಪ್ತಗಿರಿ ಆಸ್ಪತ್ರೆ ಹಾಗೂ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ನಡೆದ ಆರೋಗ್ಯ ಉಚಿತ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವೀರಭದ್ರಯ್ಯ ತಾತನವರ ಹೆಸರು ಈ ಭಾಗದಲ್ಲಿ ಚಿರಪರಿಚಿತ. ಅವರ ಮಕ್ಕಳು ಹಾಗೂ ಕುಟುಂಬದ ಸದಸ್ಯರು ವೀರಭದ್ರಯ್ಯ ತಾತನವರ ಹೆಸರಿನಲ್ಲಿ ಫೌಂಡೇಶನ್ ಸ್ಥಾಪಿಸಿ ಶ್ರಾವಣಮಾಸದ ಈ ದಿನಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಂಡಿದ್ದು ಉತ್ತಮ ಕೆಲಸ’ ಎಂದರು.</p>.<p>ಗಚ್ಚಿನಮಠದ ವರರುದ್ರಮುನಿ ಸ್ವಾಮೀಜಿ, ಮುಖಂಡ ಮಹಾದೇವಪ್ಪಗೌಡ ಪೋಲಿಸ್ಪಾಟೀಲ, ಡಾ.ಶಿವಶರಣಪ್ಪ ಇತ್ಲಿ, ಡಾ. ಬಿ.ಎಚ್.ದಿವಟರ್, ಲಯನ್ಸ್ ಕ್ಲಬ್ ಅಧ್ಯಕ್ಷ ಆದಯ್ಯಸ್ವಾಮಿ ಕ್ಯಾತನಟ್ಟಿ, ವೀರಭದ್ರಯ್ಯ ತಾತನವರ ಫೌಂಡೇಶನ್ ಅಧ್ಯಕ್ಷ ಸಿದ್ದಲಿಂಗಯ್ಯ ಸೊಪ್ಪಿಮಠ, ಕಾರ್ಯದರ್ಶಿ ಎಂ.ಅಮರೇಶ, ಡಾ.ಮೌನೇಶ, ಸಪ್ತಗಿರಿ ಆಸ್ಪತ್ರೆ ಬೆಂಗಳೂರಿನ ವೈದ್ಯರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>