ಸುದ್ದಿ ತಿಳಿಯುತ್ತಲೇ ದೇವಸ್ಥಾನ ಟ್ರಸ್ಟ್ನ ಅಧ್ಯಕ್ಷ ಪ್ರಕಾಶ ಮಸ್ಕಿ ಸ್ಥಳೀಯ ಪೋಲಿಸರಿಗೆ ಮಾಹಿತಿ ಮಾಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಸಬ್ ಇನ್ಸ್ಪೆಕ್ಟರ್ (ಕ್ರೈಂ) ಭೀಮದಾಸ ಮತ್ತು ಪೊಲೀಸರು ಕಳ್ಳರಿಗಾಗಿ ರಾತ್ರಿ ಒಂದು ಗಂಟೆವರೆಗೆ ಹುಡುಕಾಟ ನಡೆಸಿದರೂ ಅವರು ಪತ್ತೆಯಾಗಲಿಲ್ಲ. 20 ರಿಂದ 22 ವರ್ಷದ ಇಬ್ಬರು ಹುಡುಗರು ಇದ್ದರು ಎಂದು ಕಳ್ಳರನ್ನು ಹಿಡಿಯುವ ಯತ್ನ ಮಾಡಿದ ಅಮರೇಶ ತಿಳಿಸಿದ್ದಾರೆ. ಘಟನೆ ಸ್ಥಳಕ್ಕೆ ಸರ್ಕಲ್ ಇನ್ಸ್ಪೆಕ್ಟರ್ ಬಾಚಂದ್ರ ಡಿ. ಲಕ್ಕಂ ಭೇಟಿ ನೀಡಿದ್ದು ತನಿಖೆ ಕೈಗೊಂಡಿದ್ದಾರೆ.