<p><strong>ರಾಯಚೂರು:</strong> ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಬೇಕಿದ್ದ ಪುತ್ರನನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಲು ಬೈಕ್ನಲ್ಲಿ ತೆರಳುವಾಗ ರಸ್ತೆಗೆ ನುಗ್ಗಿದ ಎಮ್ಮೆಗೆ ಡಿಕ್ಕಿ ಹೊಡೆದಿದ್ದರಿಂದ ಶಿಕ್ಷಕ ಮೃತಪಟ್ಟಿದ್ದಾರೆ.</p>.<p>ಗಾಯಗೊಂಡಿರುವ ಪುತ್ರನನ್ನು ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಿಲ್ಲೆಯ ದೇವದುರ್ಗ ತಾಲ್ಲೂಕು ಸಮೀಪದ ಮಿಯ್ಯಾಪುರ ಕ್ರಾಸ್ನಲ್ಲಿ ಗುರುವಾರ ಈ ಘಟನೆ ನಡೆದಿದೆ.</p>.<p>ಸುಂಕೇಶ್ವರಹಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ನಾಗರೆಡ್ಡಿ (57) ಮೃತಪಟ್ಟಿದ್ದಾರೆ. ಪುತ್ರ ವಿಶ್ವನಾಥನಿಗೆ ಗಾಯಗಳಾಗಿವೆ. ದೇವದುರ್ಗ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಬೇಕಿದ್ದ ಪುತ್ರನನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಲು ಬೈಕ್ನಲ್ಲಿ ತೆರಳುವಾಗ ರಸ್ತೆಗೆ ನುಗ್ಗಿದ ಎಮ್ಮೆಗೆ ಡಿಕ್ಕಿ ಹೊಡೆದಿದ್ದರಿಂದ ಶಿಕ್ಷಕ ಮೃತಪಟ್ಟಿದ್ದಾರೆ.</p>.<p>ಗಾಯಗೊಂಡಿರುವ ಪುತ್ರನನ್ನು ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಿಲ್ಲೆಯ ದೇವದುರ್ಗ ತಾಲ್ಲೂಕು ಸಮೀಪದ ಮಿಯ್ಯಾಪುರ ಕ್ರಾಸ್ನಲ್ಲಿ ಗುರುವಾರ ಈ ಘಟನೆ ನಡೆದಿದೆ.</p>.<p>ಸುಂಕೇಶ್ವರಹಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ನಾಗರೆಡ್ಡಿ (57) ಮೃತಪಟ್ಟಿದ್ದಾರೆ. ಪುತ್ರ ವಿಶ್ವನಾಥನಿಗೆ ಗಾಯಗಳಾಗಿವೆ. ದೇವದುರ್ಗ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>